Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...