Homeಕರ್ನಾಟಕಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

- Advertisement -
- Advertisement -

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ನಿಷೇಧವನ್ನು ವಿರೋಧಿಸಿರುವ ಮಹಿಳಾ ಪ್ರಯಾಣಿಕರು, ಬೈಕ್‌ ಟ್ಯಾಕ್ಸಿ ಸುರಕ್ಷಿತವಾಗಿದ್ದು, ಅನುಕೂಲಕರ ಮತ್ತು ಕೈಗೆಟುಕುವ ಪ್ರಯಾಣ ವಿಧಾನವಾಗಿದೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಬೈಕ್ ಟ್ಯಾಕ್ಸಿ ನಿಷೇಧವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ದ ಓಲಾ, ಊಬರ್ ಮತ್ತು ರ‍್ಯಾಪಿಡೋ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ಬುಧವಾರ (ಜು.2) ವಿಚಾರಣೆ ನಡೆಸಿದೆ.

ರಾಜ್ಯ ಸರ್ಕಾರವು ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಅಡಿಯಲ್ಲಿ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು, “ಅರ್ಜಿದಾರರು (ಓಲಾ, ಊಬರ್, ರ‍್ಯಾಪಿಡೋ) ಬೈಕ್ ಟ್ಯಾಕ್ಸಿ ಸೇವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಕಳೆದ ಏಪ್ರಿಲ್‌ನಲ್ಲಿ ತೀರ್ಪು ನೀಡಿತ್ತು.

ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್‌ಗಳನ್ನು ನೀಡಲು ರಾಜ್ಯದ ಸಾರಿಗೆ ಇಲಾಖೆಗೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಪೀಠ, ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆರು ವಾರಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ಈ ದಿನಾಂಕವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು. ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಓಲಾ, ಊಬರ್ ಮತ್ತು ರ‍್ಯಾಪಿಡೋ ಆರ್ಜಿಯಲ್ಲಿ ಮಹಿಳಾ ಪ್ರಯಾಣಿಕರ ಪರ ಮಧ್ಯ ಪ್ರವೇಶಿಸಿದ ಹಿರಿಯ ವಕೀಲೆ ಜಯನಾ ಕೊಠಾರಿ, ಬೈಕ್ ಟ್ಯಾಕ್ಸಿ ಅಸುರಕ್ಷಿತ ಎಂಬ ಕಾರಣ ಕೊಟ್ಟು ರದ್ದುಗೊಳಿಸಲಾಗಿದೆ. ಆದರೆ, ದೈನಂದಿನ ಪ್ರಯಾಣಿಕರಾಗಿರುವ ನಮಗೆ (ಮಹಿಳೆಯರಿಗೆ) ಬೈಕ್ ಟ್ಯಾಕ್ಸಿಗಳು ಸುರಕ್ಷಿತ, ಕೈಗೆಟುಕುವ ಮತ್ತು ಅನುಕೂಲಕರ ಸೇವೆಯನ್ನು ಒದಗಿಸುತ್ತಿತ್ತು ಎಂದಿದ್ದಾರೆ.

ಮಹಿಳೆಯರಿಗೆ ಈ ಸೇವೆ ಬೇಕಾಗಿದ್ದು, ಅದನ್ನು ನಿರ್ಬಂಧಿಸುವುದಕ್ಕೂ ಮುನ್ನ ಮಹಿಳೆಯರ ವಾದ ಆಲಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇತರ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಬಂಧಿಸಿದಂತೆ ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಕೊಠಾರಿ, “ಇತರ ರಾಜ್ಯಗಳಲ್ಲಿ ಬೈಕರ್‌ಗಳಿಗೆ ಪೂರ್ವ ಅರ್ಹತಾ ಪರೀಕ್ಷೆ ಇರುತ್ತದೆ. ಹಿನ್ನೆಲೆ ಪರಿಶೀಲನೆಗಳನ್ನು ಮಾಡಲಾಗುತ್ತದೆ. ಪಶ್ಚಿಮ ಬಂಗಾಳವು ರಾತ್ರಿಯಲ್ಲಿ ಸೀಮಿತ ಬೈಕ್ ಟ್ಯಾಕ್ಸಿ ಓಡಾಟವನ್ನು ಹೊಂದಿದೆ. ಅನೇಕ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸವಾರರು ಮಹಿಳೆಯರು ಎಂದು ಒತ್ತಿ ಹೇಳಿದ್ದಾರೆ. ಎಲ್ಲಾ ಸೇವಾ ನಿಯಮಗಳು ಮತ್ತು ಮಾರ್ಗಸೂಚಿಗಳು ಬೈಕ್ ಟ್ಯಾಕ್ಸಿ ಹೆಚ್ಚು ಸುರಕ್ಷಿತ ಪ್ರಯಾಣ ವಿಧಾನವಾಗಿದೆ ಎಂದು ತೋರಿಸಿದೆ ಎಂದಿದ್ದಾರೆ.

