Homeಕರ್ನಾಟಕಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

- Advertisement -
- Advertisement -

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ನಿಷೇಧವನ್ನು ವಿರೋಧಿಸಿರುವ ಮಹಿಳಾ ಪ್ರಯಾಣಿಕರು, ಬೈಕ್‌ ಟ್ಯಾಕ್ಸಿ ಸುರಕ್ಷಿತವಾಗಿದ್ದು, ಅನುಕೂಲಕರ ಮತ್ತು ಕೈಗೆಟುಕುವ ಪ್ರಯಾಣ ವಿಧಾನವಾಗಿದೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಬೈಕ್ ಟ್ಯಾಕ್ಸಿ ನಿಷೇಧವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ದ ಓಲಾ, ಊಬರ್ ಮತ್ತು ರ‍್ಯಾಪಿಡೋ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ಬುಧವಾರ (ಜು.2) ವಿಚಾರಣೆ ನಡೆಸಿದೆ.

ರಾಜ್ಯ ಸರ್ಕಾರವು ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಅಡಿಯಲ್ಲಿ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು, “ಅರ್ಜಿದಾರರು (ಓಲಾ, ಊಬರ್, ರ‍್ಯಾಪಿಡೋ) ಬೈಕ್ ಟ್ಯಾಕ್ಸಿ ಸೇವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಕಳೆದ ಏಪ್ರಿಲ್‌ನಲ್ಲಿ ತೀರ್ಪು ನೀಡಿತ್ತು.

ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್‌ಗಳನ್ನು ನೀಡಲು ರಾಜ್ಯದ ಸಾರಿಗೆ ಇಲಾಖೆಗೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಪೀಠ, ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆರು ವಾರಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ಈ ದಿನಾಂಕವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು. ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಓಲಾ, ಊಬರ್ ಮತ್ತು ರ‍್ಯಾಪಿಡೋ ಆರ್ಜಿಯಲ್ಲಿ ಮಹಿಳಾ ಪ್ರಯಾಣಿಕರ ಪರ ಮಧ್ಯ ಪ್ರವೇಶಿಸಿದ ಹಿರಿಯ ವಕೀಲೆ ಜಯನಾ ಕೊಠಾರಿ, ಬೈಕ್ ಟ್ಯಾಕ್ಸಿ ಅಸುರಕ್ಷಿತ ಎಂಬ ಕಾರಣ ಕೊಟ್ಟು ರದ್ದುಗೊಳಿಸಲಾಗಿದೆ. ಆದರೆ, ದೈನಂದಿನ ಪ್ರಯಾಣಿಕರಾಗಿರುವ ನಮಗೆ (ಮಹಿಳೆಯರಿಗೆ) ಬೈಕ್ ಟ್ಯಾಕ್ಸಿಗಳು ಸುರಕ್ಷಿತ, ಕೈಗೆಟುಕುವ ಮತ್ತು ಅನುಕೂಲಕರ ಸೇವೆಯನ್ನು ಒದಗಿಸುತ್ತಿತ್ತು ಎಂದಿದ್ದಾರೆ.

ಮಹಿಳೆಯರಿಗೆ ಈ ಸೇವೆ ಬೇಕಾಗಿದ್ದು, ಅದನ್ನು ನಿರ್ಬಂಧಿಸುವುದಕ್ಕೂ ಮುನ್ನ ಮಹಿಳೆಯರ ವಾದ ಆಲಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇತರ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಬಂಧಿಸಿದಂತೆ ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಕೊಠಾರಿ, “ಇತರ ರಾಜ್ಯಗಳಲ್ಲಿ ಬೈಕರ್‌ಗಳಿಗೆ ಪೂರ್ವ ಅರ್ಹತಾ ಪರೀಕ್ಷೆ ಇರುತ್ತದೆ. ಹಿನ್ನೆಲೆ ಪರಿಶೀಲನೆಗಳನ್ನು ಮಾಡಲಾಗುತ್ತದೆ. ಪಶ್ಚಿಮ ಬಂಗಾಳವು ರಾತ್ರಿಯಲ್ಲಿ ಸೀಮಿತ ಬೈಕ್ ಟ್ಯಾಕ್ಸಿ ಓಡಾಟವನ್ನು ಹೊಂದಿದೆ. ಅನೇಕ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸವಾರರು ಮಹಿಳೆಯರು ಎಂದು ಒತ್ತಿ ಹೇಳಿದ್ದಾರೆ. ಎಲ್ಲಾ ಸೇವಾ ನಿಯಮಗಳು ಮತ್ತು ಮಾರ್ಗಸೂಚಿಗಳು ಬೈಕ್ ಟ್ಯಾಕ್ಸಿ ಹೆಚ್ಚು ಸುರಕ್ಷಿತ ಪ್ರಯಾಣ ವಿಧಾನವಾಗಿದೆ ಎಂದು ತೋರಿಸಿದೆ ಎಂದಿದ್ದಾರೆ.

