Homeಕರ್ನಾಟಕಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

- Advertisement -
- Advertisement -

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ನಿಷೇಧವನ್ನು ವಿರೋಧಿಸಿರುವ ಮಹಿಳಾ ಪ್ರಯಾಣಿಕರು, ಬೈಕ್‌ ಟ್ಯಾಕ್ಸಿ ಸುರಕ್ಷಿತವಾಗಿದ್ದು, ಅನುಕೂಲಕರ ಮತ್ತು ಕೈಗೆಟುಕುವ ಪ್ರಯಾಣ ವಿಧಾನವಾಗಿದೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಬೈಕ್ ಟ್ಯಾಕ್ಸಿ ನಿಷೇಧವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ದ ಓಲಾ, ಊಬರ್ ಮತ್ತು ರ‍್ಯಾಪಿಡೋ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ಬುಧವಾರ (ಜು.2) ವಿಚಾರಣೆ ನಡೆಸಿದೆ.

ರಾಜ್ಯ ಸರ್ಕಾರವು ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಅಡಿಯಲ್ಲಿ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು, “ಅರ್ಜಿದಾರರು (ಓಲಾ, ಊಬರ್, ರ‍್ಯಾಪಿಡೋ) ಬೈಕ್ ಟ್ಯಾಕ್ಸಿ ಸೇವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಕಳೆದ ಏಪ್ರಿಲ್‌ನಲ್ಲಿ ತೀರ್ಪು ನೀಡಿತ್ತು.

ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್‌ಗಳನ್ನು ನೀಡಲು ರಾಜ್ಯದ ಸಾರಿಗೆ ಇಲಾಖೆಗೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಪೀಠ, ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆರು ವಾರಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ಈ ದಿನಾಂಕವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು. ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಓಲಾ, ಊಬರ್ ಮತ್ತು ರ‍್ಯಾಪಿಡೋ ಆರ್ಜಿಯಲ್ಲಿ ಮಹಿಳಾ ಪ್ರಯಾಣಿಕರ ಪರ ಮಧ್ಯ ಪ್ರವೇಶಿಸಿದ ಹಿರಿಯ ವಕೀಲೆ ಜಯನಾ ಕೊಠಾರಿ, ಬೈಕ್ ಟ್ಯಾಕ್ಸಿ ಅಸುರಕ್ಷಿತ ಎಂಬ ಕಾರಣ ಕೊಟ್ಟು ರದ್ದುಗೊಳಿಸಲಾಗಿದೆ. ಆದರೆ, ದೈನಂದಿನ ಪ್ರಯಾಣಿಕರಾಗಿರುವ ನಮಗೆ (ಮಹಿಳೆಯರಿಗೆ) ಬೈಕ್ ಟ್ಯಾಕ್ಸಿಗಳು ಸುರಕ್ಷಿತ, ಕೈಗೆಟುಕುವ ಮತ್ತು ಅನುಕೂಲಕರ ಸೇವೆಯನ್ನು ಒದಗಿಸುತ್ತಿತ್ತು ಎಂದಿದ್ದಾರೆ.

ಮಹಿಳೆಯರಿಗೆ ಈ ಸೇವೆ ಬೇಕಾಗಿದ್ದು, ಅದನ್ನು ನಿರ್ಬಂಧಿಸುವುದಕ್ಕೂ ಮುನ್ನ ಮಹಿಳೆಯರ ವಾದ ಆಲಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇತರ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಬಂಧಿಸಿದಂತೆ ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಕೊಠಾರಿ, “ಇತರ ರಾಜ್ಯಗಳಲ್ಲಿ ಬೈಕರ್‌ಗಳಿಗೆ ಪೂರ್ವ ಅರ್ಹತಾ ಪರೀಕ್ಷೆ ಇರುತ್ತದೆ. ಹಿನ್ನೆಲೆ ಪರಿಶೀಲನೆಗಳನ್ನು ಮಾಡಲಾಗುತ್ತದೆ. ಪಶ್ಚಿಮ ಬಂಗಾಳವು ರಾತ್ರಿಯಲ್ಲಿ ಸೀಮಿತ ಬೈಕ್ ಟ್ಯಾಕ್ಸಿ ಓಡಾಟವನ್ನು ಹೊಂದಿದೆ. ಅನೇಕ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸವಾರರು ಮಹಿಳೆಯರು ಎಂದು ಒತ್ತಿ ಹೇಳಿದ್ದಾರೆ. ಎಲ್ಲಾ ಸೇವಾ ನಿಯಮಗಳು ಮತ್ತು ಮಾರ್ಗಸೂಚಿಗಳು ಬೈಕ್ ಟ್ಯಾಕ್ಸಿ ಹೆಚ್ಚು ಸುರಕ್ಷಿತ ಪ್ರಯಾಣ ವಿಧಾನವಾಗಿದೆ ಎಂದು ತೋರಿಸಿದೆ ಎಂದಿದ್ದಾರೆ.

