Homeಕರ್ನಾಟಕಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

- Advertisement -
- Advertisement -

ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸುವ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆ, ಇಂದಿನಿಂದ (ಜೂ.16) ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸ್ಥಗಿತಗೊಳ್ಳಲಿವೆ.

ವರದಿಗಳ ಪ್ರಕಾರ, ಹೈಕೋರ್ಟ್ ಆದೇಶದಂತೆ ಹಲವು ಬೈಕ್ ಟ್ಯಾಕ್ಸಿ ಸೇವಾ ಪೂರೈಕೆದಾರರು ತಮ್ಮ ಸೇವೆಯನ್ನು ಇಂದು (ಜೂನ್ 16 ಸೋಮವಾರ) ಸ್ಥಗಿತಗೊಳಿಸಿದ್ಧಾರೆ. ಇನ್ನೂ ಕೆಲ ಕಂಪನಿಗಳು ಸೇವೆ ಮುಂದುವರಿಸಿವೆ. ಕೆಲ ಪ್ರಯಾಣಿಕರು ಇಂದು ಬೆಳಿಗ್ಗೆ ಬೈಕ್ ಟ್ಯಾಕ್ಸಿ ಬುಕ್ ಮಾಡಿ ಪ್ರಯಾಣಿಸಿದ್ದಾರೆ. ಈ ಕಂಪನಿಗಳು ಕ್ರಮೇಣ ಸರ್ಕಾರ ಮತ್ತು ಕೋರ್ಟ್ ಆದೇಶ ಪಾಲಿಸುವ ಸಾಧ್ಯತೆ ಇದೆ.

ರ್ಯಾಪಿಡೋ, ಓಲಾ ಮತ್ತು ಊಬರ್ ಕಂಪನಿಗಳು ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿತ್ತು. ವಿದ್ಯಾರ್ಥಿಗಳು ಮತ್ತು ಬಡ, ಮಧ್ಯಮ ವರ್ಗದ ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ, ಇಚ್ಚಿಸಿದ ಸ್ಥಳಗಳಿಗೆ ತೆರಳಲು ಬೈಕ್ ಟ್ಯಾಕ್ಸಿ ನೆರವಾಗುತ್ತಿತ್ತು. ಇತರ ಟ್ಯಾಕ್ಸಿ ಚಾಲಕರಿಂದ, ಪ್ರಮುಖವಾಗಿ ಆಟೋ ಚಾಲಕರಿಂದ ಬಂದ ವಿರೋಧ, ಪ್ರಯಾಣಿಕರ ಸುರಕ್ಷತೆ ಮತ್ತು ಸಾರಿಗೆ ನಿಯಮಗಳು ಬೈಕ್ ಟ್ಯಾಕ್ಸಿ ನಿಷೇಧ ಆಗಲು ಪ್ರಮುಖ ಕಾರಣಗಳಾಗಿವೆ.

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಕಾರಣಗಳು : 

  1. ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ: ಕರ್ನಾಟಕ ಮೋಟಾರು ಕಾಯ್ದೆಯ ಪ್ರಕಾರ, ರಾಜ್ಯದಲ್ಲಿ ಬಿಳಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಖಾಸಗಿ ಬಳಕೆಗೆ ಸೀಮಿತವಾಗಿವೆ. ಅವುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವಂತಿಲ್ಲ. ಇಲ್ಲಿ ಬೈಕ್ ಖಾಸಗಿ ವಾಹನವಾದ್ದರಿಂದ, ಅದು ಮೋಟಾರು ವಾಹನ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುತ್ತದೆ ಎನ್ನಲಾಗಿದೆ.
  2. ಸುರಕ್ಷತಾ ಕಾಳಜಿಗಳು: ಇತರ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಹೋಲಿಸಿದರೆ ಕಟ್ಟುನಿಟ್ಟಾದ ನಿಯಮಗಳು ಮತ್ತು ಮೇಲ್ವಿಚಾರಣೆಯ ಕೊರತೆಯಿಂದಾಗಿ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು, ವಿಶೇಷವಾಗಿ ಮಹಿಳೆಯರಿಗೆ ಅಸುರಕ್ಷಿತವೆಂದು ಗುರುತಿಸಿದೆ.
  3. ಆಟೋ ಮತ್ತು ಕ್ಯಾಬ್ ಚಾಲಕರಿಂದ ವಿರೋಧ: ಆಟೋ-ರಿಕ್ಷಾ ಮತ್ತು ಕ್ಯಾಬ್ ಚಾಲಕರ-ಮಾಲಕರ ಸಂಘಗಳು ಬೈಕ್ ಟ್ಯಾಕ್ಸಿಗಳಿಗೆ ವಿರೋಧ ವ್ಯಕ್ತಪಡಿಸಿರುವುದು ಅವುಗಳು ನಿಷೇಧಕ್ಕೊಳಗಾಗಲು ಪ್ರಮುಖ ಕಾರಣವಾಗಿದೆ. ಬೈಕ್ ಟ್ಯಾಕ್ಸಿಗಳು ಪ್ರಯಾಣ ದರವನ್ನು ಕಡಿಮೆ ಮಾಡಿ ತಮ್ಮ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ಆಟೋ ಚಾಲಕರು ವಾದಿಸಿದ್ದಾರೆ. ಆಟೋ ಚಾಲಕರ ಸಂಘಗಳು ಗಮನಾರ್ಹ ಪ್ರಭಾವವನ್ನು ಹೊಂದಿವೆ. ಅವುಗಳ ಪ್ರತಿಭಟನೆಗಳು ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿವೆ.
  4. ನಿಯಮಗಳ ಅಡೆ-ತಡೆ: ಗೋವಾದಂತಹ ಇತರ ಕೆಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಸಾರಿಗೆ ಕಾನೂನುಗಳ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ ಎಂದು ಕರ್ನಾಟಕ ಸಾರಿಗೆ ಇಲಾಖೆ ಒತ್ತಿ ಹೇಳಿದೆ.

