Homeಕರ್ನಾಟಕವಾಡಿಯಲ್ಲಿ ಬೈಕ್ ಜಾಥಾ ಉದ್ಘಾಟನೆ: ಏ.26ಕ್ಕೆ 10,000ಕ್ಕೂ ಅಧಿಕ ಸೇರಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಕರೆ

ವಾಡಿಯಲ್ಲಿ ಬೈಕ್ ಜಾಥಾ ಉದ್ಘಾಟನೆ: ಏ.26ಕ್ಕೆ 10,000ಕ್ಕೂ ಅಧಿಕ ಸೇರಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಕರೆ

- Advertisement -
- Advertisement -

ವಾಡಿ: ಬಾಬಾಸಾಹೇಬರು ಭೇಟಿ ನೀಡಿ ಕೂತಿದ್ದ ಸ್ಥಳದಲ್ಲೇ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾವನ್ನು ಅಮೃತರಾವ್ ಕೋಮಟೆ ಅವರ ಮಗ ಟೋಪಣ್ಣ ಕೋಮಟೆ ಅವರು ಏ.14ರಂದು (ಸೋಮವಾರ) ಉದ್ಘಾಟಿಸಿದ್ದಾರೆ.

ಬಾಬಾಸಾಹೇಬರ ಒಡನಾಟದಲ್ಲಿದ್ದು ಬಾಬಾಸಾಹೇಬರ ಜೊತೆಯೇ ಬೌದ್ಧ ಧಮ್ಮ ಸ್ವೀಕರಿಸಿದ ವಾಡಿಯ ಅಮೃತರಾವ್ ಕೋಮಟೆ ಅವರ ಮಗ ಟೋಪಣ್ಣ ಕೋಮಟೆ ಅವರು ಯುವ ತಂಡಕ್ಕೆ ಬಾಬಾಸಾಹೇಬರ ಬಾವುಟ ನೀಡಿ ಉದ್ಘಾಟಿಸಿ, ಶುಭ ಕೋರಿದರು.

ನಂತರ ಜಾಥಾದ ತಂಡವು ಪುರಸಭೆಯ ನೌಕರರು, ಲಾರಿ ಒಕ್ಕೂಟದ ಸಂಘದವರ ಜೊತೆ ಸಭೆಗಳನ್ನು ನಡೆಸಿ, ಏ.26ರಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವ ಕುರಿತು ತಿಳಿಸಿ, ಸಮಾವೇಶಕ್ಕೆ ಆಹ್ವಾನ ಮಾಡಿತು. ಅಂದು ದಾವಣಗೆರೆಯಲ್ಲಿ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಸೇರಲಿರುವ ಕುರಿತು ಮಾಹಿತಿ ನೀಡಿದರು.

ಅಂದು ರಾಜ್ಯದ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕರ ತಂಡಗಳ ಮಹಾಪೂರವೇ ಹರಿದು ಬರಲಿದೆ. ಹಾಗೆಯೇ ರಾಜ್ಯದ ಮತ್ತು ದೇಶದ ಜನಚಳವಳಿಗಳ ಮುಂದಾಳುಗಳು ಅಂದು ಆಗಮಿಸಲಿದ್ದು, ಕಸವುಭರಿತ ಸಾಂಸ್ಕೃತಿಕ ತಂಡಗಳಿಂದ ಕಲಾಕಹಳೆ ಮೊಳಗಲಿದೆ ಎಂದು ತಂಡವು ಹೇಳಿದೆ.

