Homeಕರ್ನಾಟಕಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

- Advertisement -
- Advertisement -

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ನಿಷೇಧವನ್ನು ವಿರೋಧಿಸಿರುವ ಮಹಿಳಾ ಪ್ರಯಾಣಿಕರು, ಬೈಕ್‌ ಟ್ಯಾಕ್ಸಿ ಸುರಕ್ಷಿತವಾಗಿದ್ದು, ಅನುಕೂಲಕರ ಮತ್ತು ಕೈಗೆಟುಕುವ ಪ್ರಯಾಣ ವಿಧಾನವಾಗಿದೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಬೈಕ್ ಟ್ಯಾಕ್ಸಿ ನಿಷೇಧವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ದ ಓಲಾ, ಊಬರ್ ಮತ್ತು ರ‍್ಯಾಪಿಡೋ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ಬುಧವಾರ (ಜು.2) ವಿಚಾರಣೆ ನಡೆಸಿದೆ.

ರಾಜ್ಯ ಸರ್ಕಾರವು ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಅಡಿಯಲ್ಲಿ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು, “ಅರ್ಜಿದಾರರು (ಓಲಾ, ಊಬರ್, ರ‍್ಯಾಪಿಡೋ) ಬೈಕ್ ಟ್ಯಾಕ್ಸಿ ಸೇವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಕಳೆದ ಏಪ್ರಿಲ್‌ನಲ್ಲಿ ತೀರ್ಪು ನೀಡಿತ್ತು.

ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್‌ಗಳನ್ನು ನೀಡಲು ರಾಜ್ಯದ ಸಾರಿಗೆ ಇಲಾಖೆಗೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಪೀಠ, ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆರು ವಾರಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ಈ ದಿನಾಂಕವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು. ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಓಲಾ, ಊಬರ್ ಮತ್ತು ರ‍್ಯಾಪಿಡೋ ಆರ್ಜಿಯಲ್ಲಿ ಮಹಿಳಾ ಪ್ರಯಾಣಿಕರ ಪರ ಮಧ್ಯ ಪ್ರವೇಶಿಸಿದ ಹಿರಿಯ ವಕೀಲೆ ಜಯನಾ ಕೊಠಾರಿ, ಬೈಕ್ ಟ್ಯಾಕ್ಸಿ ಅಸುರಕ್ಷಿತ ಎಂಬ ಕಾರಣ ಕೊಟ್ಟು ರದ್ದುಗೊಳಿಸಲಾಗಿದೆ. ಆದರೆ, ದೈನಂದಿನ ಪ್ರಯಾಣಿಕರಾಗಿರುವ ನಮಗೆ (ಮಹಿಳೆಯರಿಗೆ) ಬೈಕ್ ಟ್ಯಾಕ್ಸಿಗಳು ಸುರಕ್ಷಿತ, ಕೈಗೆಟುಕುವ ಮತ್ತು ಅನುಕೂಲಕರ ಸೇವೆಯನ್ನು ಒದಗಿಸುತ್ತಿತ್ತು ಎಂದಿದ್ದಾರೆ.

ಮಹಿಳೆಯರಿಗೆ ಈ ಸೇವೆ ಬೇಕಾಗಿದ್ದು, ಅದನ್ನು ನಿರ್ಬಂಧಿಸುವುದಕ್ಕೂ ಮುನ್ನ ಮಹಿಳೆಯರ ವಾದ ಆಲಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇತರ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಬಂಧಿಸಿದಂತೆ ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಕೊಠಾರಿ, “ಇತರ ರಾಜ್ಯಗಳಲ್ಲಿ ಬೈಕರ್‌ಗಳಿಗೆ ಪೂರ್ವ ಅರ್ಹತಾ ಪರೀಕ್ಷೆ ಇರುತ್ತದೆ. ಹಿನ್ನೆಲೆ ಪರಿಶೀಲನೆಗಳನ್ನು ಮಾಡಲಾಗುತ್ತದೆ. ಪಶ್ಚಿಮ ಬಂಗಾಳವು ರಾತ್ರಿಯಲ್ಲಿ ಸೀಮಿತ ಬೈಕ್ ಟ್ಯಾಕ್ಸಿ ಓಡಾಟವನ್ನು ಹೊಂದಿದೆ. ಅನೇಕ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸವಾರರು ಮಹಿಳೆಯರು ಎಂದು ಒತ್ತಿ ಹೇಳಿದ್ದಾರೆ. ಎಲ್ಲಾ ಸೇವಾ ನಿಯಮಗಳು ಮತ್ತು ಮಾರ್ಗಸೂಚಿಗಳು ಬೈಕ್ ಟ್ಯಾಕ್ಸಿ ಹೆಚ್ಚು ಸುರಕ್ಷಿತ ಪ್ರಯಾಣ ವಿಧಾನವಾಗಿದೆ ಎಂದು ತೋರಿಸಿದೆ ಎಂದಿದ್ದಾರೆ.