ರಾಜಸ್ಥಾನದ ಬೈಕ್ ಟ್ಯಾಕ್ಸಿ ನೀತಿಯನ್ನು ಉಲ್ಲೇಖಿಸಿದ ಕೊಠಾರಿ, ಆ ನೀತಿಯಡಿಯಲ್ಲಿ ಚಾಲಕರ ಪೂರ್ವವರ್ತಿಗಳನ್ನು ಸೇವಾ ಪೂರೈಕೆದಾರರು ಪರಿಶೀಲಿಸಬೇಕು ಮತ್ತು ಪೊಲೀಸ್ ಪರಿಶೀಲನೆ ಮಾಡಲಾಗುತ್ತದೆ. ಅಪ್ರಾಪ್ತ ವಯಸ್ಕರಿಗೆ ಬೈಕ್ ಓಡಿಸಲು ಅವಕಾಶವಿಲ್ಲ. ಸರ್ಕಾರ ಬೈಕ್ ಟ್ಯಾಕ್ಸಿಯ ದರಗಳನ್ನು ನಿಗದಿ ಮಾಡಿದರೂ, ಅದು ಕಡಿಮೆ ಮತ್ತು ಅತ್ಯಂತ ಕೈಗೆಟುಕುವ ಮಟ್ಟದಲ್ಲಿದೆ ಎಂದು ವಿವರಿಸಿದ್ದಾರೆ.

ಬೈಕ್ ಟ್ಯಾಕ್ಸಿಗಳನ್ನು ಪರಿಶೀಲಿಸುವ ಮತ್ತು ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಶಿಫಾರಸು ಮಾಡುವ ಸ್ವತಂತ್ರ ಸಂಸ್ಥೆಗಳ ಹಲವಾರು ರಾಷ್ಟ್ರೀಯ ವರದಿಗಳಿವೆ. ಇದು ಮಹಿಳೆಯರಿಗೆ ಸುರಕ್ಷಿತ ಮತ್ತು ಹೆಚ್ಚು ಕೈಗೆಟುಕುವಂತಿದೆ ಎಂದು ಹೇಳಿದೆ. ಬೈಕ್ ಟ್ಯಾಕ್ಸಿ ಅತ್ಯಂತ ಅನುಕೂಲಕರ ವಿಧಾನವಾಗಿದೆ ಎಂದು ತೋರಿಸುವ ಕೆಪಿಎಂಜಿ ವರದಿಯಿದೆ. ದರಗಳನ್ನು ನಿಗದಿಪಡಿಸಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲನೆಯಲ್ಲಿ ಇದ್ದಾಗ ಕೈಗೆಟಕುವಂತಿತ್ತು ಎಂದು ಕೊಠಾರಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕೆಪಿಎಂಜಿ ಸಿದ್ಧಪಡಿಸಿದ ವರದಿಯ ಆಧಾರದ ಕುರಿತ ನ್ಯಾಯಾಲಯದ ಪ್ರಶ್ನೆಗೆ, “ಅವರು (ಕೆಪಿಎಂಜಿ) ಕಾರ್ಯಸಾಧ್ಯತಾ ಅಧ್ಯಯನವನ್ನು ಮಾಡಿದ್ದಾರೆ. ವರದಿಯು ಬೈಕ್ ಟ್ಯಾಕ್ಸಿ ಹೆಚ್ಚು ಕೈಗೆಟುಕುವ, ಅನುಕೂಲಕರ ಮತ್ತು ಸುರಕ್ಷಿತವಾಗಿದೆ ಎಂದು ಹೇಳುತ್ತದೆ. ಇತರ ಸಾರಿಗೆ ವಿಧಾನಗಳಿಗಿಂತ ಬೈಕ್ ಟ್ಯಾಕ್ಸಿ ಸುರಕ್ಷಿತವಾಗಿದೆ ಎಂದು ಡೇಟಾ ತೋರಿಸುತ್ತದೆ. ನಮ್ಮ ಮನವಿ ಕೈಗೆಟುಕುವಿಕೆ, ಅನುಕೂಲತೆ ಮತ್ತು ಮಹಿಳೆಯರಿಗೆ ಸುರಕ್ಷತೆ. ಇದು ಉತ್ತಮ ಆಯ್ಕೆಯಾಗಿದೆ ಎಂದು ಕೊಠಾರಿ ತಿಳಿಸಿದ್ದಾರೆ.

ಇದೇ ವೇಳೆ ಊಬರ್ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ, ಈ ಹಿಂದೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದ ತಮಿಳುನಾಡಿನಂತಹ ರಾಜ್ಯಗಳು ಈಗ ಅದಕ್ಕೆ ಅನುಮತಿ ನೀಡಿವೆ. ಕೇರಳ ಕೂಡ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿಸಿದೆ ವಾದಿಸಿದ್ದಾರೆ.