ಈ ಸಮಾವೇಶದ ಉದ್ದೇಶ ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಿಕೊಳ್ಳುವುದೇ ಆಗಿದೆ. ಕಾಂಗ್ರೆಸ್ಸಿನ ವೈಫಲ್ಯಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಅಧಿಕಾರಕ್ಕೆರಿದ ಬಿಜೆಪಿ ಭಾರತವನ್ನು ನೈತಿಕವಾಗಿ, ಆರ್ಥಿಕವಾಗಿಯೂ, ರಾಜಕೀಯವಾಗಿ ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ.  ಸಂತ-ಶರಣರ ಬೀಡಾಗಿದ್ದ ಭಾರತವನ್ನು ಜಾತಿ, ಧರ್ಮಗಳ ಹೆಸರಲ್ಲಿ ಕಚ್ಚಾಡುವ ಕುರುಕ್ಷೇತ್ರವನ್ನಾಗಿ ಪರಿವರ್ತಿಸಲಾಗಿದೆ. ಜನರ ಗಮನವನ್ನೆಲ್ಲಾ ದಿಕ್ಕುತಪ್ಪಿಸಿ ದೇಶದ ಬೃಹತ್ ಸಂಪತ್ತನ್ನು ಅದಾನಿ, ಅಂಬಾನಿಯಂತಹ ಕಾರ್ಪೊರೇಟ್ ಕುಳಗಳ ತೆಕ್ಕೆಗೆ ಅರ್ಪಿಸಲಾಗಿದೆ. ಸಂವಿಧಾನ ಮೌಲ್ಯಗಳಿಗೆ ತದ್ವಿರುದ್ದ ದಿಕ್ಕಿನಲ್ಲಿ ದೇಶವನ್ನು ಅಪಹರಿಸಿ ಕೊಂಡೊಯ್ಯಲಾಗುತ್ತಿದೆ. ಸ್ವಾತಂತ್ರ್ಯದ ಜಾಗದಲ್ಲಿ ಸರ್ವಾಧಿಕಾರ, ಸಮಾನತೆಯ ಜಾಗದಲ್ಲಿ ಬಲಾಢ್ಯರ ಅಭಿವೃದ್ಧಿ, ಸೋದರತ್ವದ ಜಾಗದಲ್ಲಿ ಸನಾತನವಾದ, ಸಾಮಾಜಿಕ ನ್ಯಾಯದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಅತಿ ಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ  ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರಕಾರಿ ಶಿಕ್ಷಣ, ಸರಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಕೆಲಸಕ್ಕೆ ಯಾವ ಭದ್ರತೆಯೂ ಇಲ್ಲವಾಗಿದೆ. ಬೆಲೆಏರಿಕೆ, ಭ್ರಷ್ಟಾಚಾರ ದುಡಿದದ್ದನ್ನೆಲ್ಲಾ ಬಾಚಿ ತಿನ್ನುತ್ತಿವೆ. ರೈತರು, ಜನಸಾಮಾನ್ಯರು ಸಾಲದ ಸುಳಿಯಲ್ಲಿ ನಲುಗುತ್ತಿದ್ದಾರೆ.  ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ. ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. ಒಟ್ಟಾರೆ ಸಂವಿಧಾನ ಅಪಾಯದಲ್ಲಿದೆ ಇದರ ರಕ್ಷಣೆಯೇ ನಮ್ಮ ಈ ಸಮಾವೇಶದ ಉದ್ದೇಶ ಎಂದು ಯುವಾಂದೋಲನ ತಂಡವು ನೆರೆದಿದ್ದ ಜನಸಮೂಹಕ್ಕೆ ಹೇಳಿದೆ.

ಸಾರಾಂಶದಲ್ಲಿ ಆಧಿಕಾರ ನಡೆಸುತ್ತಿರುವವರನ್ನು ಪ್ರಶ್ನಿಸುವ, ಬೆದರಿಸುವ, ನಿಯಂತ್ರಿಸುವ ಹಾಗೂ ಬದಲಾಯಿಸುವ ಶಕ್ತಿ ಬೀದಿಗೆ ಬಂದಾಗ ಮಾತ್ರವೇ ಪ್ರಜಾಪ್ರಭುತ್ವವನ್ನು ನಿಜವಾದ ಅರ್ಥದಲ್ಲಿ ಸುರಕ್ಷಿತಗೊಳಿಸಲು ಸಾಧ್ಯ. ಜನಸಾಮಾನ್ಯರ ಬಲ ಕುಗ್ಗಿದೊಡನೆ ಪ್ರಜಾಪ್ರಭುತ್ವ ಸತ್ವ ಕಳೆದುಕೊಳ್ಳುತ್ತದೆ. ಪ್ರತಿಕ್ರಾಂತಿ ಸವಾರಿ ಮಾಡುತ್ತದೆ. ಕಳೆದ 3 ದಶಕಗಳಲ್ಲಿ ಆದದ್ದು ಇದೇ. ನಾವು ಒಡೆದು ಹೋದೆವು. ಅವರು ನಮ್ಮ ಮೇಲೆರಿ ಕುಳಿತರು. ಆದ ಕಾರಣ ರಾಜ್ಯದಲ್ಲಿರುವ ಎಲ್ಲ ಜನಪರ ಸಂಘಟನೆಗಳು, ಜನಪರ ಮನಸ್ಸುಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೂತು ಮಾತನಾಡುತ್ತಿದ್ದೇವೆ. ಪರಸ್ಪರ ಕೈ ಕೈ ಜೋಡಿಸಿ ಕೆಲಸ ಮಾಡಲು ಶುರು ಮಾಡಿದ್ದೇವೆ. ನಮ್ಮ ನಮ್ಮದೇ ರೀತಿಯಲ್ಲಿ ಸರ್ವಾಧಿಕಾರಿ, ಷಡ್ಯಂತ್ರಕಾರಿ ಶಕ್ತಿಗಳನ್ನು ಪ್ರತಿರೋಧಿಸುತ್ತಿದ್ದೇವೆ. ಇದೊಂದು ಮಹಾಯಾನ, ನಾವು ನೀವೆಲ್ಲರೂ ಕೂಡಿ ಮುಂದ್ಸಾಗಿಸಬೇಕಾದ ನವಯಾನ. ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆಮಾರಿನ ಮಹಾಯನಕ್ಕೆ ವೇದಿಕೆಯಾಗುತ್ತಿದೆ. ನೀವೂ ಅಂದು ಜೊತೆಗಿರಿ ಎಂದು ತಂಡವು ಜನತೆಗೆ ಮನವಿ ಮಾಡಿತು.