ರಾಜಸ್ಥಾನದ ಬೈಕ್ ಟ್ಯಾಕ್ಸಿ ನೀತಿಯನ್ನು ಉಲ್ಲೇಖಿಸಿದ ಕೊಠಾರಿ, ಆ ನೀತಿಯಡಿಯಲ್ಲಿ ಚಾಲಕರ ಪೂರ್ವವರ್ತಿಗಳನ್ನು ಸೇವಾ ಪೂರೈಕೆದಾರರು ಪರಿಶೀಲಿಸಬೇಕು ಮತ್ತು ಪೊಲೀಸ್ ಪರಿಶೀಲನೆ ಮಾಡಲಾಗುತ್ತದೆ. ಅಪ್ರಾಪ್ತ ವಯಸ್ಕರಿಗೆ ಬೈಕ್ ಓಡಿಸಲು ಅವಕಾಶವಿಲ್ಲ. ಸರ್ಕಾರ ಬೈಕ್ ಟ್ಯಾಕ್ಸಿಯ ದರಗಳನ್ನು ನಿಗದಿ ಮಾಡಿದರೂ, ಅದು ಕಡಿಮೆ ಮತ್ತು ಅತ್ಯಂತ ಕೈಗೆಟುಕುವ ಮಟ್ಟದಲ್ಲಿದೆ ಎಂದು ವಿವರಿಸಿದ್ದಾರೆ.

ಬೈಕ್ ಟ್ಯಾಕ್ಸಿಗಳನ್ನು ಪರಿಶೀಲಿಸುವ ಮತ್ತು ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಶಿಫಾರಸು ಮಾಡುವ ಸ್ವತಂತ್ರ ಸಂಸ್ಥೆಗಳ ಹಲವಾರು ರಾಷ್ಟ್ರೀಯ ವರದಿಗಳಿವೆ. ಇದು ಮಹಿಳೆಯರಿಗೆ ಸುರಕ್ಷಿತ ಮತ್ತು ಹೆಚ್ಚು ಕೈಗೆಟುಕುವಂತಿದೆ ಎಂದು ಹೇಳಿದೆ. ಬೈಕ್ ಟ್ಯಾಕ್ಸಿ ಅತ್ಯಂತ ಅನುಕೂಲಕರ ವಿಧಾನವಾಗಿದೆ ಎಂದು ತೋರಿಸುವ ಕೆಪಿಎಂಜಿ ವರದಿಯಿದೆ. ದರಗಳನ್ನು ನಿಗದಿಪಡಿಸಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲನೆಯಲ್ಲಿ ಇದ್ದಾಗ ಕೈಗೆಟಕುವಂತಿತ್ತು ಎಂದು ಕೊಠಾರಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕೆಪಿಎಂಜಿ ಸಿದ್ಧಪಡಿಸಿದ ವರದಿಯ ಆಧಾರದ ಕುರಿತ ನ್ಯಾಯಾಲಯದ ಪ್ರಶ್ನೆಗೆ, “ಅವರು (ಕೆಪಿಎಂಜಿ) ಕಾರ್ಯಸಾಧ್ಯತಾ ಅಧ್ಯಯನವನ್ನು ಮಾಡಿದ್ದಾರೆ. ವರದಿಯು ಬೈಕ್ ಟ್ಯಾಕ್ಸಿ ಹೆಚ್ಚು ಕೈಗೆಟುಕುವ, ಅನುಕೂಲಕರ ಮತ್ತು ಸುರಕ್ಷಿತವಾಗಿದೆ ಎಂದು ಹೇಳುತ್ತದೆ. ಇತರ ಸಾರಿಗೆ ವಿಧಾನಗಳಿಗಿಂತ ಬೈಕ್ ಟ್ಯಾಕ್ಸಿ ಸುರಕ್ಷಿತವಾಗಿದೆ ಎಂದು ಡೇಟಾ ತೋರಿಸುತ್ತದೆ. ನಮ್ಮ ಮನವಿ ಕೈಗೆಟುಕುವಿಕೆ, ಅನುಕೂಲತೆ ಮತ್ತು ಮಹಿಳೆಯರಿಗೆ ಸುರಕ್ಷತೆ. ಇದು ಉತ್ತಮ ಆಯ್ಕೆಯಾಗಿದೆ ಎಂದು ಕೊಠಾರಿ ತಿಳಿಸಿದ್ದಾರೆ.

ಇದೇ ವೇಳೆ ಊಬರ್ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ, ಈ ಹಿಂದೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದ ತಮಿಳುನಾಡಿನಂತಹ ರಾಜ್ಯಗಳು ಈಗ ಅದಕ್ಕೆ ಅನುಮತಿ ನೀಡಿವೆ. ಕೇರಳ ಕೂಡ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿಸಿದೆ ವಾದಿಸಿದ್ದಾರೆ.

