Homeಕರ್ನಾಟಕವಾಡಿಯಲ್ಲಿ ಬೈಕ್ ಜಾಥಾ ಉದ್ಘಾಟನೆ: ಏ.26ಕ್ಕೆ 10,000ಕ್ಕೂ ಅಧಿಕ ಸೇರಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಕರೆ

ವಾಡಿಯಲ್ಲಿ ಬೈಕ್ ಜಾಥಾ ಉದ್ಘಾಟನೆ: ಏ.26ಕ್ಕೆ 10,000ಕ್ಕೂ ಅಧಿಕ ಸೇರಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಕರೆ

- Advertisement -
- Advertisement -

ವಾಡಿ: ಬಾಬಾಸಾಹೇಬರು ಭೇಟಿ ನೀಡಿ ಕೂತಿದ್ದ ಸ್ಥಳದಲ್ಲೇ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾವನ್ನು ಅಮೃತರಾವ್ ಕೋಮಟೆ ಅವರ ಮಗ ಟೋಪಣ್ಣ ಕೋಮಟೆ ಅವರು ಏ.14ರಂದು (ಸೋಮವಾರ) ಉದ್ಘಾಟಿಸಿದ್ದಾರೆ.

ಬಾಬಾಸಾಹೇಬರ ಒಡನಾಟದಲ್ಲಿದ್ದು ಬಾಬಾಸಾಹೇಬರ ಜೊತೆಯೇ ಬೌದ್ಧ ಧಮ್ಮ ಸ್ವೀಕರಿಸಿದ ವಾಡಿಯ ಅಮೃತರಾವ್ ಕೋಮಟೆ ಅವರ ಮಗ ಟೋಪಣ್ಣ ಕೋಮಟೆ ಅವರು ಯುವ ತಂಡಕ್ಕೆ ಬಾಬಾಸಾಹೇಬರ ಬಾವುಟ ನೀಡಿ ಉದ್ಘಾಟಿಸಿ, ಶುಭ ಕೋರಿದರು.

ನಂತರ ಜಾಥಾದ ತಂಡವು ಪುರಸಭೆಯ ನೌಕರರು, ಲಾರಿ ಒಕ್ಕೂಟದ ಸಂಘದವರ ಜೊತೆ ಸಭೆಗಳನ್ನು ನಡೆಸಿ, ಏ.26ರಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವ ಕುರಿತು ತಿಳಿಸಿ, ಸಮಾವೇಶಕ್ಕೆ ಆಹ್ವಾನ ಮಾಡಿತು. ಅಂದು ದಾವಣಗೆರೆಯಲ್ಲಿ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಸೇರಲಿರುವ ಕುರಿತು ಮಾಹಿತಿ ನೀಡಿದರು.

ಅಂದು ರಾಜ್ಯದ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕರ ತಂಡಗಳ ಮಹಾಪೂರವೇ ಹರಿದು ಬರಲಿದೆ. ಹಾಗೆಯೇ ರಾಜ್ಯದ ಮತ್ತು ದೇಶದ ಜನಚಳವಳಿಗಳ ಮುಂದಾಳುಗಳು ಅಂದು ಆಗಮಿಸಲಿದ್ದು, ಕಸವುಭರಿತ ಸಾಂಸ್ಕೃತಿಕ ತಂಡಗಳಿಂದ ಕಲಾಕಹಳೆ ಮೊಳಗಲಿದೆ ಎಂದು ತಂಡವು ಹೇಳಿದೆ.