ವಾಡಿಯಿಂದ ಪ್ರಾರಂಭವಾಗಿರುವ ಈ ನಮ್ಮ ಬೈಕ್ ಯಾನವು ಇಂದಿನಿಂದ (ಏ.14) ಏ.26ರವರೆಗೆ  ನಡೆಯಲಿದ್ದು, ಸುಮಾರು 20 ಜಿಲ್ಲೆಗಳ ಮೂಲಕ, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಸೇರಿಕೊಳ್ಳಲಿದೆ ಎಂದು ತಂಡದ ಸರೋವರ್ ಬೆಂಕಿಕೆರೆ ಹೇಳಿದ್ದಾರೆ.

ದೇಶಪ್ರೇಮಿ ಯುವ ಆಂದೋಲನವು ಜಾಥಾದ ಉದ್ದಕ್ಕೂ ವಿದ್ಯಾರ್ಥಿ ಯುವಜನರ ಸಮಸ್ಯೆಗಳು ಮತ್ತು ಸಂವಿಧಾನದ ಸಂರಕ್ಷಣೆಯಲ್ಲಿ ಯುವಜನರ ಪಾತ್ರದ ಕುರಿತು ಹಾಗೂ ಏಪ್ರಿಲ್ 26ರ ಸಮಾವೇಶದ ಪ್ರಚಾರವನ್ನು ನಡೆಸಲಿದೆ. ಏಪ್ರಿಲ್ 14ನೇ ತಾರೀಕು ಅಂಬೇಡ್ಕರ್ ಅವರು ನಮ್ಮ ರಾಜ್ಯದ ಗುಲ್ಬರ್ಗ ಜಿಲ್ಲೆಯ ಈ ವಾಡಿಗೆ ಭೇಟಿ ನೀಡಿದ ಸ್ಥಳವಾದ್ದರಿಂದ ಇಲ್ಲಿಂದಲೇ ನಮ್ಮ ಜಾಥವನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿ ಯುವಜನರು ಸೇರಿಕೊಂಡು ನಡೆಸುತ್ತಿರುವ ಈ ಜಾಥಾಕ್ಕೆ ತಮ್ಮೆಲ್ಲರ ಸಹಾಯ ಸಹಕಾರಬೇಕೆಂದು ಬಯಸುತಿದ್ದೇವೆ ಎಂದು ಅವರು ಮನವಿ ಮಾಡಿದರು.