ಬೆಂಗಳೂರಿನ ಮೆಟ್ರೋ ಮಾರ್ಗಗಳ ಬಗ್ಗೆ ಉಲ್ಲೇಖಿಸಿದ ಹೊಳ್ಳ, “ಮೆಟ್ರೋ ಮಾರ್ಗಗಳನ್ನು ನೋಡಿ, ಕೇವಲ ಎರಡು ಮಾರ್ಗಗಳಿವೆ. ಅದು ಕೊನೆಯ ಮೈಲಿ ಸಂಪರ್ಕ ನೀಡುತ್ತಿಲ್ಲ. ಜಪಾನ್ ಮುಂತಾದ ಸ್ಥಳಗಳು ಬಹು ಮೆಟ್ರೋ ಮಾರ್ಗಗಳನ್ನು ಹೊಂದಿವೆ. ದಯವಿಟ್ಟು ಬೆಂಗಳೂರಿನ ವಿಸ್ತರಣೆಯನ್ನು ನೋಡಿ. ಹೆಚ್ಚಿನ ಮೆಟ್ರೋ ಮಾರ್ಗಗಳಿದ್ದರೂ ಜನರಿಗೆ ಬೇಕಾದ ಸೇವೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನ ಬಾಲ್ಯದಲ್ಲಿ ಬೆಂಗಳೂರಿನ ಒಂದು ತುದಿಯಿಂದ ಇನ್ನೊಂದು ತುದಿಗೆ 20 ನಿಮಿಷಗಳಲ್ಲಿ ಪ್ರಯಾಣಿಸಬಹುದಿತ್ತು. ಈಗ ಗರಿಷ್ಠ ಸುಮಾರು 3 ರಿಂದ 4 ಗಂಟೆಗಳು ಬೇಕಾಗುತ್ತದೆ. ಒಬ್ಬ ಪ್ರಯಾಣಿಕ 3 ರಿಂದ 4 ಗಂಟೆಗಳು ಟ್ರಾಫಿಕ್‌ನಲ್ಲಿ ಕಳೆದರೆ ಏನಾಗುತ್ತದೆ. ಅವರಿಗೆ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ ಎಂದು ಹೊಳ್ಳ ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಬಾರದು ಮತ್ತು ಅದರ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಶಿಫಾರಸು ಮಾಡಿದ 2019ರ ತಜ್ಞರ ಸಮಿತಿಯ ವರದಿಯಲ್ಲಿ ಪರಿಗಣಿಸಲಾದ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಸ್ತಾಪಿಸಿದ ಹೊಳ್ಳ, ಬೈಕ್‌ ಟ್ಯಾಕ್ಸಿಯನ್ನು ನಿರ್ಬಂಧಿಸಲು ಮಹಿಳಾ ಸುರಕ್ಷತೆ ವಿಷಯವನ್ನು ಮುಂದೆ ತರಲಾಗಿದೆ. ಇಲ್ಲಿ ಪ್ರಬಲ ಆಟೋ ಯೂನಿಯನ್‌ಗಳು ಇವೆ ಎಂದಿದ್ದಾರೆ.

ಬೈಕ್ ಸವಾರರ ವಿಷಯದಲ್ಲಿ ಸರ್ಕಾರ ನೋಂದಣಿಯನ್ನು ನಿರಾಕರಿಸುವಂತಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

“ಇಂದು ಎಲ್ಲರೂ ಟ್ಯಾಕ್ಸಿಗಾಗಿ ಊಬರ್‌ ಅನ್ನು ಅವಲಂಬಿಸುತ್ತಿದ್ದಾರೆ. ಸೇವಾದಾರರಿಗೆ ಕೆಲವೇ ಕೆಲವು ನಿಮಿಷಗಳಲ್ಲಿ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಾಗುತ್ತಿದೆ. ಇಲ್ಲಿ ವೈಯಕ್ತಿವಾಗಿ ಚಾಲಕರು ಸೇವೆ ನೀಡುತ್ತಾರೆ. ಕಂಪನಿಗಳು ಕೇವಲ ಸೇವಾ ಪೂರೈಕೆದಾರರು ಮಾತ್ರ. ಆದ್ದರಿಂದ ಚಾಲಕರನ್ನು ತಡೆಯಲು ಸಾಧ್ಯವಿಲ್ಲ. ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ ನಂತರ ಸಂಚಾರ ದಟ್ಟಣೆ ಶೇಕಡ 18ರಷ್ಟು ಹೆಚ್ಚಳವಾಗಿದೆ” ಎಂದ ಹೊಳ್ಳ ತಮ್ಮ ವಾದ ಮುಕ್ತಾಯಗೊಳಿಸಿದ್ದಾರೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಹೊಳ್ಳ, “ಬೈಕ್ ಟ್ಯಾಕ್ಸಿಗಳು ಇಲ್ಲದ ಕಾರಣ ಜನರು ತಮ್ಮ ಕಾರುಗಳನ್ನು ಬಳಸಬೇಕಾಗುತ್ತದೆ. ಲಂಡನ್‌ನಲ್ಲಿ ಪಾರ್ಕಿಂಗ್ ಸ್ಥಳವಿಲ್ಲದ ಕಾರಣ ಜನರು ಸ್ವಂತ ಕಾರು ಹೊಂದಲು ಸಾಧ್ಯವಿಲ್ಲ. ಅಲ್ಲಿ ಎಲ್ಲರೂ ಊಬರ್ ಬಳಸುತ್ತಾರೆ ಎಂದು ತಿಳಿಸಿದ್ದಾರೆ.

Courtesy : livelaw.in

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...