ರಾಜಸ್ಥಾನದ ಬೈಕ್ ಟ್ಯಾಕ್ಸಿ ನೀತಿಯನ್ನು ಉಲ್ಲೇಖಿಸಿದ ಕೊಠಾರಿ, ಆ ನೀತಿಯಡಿಯಲ್ಲಿ ಚಾಲಕರ ಪೂರ್ವವರ್ತಿಗಳನ್ನು ಸೇವಾ ಪೂರೈಕೆದಾರರು ಪರಿಶೀಲಿಸಬೇಕು ಮತ್ತು ಪೊಲೀಸ್ ಪರಿಶೀಲನೆ ಮಾಡಲಾಗುತ್ತದೆ. ಅಪ್ರಾಪ್ತ ವಯಸ್ಕರಿಗೆ ಬೈಕ್ ಓಡಿಸಲು ಅವಕಾಶವಿಲ್ಲ. ಸರ್ಕಾರ ಬೈಕ್ ಟ್ಯಾಕ್ಸಿಯ ದರಗಳನ್ನು ನಿಗದಿ ಮಾಡಿದರೂ, ಅದು ಕಡಿಮೆ ಮತ್ತು ಅತ್ಯಂತ ಕೈಗೆಟುಕುವ ಮಟ್ಟದಲ್ಲಿದೆ ಎಂದು ವಿವರಿಸಿದ್ದಾರೆ.

ಬೈಕ್ ಟ್ಯಾಕ್ಸಿಗಳನ್ನು ಪರಿಶೀಲಿಸುವ ಮತ್ತು ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಶಿಫಾರಸು ಮಾಡುವ ಸ್ವತಂತ್ರ ಸಂಸ್ಥೆಗಳ ಹಲವಾರು ರಾಷ್ಟ್ರೀಯ ವರದಿಗಳಿವೆ. ಇದು ಮಹಿಳೆಯರಿಗೆ ಸುರಕ್ಷಿತ ಮತ್ತು ಹೆಚ್ಚು ಕೈಗೆಟುಕುವಂತಿದೆ ಎಂದು ಹೇಳಿದೆ. ಬೈಕ್ ಟ್ಯಾಕ್ಸಿ ಅತ್ಯಂತ ಅನುಕೂಲಕರ ವಿಧಾನವಾಗಿದೆ ಎಂದು ತೋರಿಸುವ ಕೆಪಿಎಂಜಿ ವರದಿಯಿದೆ. ದರಗಳನ್ನು ನಿಗದಿಪಡಿಸಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲನೆಯಲ್ಲಿ ಇದ್ದಾಗ ಕೈಗೆಟಕುವಂತಿತ್ತು ಎಂದು ಕೊಠಾರಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕೆಪಿಎಂಜಿ ಸಿದ್ಧಪಡಿಸಿದ ವರದಿಯ ಆಧಾರದ ಕುರಿತ ನ್ಯಾಯಾಲಯದ ಪ್ರಶ್ನೆಗೆ, “ಅವರು (ಕೆಪಿಎಂಜಿ) ಕಾರ್ಯಸಾಧ್ಯತಾ ಅಧ್ಯಯನವನ್ನು ಮಾಡಿದ್ದಾರೆ. ವರದಿಯು ಬೈಕ್ ಟ್ಯಾಕ್ಸಿ ಹೆಚ್ಚು ಕೈಗೆಟುಕುವ, ಅನುಕೂಲಕರ ಮತ್ತು ಸುರಕ್ಷಿತವಾಗಿದೆ ಎಂದು ಹೇಳುತ್ತದೆ. ಇತರ ಸಾರಿಗೆ ವಿಧಾನಗಳಿಗಿಂತ ಬೈಕ್ ಟ್ಯಾಕ್ಸಿ ಸುರಕ್ಷಿತವಾಗಿದೆ ಎಂದು ಡೇಟಾ ತೋರಿಸುತ್ತದೆ. ನಮ್ಮ ಮನವಿ ಕೈಗೆಟುಕುವಿಕೆ, ಅನುಕೂಲತೆ ಮತ್ತು ಮಹಿಳೆಯರಿಗೆ ಸುರಕ್ಷತೆ. ಇದು ಉತ್ತಮ ಆಯ್ಕೆಯಾಗಿದೆ ಎಂದು ಕೊಠಾರಿ ತಿಳಿಸಿದ್ದಾರೆ.

ಇದೇ ವೇಳೆ ಊಬರ್ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ, ಈ ಹಿಂದೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದ ತಮಿಳುನಾಡಿನಂತಹ ರಾಜ್ಯಗಳು ಈಗ ಅದಕ್ಕೆ ಅನುಮತಿ ನೀಡಿವೆ. ಕೇರಳ ಕೂಡ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿಸಿದೆ ವಾದಿಸಿದ್ದಾರೆ.