ರಾಜಸ್ಥಾನದ ಬೈಕ್ ಟ್ಯಾಕ್ಸಿ ನೀತಿಯನ್ನು ಉಲ್ಲೇಖಿಸಿದ ಕೊಠಾರಿ, ಆ ನೀತಿಯಡಿಯಲ್ಲಿ ಚಾಲಕರ ಪೂರ್ವವರ್ತಿಗಳನ್ನು ಸೇವಾ ಪೂರೈಕೆದಾರರು ಪರಿಶೀಲಿಸಬೇಕು ಮತ್ತು ಪೊಲೀಸ್ ಪರಿಶೀಲನೆ ಮಾಡಲಾಗುತ್ತದೆ. ಅಪ್ರಾಪ್ತ ವಯಸ್ಕರಿಗೆ ಬೈಕ್ ಓಡಿಸಲು ಅವಕಾಶವಿಲ್ಲ. ಸರ್ಕಾರ ಬೈಕ್ ಟ್ಯಾಕ್ಸಿಯ ದರಗಳನ್ನು ನಿಗದಿ ಮಾಡಿದರೂ, ಅದು ಕಡಿಮೆ ಮತ್ತು ಅತ್ಯಂತ ಕೈಗೆಟುಕುವ ಮಟ್ಟದಲ್ಲಿದೆ ಎಂದು ವಿವರಿಸಿದ್ದಾರೆ.

ಬೈಕ್ ಟ್ಯಾಕ್ಸಿಗಳನ್ನು ಪರಿಶೀಲಿಸುವ ಮತ್ತು ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಶಿಫಾರಸು ಮಾಡುವ ಸ್ವತಂತ್ರ ಸಂಸ್ಥೆಗಳ ಹಲವಾರು ರಾಷ್ಟ್ರೀಯ ವರದಿಗಳಿವೆ. ಇದು ಮಹಿಳೆಯರಿಗೆ ಸುರಕ್ಷಿತ ಮತ್ತು ಹೆಚ್ಚು ಕೈಗೆಟುಕುವಂತಿದೆ ಎಂದು ಹೇಳಿದೆ. ಬೈಕ್ ಟ್ಯಾಕ್ಸಿ ಅತ್ಯಂತ ಅನುಕೂಲಕರ ವಿಧಾನವಾಗಿದೆ ಎಂದು ತೋರಿಸುವ ಕೆಪಿಎಂಜಿ ವರದಿಯಿದೆ. ದರಗಳನ್ನು ನಿಗದಿಪಡಿಸಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲನೆಯಲ್ಲಿ ಇದ್ದಾಗ ಕೈಗೆಟಕುವಂತಿತ್ತು ಎಂದು ಕೊಠಾರಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕೆಪಿಎಂಜಿ ಸಿದ್ಧಪಡಿಸಿದ ವರದಿಯ ಆಧಾರದ ಕುರಿತ ನ್ಯಾಯಾಲಯದ ಪ್ರಶ್ನೆಗೆ, “ಅವರು (ಕೆಪಿಎಂಜಿ) ಕಾರ್ಯಸಾಧ್ಯತಾ ಅಧ್ಯಯನವನ್ನು ಮಾಡಿದ್ದಾರೆ. ವರದಿಯು ಬೈಕ್ ಟ್ಯಾಕ್ಸಿ ಹೆಚ್ಚು ಕೈಗೆಟುಕುವ, ಅನುಕೂಲಕರ ಮತ್ತು ಸುರಕ್ಷಿತವಾಗಿದೆ ಎಂದು ಹೇಳುತ್ತದೆ. ಇತರ ಸಾರಿಗೆ ವಿಧಾನಗಳಿಗಿಂತ ಬೈಕ್ ಟ್ಯಾಕ್ಸಿ ಸುರಕ್ಷಿತವಾಗಿದೆ ಎಂದು ಡೇಟಾ ತೋರಿಸುತ್ತದೆ. ನಮ್ಮ ಮನವಿ ಕೈಗೆಟುಕುವಿಕೆ, ಅನುಕೂಲತೆ ಮತ್ತು ಮಹಿಳೆಯರಿಗೆ ಸುರಕ್ಷತೆ. ಇದು ಉತ್ತಮ ಆಯ್ಕೆಯಾಗಿದೆ ಎಂದು ಕೊಠಾರಿ ತಿಳಿಸಿದ್ದಾರೆ.

ಇದೇ ವೇಳೆ ಊಬರ್ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ, ಈ ಹಿಂದೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದ ತಮಿಳುನಾಡಿನಂತಹ ರಾಜ್ಯಗಳು ಈಗ ಅದಕ್ಕೆ ಅನುಮತಿ ನೀಡಿವೆ. ಕೇರಳ ಕೂಡ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿಸಿದೆ ವಾದಿಸಿದ್ದಾರೆ.