ಈ ಸಮಾವೇಶದ ಉದ್ದೇಶ ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಿಕೊಳ್ಳುವುದೇ ಆಗಿದೆ. ಕಾಂಗ್ರೆಸ್ಸಿನ ವೈಫಲ್ಯಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಅಧಿಕಾರಕ್ಕೆರಿದ ಬಿಜೆಪಿ ಭಾರತವನ್ನು ನೈತಿಕವಾಗಿ, ಆರ್ಥಿಕವಾಗಿಯೂ, ರಾಜಕೀಯವಾಗಿ ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ.  ಸಂತ-ಶರಣರ ಬೀಡಾಗಿದ್ದ ಭಾರತವನ್ನು ಜಾತಿ, ಧರ್ಮಗಳ ಹೆಸರಲ್ಲಿ ಕಚ್ಚಾಡುವ ಕುರುಕ್ಷೇತ್ರವನ್ನಾಗಿ ಪರಿವರ್ತಿಸಲಾಗಿದೆ. ಜನರ ಗಮನವನ್ನೆಲ್ಲಾ ದಿಕ್ಕುತಪ್ಪಿಸಿ ದೇಶದ ಬೃಹತ್ ಸಂಪತ್ತನ್ನು ಅದಾನಿ, ಅಂಬಾನಿಯಂತಹ ಕಾರ್ಪೊರೇಟ್ ಕುಳಗಳ ತೆಕ್ಕೆಗೆ ಅರ್ಪಿಸಲಾಗಿದೆ. ಸಂವಿಧಾನ ಮೌಲ್ಯಗಳಿಗೆ ತದ್ವಿರುದ್ದ ದಿಕ್ಕಿನಲ್ಲಿ ದೇಶವನ್ನು ಅಪಹರಿಸಿ ಕೊಂಡೊಯ್ಯಲಾಗುತ್ತಿದೆ. ಸ್ವಾತಂತ್ರ್ಯದ ಜಾಗದಲ್ಲಿ ಸರ್ವಾಧಿಕಾರ, ಸಮಾನತೆಯ ಜಾಗದಲ್ಲಿ ಬಲಾಢ್ಯರ ಅಭಿವೃದ್ಧಿ, ಸೋದರತ್ವದ ಜಾಗದಲ್ಲಿ ಸನಾತನವಾದ, ಸಾಮಾಜಿಕ ನ್ಯಾಯದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಅತಿ ಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ  ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರಕಾರಿ ಶಿಕ್ಷಣ, ಸರಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಕೆಲಸಕ್ಕೆ ಯಾವ ಭದ್ರತೆಯೂ ಇಲ್ಲವಾಗಿದೆ. ಬೆಲೆಏರಿಕೆ, ಭ್ರಷ್ಟಾಚಾರ ದುಡಿದದ್ದನ್ನೆಲ್ಲಾ ಬಾಚಿ ತಿನ್ನುತ್ತಿವೆ. ರೈತರು, ಜನಸಾಮಾನ್ಯರು ಸಾಲದ ಸುಳಿಯಲ್ಲಿ ನಲುಗುತ್ತಿದ್ದಾರೆ.  ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ. ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. ಒಟ್ಟಾರೆ ಸಂವಿಧಾನ ಅಪಾಯದಲ್ಲಿದೆ ಇದರ ರಕ್ಷಣೆಯೇ ನಮ್ಮ ಈ ಸಮಾವೇಶದ ಉದ್ದೇಶ ಎಂದು ಯುವಾಂದೋಲನ ತಂಡವು ನೆರೆದಿದ್ದ ಜನಸಮೂಹಕ್ಕೆ ಹೇಳಿದೆ.

ಸಾರಾಂಶದಲ್ಲಿ ಆಧಿಕಾರ ನಡೆಸುತ್ತಿರುವವರನ್ನು ಪ್ರಶ್ನಿಸುವ, ಬೆದರಿಸುವ, ನಿಯಂತ್ರಿಸುವ ಹಾಗೂ ಬದಲಾಯಿಸುವ ಶಕ್ತಿ ಬೀದಿಗೆ ಬಂದಾಗ ಮಾತ್ರವೇ ಪ್ರಜಾಪ್ರಭುತ್ವವನ್ನು ನಿಜವಾದ ಅರ್ಥದಲ್ಲಿ ಸುರಕ್ಷಿತಗೊಳಿಸಲು ಸಾಧ್ಯ. ಜನಸಾಮಾನ್ಯರ ಬಲ ಕುಗ್ಗಿದೊಡನೆ ಪ್ರಜಾಪ್ರಭುತ್ವ ಸತ್ವ ಕಳೆದುಕೊಳ್ಳುತ್ತದೆ. ಪ್ರತಿಕ್ರಾಂತಿ ಸವಾರಿ ಮಾಡುತ್ತದೆ. ಕಳೆದ 3 ದಶಕಗಳಲ್ಲಿ ಆದದ್ದು ಇದೇ. ನಾವು ಒಡೆದು ಹೋದೆವು. ಅವರು ನಮ್ಮ ಮೇಲೆರಿ ಕುಳಿತರು. ಆದ ಕಾರಣ ರಾಜ್ಯದಲ್ಲಿರುವ ಎಲ್ಲ ಜನಪರ ಸಂಘಟನೆಗಳು, ಜನಪರ ಮನಸ್ಸುಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೂತು ಮಾತನಾಡುತ್ತಿದ್ದೇವೆ. ಪರಸ್ಪರ ಕೈ ಕೈ ಜೋಡಿಸಿ ಕೆಲಸ ಮಾಡಲು ಶುರು ಮಾಡಿದ್ದೇವೆ. ನಮ್ಮ ನಮ್ಮದೇ ರೀತಿಯಲ್ಲಿ ಸರ್ವಾಧಿಕಾರಿ, ಷಡ್ಯಂತ್ರಕಾರಿ ಶಕ್ತಿಗಳನ್ನು ಪ್ರತಿರೋಧಿಸುತ್ತಿದ್ದೇವೆ. ಇದೊಂದು ಮಹಾಯಾನ, ನಾವು ನೀವೆಲ್ಲರೂ ಕೂಡಿ ಮುಂದ್ಸಾಗಿಸಬೇಕಾದ ನವಯಾನ. ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆಮಾರಿನ ಮಹಾಯನಕ್ಕೆ ವೇದಿಕೆಯಾಗುತ್ತಿದೆ. ನೀವೂ ಅಂದು ಜೊತೆಗಿರಿ ಎಂದು ತಂಡವು ಜನತೆಗೆ ಮನವಿ ಮಾಡಿತು.