ಬೆಂಗಳೂರಿನ ಮೆಟ್ರೋ ಮಾರ್ಗಗಳ ಬಗ್ಗೆ ಉಲ್ಲೇಖಿಸಿದ ಹೊಳ್ಳ, “ಮೆಟ್ರೋ ಮಾರ್ಗಗಳನ್ನು ನೋಡಿ, ಕೇವಲ ಎರಡು ಮಾರ್ಗಗಳಿವೆ. ಅದು ಕೊನೆಯ ಮೈಲಿ ಸಂಪರ್ಕ ನೀಡುತ್ತಿಲ್ಲ. ಜಪಾನ್ ಮುಂತಾದ ಸ್ಥಳಗಳು ಬಹು ಮೆಟ್ರೋ ಮಾರ್ಗಗಳನ್ನು ಹೊಂದಿವೆ. ದಯವಿಟ್ಟು ಬೆಂಗಳೂರಿನ ವಿಸ್ತರಣೆಯನ್ನು ನೋಡಿ. ಹೆಚ್ಚಿನ ಮೆಟ್ರೋ ಮಾರ್ಗಗಳಿದ್ದರೂ ಜನರಿಗೆ ಬೇಕಾದ ಸೇವೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನ ಬಾಲ್ಯದಲ್ಲಿ ಬೆಂಗಳೂರಿನ ಒಂದು ತುದಿಯಿಂದ ಇನ್ನೊಂದು ತುದಿಗೆ 20 ನಿಮಿಷಗಳಲ್ಲಿ ಪ್ರಯಾಣಿಸಬಹುದಿತ್ತು. ಈಗ ಗರಿಷ್ಠ ಸುಮಾರು 3 ರಿಂದ 4 ಗಂಟೆಗಳು ಬೇಕಾಗುತ್ತದೆ. ಒಬ್ಬ ಪ್ರಯಾಣಿಕ 3 ರಿಂದ 4 ಗಂಟೆಗಳು ಟ್ರಾಫಿಕ್‌ನಲ್ಲಿ ಕಳೆದರೆ ಏನಾಗುತ್ತದೆ. ಅವರಿಗೆ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ ಎಂದು ಹೊಳ್ಳ ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಬಾರದು ಮತ್ತು ಅದರ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಶಿಫಾರಸು ಮಾಡಿದ 2019ರ ತಜ್ಞರ ಸಮಿತಿಯ ವರದಿಯಲ್ಲಿ ಪರಿಗಣಿಸಲಾದ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಸ್ತಾಪಿಸಿದ ಹೊಳ್ಳ, ಬೈಕ್‌ ಟ್ಯಾಕ್ಸಿಯನ್ನು ನಿರ್ಬಂಧಿಸಲು ಮಹಿಳಾ ಸುರಕ್ಷತೆ ವಿಷಯವನ್ನು ಮುಂದೆ ತರಲಾಗಿದೆ. ಇಲ್ಲಿ ಪ್ರಬಲ ಆಟೋ ಯೂನಿಯನ್‌ಗಳು ಇವೆ ಎಂದಿದ್ದಾರೆ.

ಬೈಕ್ ಸವಾರರ ವಿಷಯದಲ್ಲಿ ಸರ್ಕಾರ ನೋಂದಣಿಯನ್ನು ನಿರಾಕರಿಸುವಂತಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

“ಇಂದು ಎಲ್ಲರೂ ಟ್ಯಾಕ್ಸಿಗಾಗಿ ಊಬರ್‌ ಅನ್ನು ಅವಲಂಬಿಸುತ್ತಿದ್ದಾರೆ. ಸೇವಾದಾರರಿಗೆ ಕೆಲವೇ ಕೆಲವು ನಿಮಿಷಗಳಲ್ಲಿ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಾಗುತ್ತಿದೆ. ಇಲ್ಲಿ ವೈಯಕ್ತಿವಾಗಿ ಚಾಲಕರು ಸೇವೆ ನೀಡುತ್ತಾರೆ. ಕಂಪನಿಗಳು ಕೇವಲ ಸೇವಾ ಪೂರೈಕೆದಾರರು ಮಾತ್ರ. ಆದ್ದರಿಂದ ಚಾಲಕರನ್ನು ತಡೆಯಲು ಸಾಧ್ಯವಿಲ್ಲ. ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ ನಂತರ ಸಂಚಾರ ದಟ್ಟಣೆ ಶೇಕಡ 18ರಷ್ಟು ಹೆಚ್ಚಳವಾಗಿದೆ” ಎಂದ ಹೊಳ್ಳ ತಮ್ಮ ವಾದ ಮುಕ್ತಾಯಗೊಳಿಸಿದ್ದಾರೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಹೊಳ್ಳ, “ಬೈಕ್ ಟ್ಯಾಕ್ಸಿಗಳು ಇಲ್ಲದ ಕಾರಣ ಜನರು ತಮ್ಮ ಕಾರುಗಳನ್ನು ಬಳಸಬೇಕಾಗುತ್ತದೆ. ಲಂಡನ್‌ನಲ್ಲಿ ಪಾರ್ಕಿಂಗ್ ಸ್ಥಳವಿಲ್ಲದ ಕಾರಣ ಜನರು ಸ್ವಂತ ಕಾರು ಹೊಂದಲು ಸಾಧ್ಯವಿಲ್ಲ. ಅಲ್ಲಿ ಎಲ್ಲರೂ ಊಬರ್ ಬಳಸುತ್ತಾರೆ ಎಂದು ತಿಳಿಸಿದ್ದಾರೆ.

Courtesy : livelaw.in

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...