ಈ ಜಾಥಾವು ಸುಮಾರು 20 ಬೈಕ್ ಗಳಲ್ಲಿ 12 ದಿನಗಳು ನಡೆಯಲಿದ್ದು ಸುಮಾರು 20 ಜಿಲ್ಲೆಗಳನ್ನು ಮತ್ತು ಹಲವು ತಾಲೂಕುಗಳನ್ನು ಹಾಗೂ ಊರುಗಳನ್ನು ಸುತ್ತಾಡಿಕೊಂಡು ಏಪ್ರಿಲ್ 25 ನೇ ತಾರೀಕು ದಾವಣಗೆರೆಯನ್ನು ತಲುಪಲಿದ್ದೇವೆ. ನಾವು ಹಾದು ಹೋಗುವ ಜಿಲ್ಲೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ ಊರುಗಳಲ್ಲಿ ಯುವಜನರೊಂದಿಗೆ ವಿದ್ಯಾರ್ಥಿ ಯುವಜನರ ಸಮಸ್ಯೆಗಳನ್ನು ಮತ್ತು ಸಂವಿಧಾನದ ಪ್ರಾಮುಖ್ಯತೆಗಳನ್ನು ಹಾಗೂ ಏಪ್ರಿಲ್ 26ರ ದಾವಣಗೆರೆ ಸಮಾವೇಶದ ಕುರಿತು ಚರ್ಚಿಸುತ್ತಾ ಪ್ರಸಾರ ನಡೆಸುತ್ತಾ ಸಾಧ್ಯವಾದ ಕಡೆ ಪ್ರೆಸ್ ಮೀಟ್ ನಡೆಸುತ್ತಾ, ಸಭೆಗಳನ್ನು ನಡೆಸುತ್ತಾ ಸಾಗುತ್ತವೆ ಎಂದರು.

ಜಾಥಾದ ಇನ್ನೊಬ್ಬ ಯುವ ಮುಂದಾಳು, ವಿದ್ಯಾರ್ಥಿ ನಾಯಕ ಹೇಮಂತ್ ಸಕಲೇಶ್ ಪುರ ಮಾತನಾಡಿ, ನಮ್ಮ ಜಾಥಾವು ಇಂದು ವಾಡಿಯಿಂದ ಆರಂಭಿಸಿ,  ಸೇಡಂ, ಚಿಂಚೋಳಿಗೆ ಭೇಟಿ ನೀಡಲಿದೆ. ನಾಳೆ ಅಂದರೆ ಏ.15ರಂದು ಭಾಲ್ಕಿ, ಬಸವಕಲ್ಯಾಣ, ಹುಮ್ನಬಾದ್, ಕಲಬುರ್ಗಿಗಳಲ್ಲಿ ಸಂಚರಿಸಲಿದೆ. ಏ.16ರಂದು ಕಲಬುರ್ಗಿ, ಇಂಡಿ, ವಿಜಯಪುರ, ಏ.17ರಂದು ಸಿಂದಗಿ, ಗಹಾಪುರ, ಯಾದಗಿರಿ, ಏ.18 ದೇವದುರ್ಗ, ರಾಯಚೂರು, ಏ.19ರಂದು ಮಾನ್ವಿ, ಸಿಂಧನೂರು, ಗಂಗಾವತಿ, ಏ.20ರಂದು ಗಂಗಾವತಿ, ಕೊಪ್ಪಳ, ಗದಗ, ಅಥವಾ ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಗದಗ, ಏ.21ರಂದು ಹುಬ್ಬಳ್ಳಿ, ಧಾರವಾಡ, ಮುಂಡಗೋಡ, ಏ.22ರಂದು ಶಿಗ್ಗಾಂವಿ, ಹಾವೇರಿ, ರಾಣಿಬೆನ್ನೂರು, ಶಿಕಾರಿಪುರ, ಏ.23ರಂದು ತೀರ್ಥಹಳ್ಳಿ, ಕೊಪ್ಪ, ಜೈಪುರ, ಶೃಂಗೇರಿ, ಏ.24 ಮತ್ತು 25 ಕೊನೆಯ ದಿನದಂದು ಭದ್ರಾವತಿ, ಶಿವಮೊಗ್ಗ, ಚನ್ನಗಿರಿ, ಚಿತ್ರದುರ್ಗ, ದಾವಣಗೆರೆ ಸಂಚರಿಸಲಿದೆ ಎಂದು ಹೇಮಂತ್ ಮಾಹಿತಿ ನೀಡಿದರು.

ಪುರಸಭೆಯ ನೌಕರರು ಜಾಥಾದಲ್ಲಿರುವ ಹೆಣ್ಣುಮಕ್ಕಳಿಗೆ ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

ಹಲವು ದಲಿತ -ಪ್ರಗತಿಪರ ಹೋರಾಟಗಾರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದಾರೆ.

ಉತ್ತರ ಪ್ರದೇಶ | ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ನಾಯಕ ಸೇರಿ 8 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...