ಬೆಂಗಳೂರಿನ ಮೆಟ್ರೋ ಮಾರ್ಗಗಳ ಬಗ್ಗೆ ಉಲ್ಲೇಖಿಸಿದ ಹೊಳ್ಳ, “ಮೆಟ್ರೋ ಮಾರ್ಗಗಳನ್ನು ನೋಡಿ, ಕೇವಲ ಎರಡು ಮಾರ್ಗಗಳಿವೆ. ಅದು ಕೊನೆಯ ಮೈಲಿ ಸಂಪರ್ಕ ನೀಡುತ್ತಿಲ್ಲ. ಜಪಾನ್ ಮುಂತಾದ ಸ್ಥಳಗಳು ಬಹು ಮೆಟ್ರೋ ಮಾರ್ಗಗಳನ್ನು ಹೊಂದಿವೆ. ದಯವಿಟ್ಟು ಬೆಂಗಳೂರಿನ ವಿಸ್ತರಣೆಯನ್ನು ನೋಡಿ. ಹೆಚ್ಚಿನ ಮೆಟ್ರೋ ಮಾರ್ಗಗಳಿದ್ದರೂ ಜನರಿಗೆ ಬೇಕಾದ ಸೇವೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನ ಬಾಲ್ಯದಲ್ಲಿ ಬೆಂಗಳೂರಿನ ಒಂದು ತುದಿಯಿಂದ ಇನ್ನೊಂದು ತುದಿಗೆ 20 ನಿಮಿಷಗಳಲ್ಲಿ ಪ್ರಯಾಣಿಸಬಹುದಿತ್ತು. ಈಗ ಗರಿಷ್ಠ ಸುಮಾರು 3 ರಿಂದ 4 ಗಂಟೆಗಳು ಬೇಕಾಗುತ್ತದೆ. ಒಬ್ಬ ಪ್ರಯಾಣಿಕ 3 ರಿಂದ 4 ಗಂಟೆಗಳು ಟ್ರಾಫಿಕ್‌ನಲ್ಲಿ ಕಳೆದರೆ ಏನಾಗುತ್ತದೆ. ಅವರಿಗೆ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ ಎಂದು ಹೊಳ್ಳ ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಬಾರದು ಮತ್ತು ಅದರ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಶಿಫಾರಸು ಮಾಡಿದ 2019ರ ತಜ್ಞರ ಸಮಿತಿಯ ವರದಿಯಲ್ಲಿ ಪರಿಗಣಿಸಲಾದ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಸ್ತಾಪಿಸಿದ ಹೊಳ್ಳ, ಬೈಕ್‌ ಟ್ಯಾಕ್ಸಿಯನ್ನು ನಿರ್ಬಂಧಿಸಲು ಮಹಿಳಾ ಸುರಕ್ಷತೆ ವಿಷಯವನ್ನು ಮುಂದೆ ತರಲಾಗಿದೆ. ಇಲ್ಲಿ ಪ್ರಬಲ ಆಟೋ ಯೂನಿಯನ್‌ಗಳು ಇವೆ ಎಂದಿದ್ದಾರೆ.

ಬೈಕ್ ಸವಾರರ ವಿಷಯದಲ್ಲಿ ಸರ್ಕಾರ ನೋಂದಣಿಯನ್ನು ನಿರಾಕರಿಸುವಂತಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

“ಇಂದು ಎಲ್ಲರೂ ಟ್ಯಾಕ್ಸಿಗಾಗಿ ಊಬರ್‌ ಅನ್ನು ಅವಲಂಬಿಸುತ್ತಿದ್ದಾರೆ. ಸೇವಾದಾರರಿಗೆ ಕೆಲವೇ ಕೆಲವು ನಿಮಿಷಗಳಲ್ಲಿ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಾಗುತ್ತಿದೆ. ಇಲ್ಲಿ ವೈಯಕ್ತಿವಾಗಿ ಚಾಲಕರು ಸೇವೆ ನೀಡುತ್ತಾರೆ. ಕಂಪನಿಗಳು ಕೇವಲ ಸೇವಾ ಪೂರೈಕೆದಾರರು ಮಾತ್ರ. ಆದ್ದರಿಂದ ಚಾಲಕರನ್ನು ತಡೆಯಲು ಸಾಧ್ಯವಿಲ್ಲ. ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ ನಂತರ ಸಂಚಾರ ದಟ್ಟಣೆ ಶೇಕಡ 18ರಷ್ಟು ಹೆಚ್ಚಳವಾಗಿದೆ” ಎಂದ ಹೊಳ್ಳ ತಮ್ಮ ವಾದ ಮುಕ್ತಾಯಗೊಳಿಸಿದ್ದಾರೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಹೊಳ್ಳ, “ಬೈಕ್ ಟ್ಯಾಕ್ಸಿಗಳು ಇಲ್ಲದ ಕಾರಣ ಜನರು ತಮ್ಮ ಕಾರುಗಳನ್ನು ಬಳಸಬೇಕಾಗುತ್ತದೆ. ಲಂಡನ್‌ನಲ್ಲಿ ಪಾರ್ಕಿಂಗ್ ಸ್ಥಳವಿಲ್ಲದ ಕಾರಣ ಜನರು ಸ್ವಂತ ಕಾರು ಹೊಂದಲು ಸಾಧ್ಯವಿಲ್ಲ. ಅಲ್ಲಿ ಎಲ್ಲರೂ ಊಬರ್ ಬಳಸುತ್ತಾರೆ ಎಂದು ತಿಳಿಸಿದ್ದಾರೆ.

Courtesy : livelaw.in

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...