ಬೆಂಗಳೂರಿನ ಮೆಟ್ರೋ ಮಾರ್ಗಗಳ ಬಗ್ಗೆ ಉಲ್ಲೇಖಿಸಿದ ಹೊಳ್ಳ, “ಮೆಟ್ರೋ ಮಾರ್ಗಗಳನ್ನು ನೋಡಿ, ಕೇವಲ ಎರಡು ಮಾರ್ಗಗಳಿವೆ. ಅದು ಕೊನೆಯ ಮೈಲಿ ಸಂಪರ್ಕ ನೀಡುತ್ತಿಲ್ಲ. ಜಪಾನ್ ಮುಂತಾದ ಸ್ಥಳಗಳು ಬಹು ಮೆಟ್ರೋ ಮಾರ್ಗಗಳನ್ನು ಹೊಂದಿವೆ. ದಯವಿಟ್ಟು ಬೆಂಗಳೂರಿನ ವಿಸ್ತರಣೆಯನ್ನು ನೋಡಿ. ಹೆಚ್ಚಿನ ಮೆಟ್ರೋ ಮಾರ್ಗಗಳಿದ್ದರೂ ಜನರಿಗೆ ಬೇಕಾದ ಸೇವೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನ ಬಾಲ್ಯದಲ್ಲಿ ಬೆಂಗಳೂರಿನ ಒಂದು ತುದಿಯಿಂದ ಇನ್ನೊಂದು ತುದಿಗೆ 20 ನಿಮಿಷಗಳಲ್ಲಿ ಪ್ರಯಾಣಿಸಬಹುದಿತ್ತು. ಈಗ ಗರಿಷ್ಠ ಸುಮಾರು 3 ರಿಂದ 4 ಗಂಟೆಗಳು ಬೇಕಾಗುತ್ತದೆ. ಒಬ್ಬ ಪ್ರಯಾಣಿಕ 3 ರಿಂದ 4 ಗಂಟೆಗಳು ಟ್ರಾಫಿಕ್‌ನಲ್ಲಿ ಕಳೆದರೆ ಏನಾಗುತ್ತದೆ. ಅವರಿಗೆ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ ಎಂದು ಹೊಳ್ಳ ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಬಾರದು ಮತ್ತು ಅದರ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಶಿಫಾರಸು ಮಾಡಿದ 2019ರ ತಜ್ಞರ ಸಮಿತಿಯ ವರದಿಯಲ್ಲಿ ಪರಿಗಣಿಸಲಾದ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಸ್ತಾಪಿಸಿದ ಹೊಳ್ಳ, ಬೈಕ್‌ ಟ್ಯಾಕ್ಸಿಯನ್ನು ನಿರ್ಬಂಧಿಸಲು ಮಹಿಳಾ ಸುರಕ್ಷತೆ ವಿಷಯವನ್ನು ಮುಂದೆ ತರಲಾಗಿದೆ. ಇಲ್ಲಿ ಪ್ರಬಲ ಆಟೋ ಯೂನಿಯನ್‌ಗಳು ಇವೆ ಎಂದಿದ್ದಾರೆ.

ಬೈಕ್ ಸವಾರರ ವಿಷಯದಲ್ಲಿ ಸರ್ಕಾರ ನೋಂದಣಿಯನ್ನು ನಿರಾಕರಿಸುವಂತಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

“ಇಂದು ಎಲ್ಲರೂ ಟ್ಯಾಕ್ಸಿಗಾಗಿ ಊಬರ್‌ ಅನ್ನು ಅವಲಂಬಿಸುತ್ತಿದ್ದಾರೆ. ಸೇವಾದಾರರಿಗೆ ಕೆಲವೇ ಕೆಲವು ನಿಮಿಷಗಳಲ್ಲಿ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಾಗುತ್ತಿದೆ. ಇಲ್ಲಿ ವೈಯಕ್ತಿವಾಗಿ ಚಾಲಕರು ಸೇವೆ ನೀಡುತ್ತಾರೆ. ಕಂಪನಿಗಳು ಕೇವಲ ಸೇವಾ ಪೂರೈಕೆದಾರರು ಮಾತ್ರ. ಆದ್ದರಿಂದ ಚಾಲಕರನ್ನು ತಡೆಯಲು ಸಾಧ್ಯವಿಲ್ಲ. ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ ನಂತರ ಸಂಚಾರ ದಟ್ಟಣೆ ಶೇಕಡ 18ರಷ್ಟು ಹೆಚ್ಚಳವಾಗಿದೆ” ಎಂದ ಹೊಳ್ಳ ತಮ್ಮ ವಾದ ಮುಕ್ತಾಯಗೊಳಿಸಿದ್ದಾರೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಹೊಳ್ಳ, “ಬೈಕ್ ಟ್ಯಾಕ್ಸಿಗಳು ಇಲ್ಲದ ಕಾರಣ ಜನರು ತಮ್ಮ ಕಾರುಗಳನ್ನು ಬಳಸಬೇಕಾಗುತ್ತದೆ. ಲಂಡನ್‌ನಲ್ಲಿ ಪಾರ್ಕಿಂಗ್ ಸ್ಥಳವಿಲ್ಲದ ಕಾರಣ ಜನರು ಸ್ವಂತ ಕಾರು ಹೊಂದಲು ಸಾಧ್ಯವಿಲ್ಲ. ಅಲ್ಲಿ ಎಲ್ಲರೂ ಊಬರ್ ಬಳಸುತ್ತಾರೆ ಎಂದು ತಿಳಿಸಿದ್ದಾರೆ.

Courtesy : livelaw.in

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...