Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....