ವಾಡಿಯಿಂದ ಪ್ರಾರಂಭವಾಗಿರುವ ಈ ನಮ್ಮ ಬೈಕ್ ಯಾನವು ಇಂದಿನಿಂದ (ಏ.14) ಏ.26ರವರೆಗೆ  ನಡೆಯಲಿದ್ದು, ಸುಮಾರು 20 ಜಿಲ್ಲೆಗಳ ಮೂಲಕ, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಸೇರಿಕೊಳ್ಳಲಿದೆ ಎಂದು ತಂಡದ ಸರೋವರ್ ಬೆಂಕಿಕೆರೆ ಹೇಳಿದ್ದಾರೆ.

ದೇಶಪ್ರೇಮಿ ಯುವ ಆಂದೋಲನವು ಜಾಥಾದ ಉದ್ದಕ್ಕೂ ವಿದ್ಯಾರ್ಥಿ ಯುವಜನರ ಸಮಸ್ಯೆಗಳು ಮತ್ತು ಸಂವಿಧಾನದ ಸಂರಕ್ಷಣೆಯಲ್ಲಿ ಯುವಜನರ ಪಾತ್ರದ ಕುರಿತು ಹಾಗೂ ಏಪ್ರಿಲ್ 26ರ ಸಮಾವೇಶದ ಪ್ರಚಾರವನ್ನು ನಡೆಸಲಿದೆ. ಏಪ್ರಿಲ್ 14ನೇ ತಾರೀಕು ಅಂಬೇಡ್ಕರ್ ಅವರು ನಮ್ಮ ರಾಜ್ಯದ ಗುಲ್ಬರ್ಗ ಜಿಲ್ಲೆಯ ಈ ವಾಡಿಗೆ ಭೇಟಿ ನೀಡಿದ ಸ್ಥಳವಾದ್ದರಿಂದ ಇಲ್ಲಿಂದಲೇ ನಮ್ಮ ಜಾಥವನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿ ಯುವಜನರು ಸೇರಿಕೊಂಡು ನಡೆಸುತ್ತಿರುವ ಈ ಜಾಥಾಕ್ಕೆ ತಮ್ಮೆಲ್ಲರ ಸಹಾಯ ಸಹಕಾರಬೇಕೆಂದು ಬಯಸುತಿದ್ದೇವೆ ಎಂದು ಅವರು ಮನವಿ ಮಾಡಿದರು.

ಈ ಜಾಥಾವು ಸುಮಾರು 20 ಬೈಕ್ ಗಳಲ್ಲಿ 12 ದಿನಗಳು ನಡೆಯಲಿದ್ದು ಸುಮಾರು 20 ಜಿಲ್ಲೆಗಳನ್ನು ಮತ್ತು ಹಲವು ತಾಲೂಕುಗಳನ್ನು ಹಾಗೂ ಊರುಗಳನ್ನು ಸುತ್ತಾಡಿಕೊಂಡು ಏಪ್ರಿಲ್ 25 ನೇ ತಾರೀಕು ದಾವಣಗೆರೆಯನ್ನು ತಲುಪಲಿದ್ದೇವೆ. ನಾವು ಹಾದು ಹೋಗುವ ಜಿಲ್ಲೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ ಊರುಗಳಲ್ಲಿ ಯುವಜನರೊಂದಿಗೆ ವಿದ್ಯಾರ್ಥಿ ಯುವಜನರ ಸಮಸ್ಯೆಗಳನ್ನು ಮತ್ತು ಸಂವಿಧಾನದ ಪ್ರಾಮುಖ್ಯತೆಗಳನ್ನು ಹಾಗೂ ಏಪ್ರಿಲ್ 26ರ ದಾವಣಗೆರೆ ಸಮಾವೇಶದ ಕುರಿತು ಚರ್ಚಿಸುತ್ತಾ ಪ್ರಸಾರ ನಡೆಸುತ್ತಾ ಸಾಧ್ಯವಾದ ಕಡೆ ಪ್ರೆಸ್ ಮೀಟ್ ನಡೆಸುತ್ತಾ, ಸಭೆಗಳನ್ನು ನಡೆಸುತ್ತಾ ಸಾಗುತ್ತವೆ ಎಂದರು.

ಜಾಥಾದ ಇನ್ನೊಬ್ಬ ಯುವ ಮುಂದಾಳು, ವಿದ್ಯಾರ್ಥಿ ನಾಯಕ ಹೇಮಂತ್ ಸಕಲೇಶ್ ಪುರ ಮಾತನಾಡಿ, ನಮ್ಮ ಜಾಥಾವು ಇಂದು ವಾಡಿಯಿಂದ ಆರಂಭಿಸಿ,  ಸೇಡಂ, ಚಿಂಚೋಳಿಗೆ ಭೇಟಿ ನೀಡಲಿದೆ. ನಾಳೆ ಅಂದರೆ ಏ.15ರಂದು ಭಾಲ್ಕಿ, ಬಸವಕಲ್ಯಾಣ, ಹುಮ್ನಬಾದ್, ಕಲಬುರ್ಗಿಗಳಲ್ಲಿ ಸಂಚರಿಸಲಿದೆ. ಏ.16ರಂದು ಕಲಬುರ್ಗಿ, ಇಂಡಿ, ವಿಜಯಪುರ, ಏ.17ರಂದು ಸಿಂದಗಿ, ಗಹಾಪುರ, ಯಾದಗಿರಿ, ಏ.18 ದೇವದುರ್ಗ, ರಾಯಚೂರು, ಏ.19ರಂದು ಮಾನ್ವಿ, ಸಿಂಧನೂರು, ಗಂಗಾವತಿ, ಏ.20ರಂದು ಗಂಗಾವತಿ, ಕೊಪ್ಪಳ, ಗದಗ, ಅಥವಾ ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಗದಗ, ಏ.21ರಂದು ಹುಬ್ಬಳ್ಳಿ, ಧಾರವಾಡ, ಮುಂಡಗೋಡ, ಏ.22ರಂದು ಶಿಗ್ಗಾಂವಿ, ಹಾವೇರಿ, ರಾಣಿಬೆನ್ನೂರು, ಶಿಕಾರಿಪುರ, ಏ.23ರಂದು ತೀರ್ಥಹಳ್ಳಿ, ಕೊಪ್ಪ, ಜೈಪುರ, ಶೃಂಗೇರಿ, ಏ.24 ಮತ್ತು 25 ಕೊನೆಯ ದಿನದಂದು ಭದ್ರಾವತಿ, ಶಿವಮೊಗ್ಗ, ಚನ್ನಗಿರಿ, ಚಿತ್ರದುರ್ಗ, ದಾವಣಗೆರೆ ಸಂಚರಿಸಲಿದೆ ಎಂದು ಹೇಮಂತ್ ಮಾಹಿತಿ ನೀಡಿದರು.

ಪುರಸಭೆಯ ನೌಕರರು ಜಾಥಾದಲ್ಲಿರುವ ಹೆಣ್ಣುಮಕ್ಕಳಿಗೆ ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

ಹಲವು ದಲಿತ -ಪ್ರಗತಿಪರ ಹೋರಾಟಗಾರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದಾರೆ.

ಉತ್ತರ ಪ್ರದೇಶ | ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ನಾಯಕ ಸೇರಿ 8 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...