ಹೈಕೋರ್ಟ್ ತೀರ್ಪು : ಜೂನ್ 13, 2025 ರಂದು, ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿಗಳ ಮೇಲಿನ ರಾಜ್ಯ ಸರ್ಕಾರದ ನಿಷೇಧವನ್ನು ತಡೆಯಲು ನಿರಾಕರಿಸಿದೆ. ಇದು ಜೂನ್ 16, 2025 ರಿಂದ ಸೇವೆಗಳನ್ನು ಸ್ಥಗಿತಗೊಳಿಸಲು ಕಾರಣವಾಗಿದೆ. ರ್ಯಾಪಿಡೊ, ಓಲಾ ಮತ್ತು ಉಬರ್ ಮೋಟೋದಂತಹ ಕಂಪನಿಗಳಿಗೆ ಯಾವುದೇ ಗ್ರೇಸ್ ಅವಧಿ ನೀಡದೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ನಿರ್ದೇಶಿಸಿದೆ.

ಕಾನೂನು ಕ್ರಮಗಳು: ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಾಗ ಕಟ್ಟುನಿಟ್ಟಿನ ಕಾನೂನು ಕ್ರಮಗಳ ಎಚ್ಚರಿಕೆ ನೀಡಿದೆ. ಇದರಲ್ಲಿ ವಾಹನ ಜಪ್ತಿ, ₹10,000 ವರೆಗೆ ದಂಡ ಮತ್ತು ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುವ ನಿರ್ವಾಹಕರಿಗೆ ಸಂಭಾವ್ಯ ಜೈಲು ಶಿಕ್ಷೆಗಳು ಸೇರಿವೆ.

ಕಂಪನಿಗಳ ಪ್ರತಿಕ್ರಿಯೆ: ಪ್ರಮುಖ ಬೈಕ್ ಟ್ಯಾಕ್ಸಿ ಆಪರೇಟರ್ ಆಗಿರುವ ರಾಪಿಡೊ ಹೈಕೋರ್ಟ್ ಆದೇಶವನ್ನು ಪಾಲಿಸುವ ಮೂಲಕ ಜೂನ್ 16, 2025 ರಿಂದ ಕರ್ನಾಟಕದಲ್ಲಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಓಲಾ ಮತ್ತು ಉಬರ್ ಮೋಟೋ ಕೂಡ ಇದೇ ರೀತಿಯ ಘೋಷಣೆಗಳನ್ನು ಮಾಡಿವೆ ಎಂದು ವರದಿಗಳು ಹೇಳಿವೆ.

ನಿಷೇಧದ ಪರಿಣಾಮಗಳು : ಬೈಕ್ ಟ್ಯಾಕ್ಸಿಯ ನಿಷೇಧದ ಪರಿಣಾಮಗಳನ್ನು ಬಹು ಆಯಾಮಗಳಲ್ಲಿ ನೋಡಬಹುದು. ಇದು ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದವರು, ಸೇವಾ ಪೂರೈಕೆ ಕಂಪನಿಗಳು ಮತ್ತು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.

ಪ್ರಯಾಣಿಕರು : ಒಬ್ಬರೇ ಎಲ್ಲಾದರು ಪ್ರಯಾಣಿಸುವುದಾದರೆ ಆಟೋದ ಅವಶ್ಯಕತೆ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಜನರು ಬೈಕ್ ಟ್ಯಾಕ್ಸಿ ಮೂಲಕ ಪ್ರಯಾಣಿಸುತ್ತಿದ್ದರು. ಇದರಿಂದ ಕಡಿಮೆ ಖರ್ಚಿನಲ್ಲಿ, ಅತ್ಯಂತ ವೇಗವಾಗಿ ನಿಗದಿತ ಸ್ತಳಗಳಿಗೆ ತೆರಳಲು ಜನರಿಗೆ ಸಹಾಯವಾಗುತ್ತಿತ್ತು.

ಒಬ್ಬರೇ ಪ್ರಯಾಣಿಸುವಾಗ ಆಟೋ ಆದರೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಅಲ್ಲದೆ ಬೈಕ್‌ಗೆ ಹೋಲಿಸಿದರೆ ಹೆಚ್ಚಿನ ಇಂಧನವು ಖರ್ಚಾಗುತ್ತದೆ. ಈ ಎರಡೂ ಕೂಡ ಬೈಕ್ ಟ್ಯಾಕ್ಸಿಯಿಂದ ಉಳಿತಾಯ ಆಗುತ್ತಿತ್ತು.

ಚಾಲಕರು/ ರೈಡರ್ಸ್: ಬೈಕ್ ಟ್ಯಾಕ್ಸಿ ಚಾಲನೆಯನ್ನು ಅನೇಕ ವಿದ್ಯಾರ್ಥಿಗಳು ಸೇರಿದಂತೆ ಬಡ, ಮಧ್ಯಮ ವರ್ಗದ ಯುವಜನರು ತಮ್ಮ ಪ್ರಾಥಮಿಕ ಅಥವಾ ಪೂರಕ ಆದಾಯದ ಮೂಲವಾಗಿ ಅವಲಂಬಿಸಿದ್ದರು. ಅವರು ಉದ್ಯೋಗ ನಷ್ಟವನ್ನು ಎದುರಿಸಲಿದ್ದಾರೆ. ಈ ನಿಷೇಧವು ಅವರ ಜೀವನೋಪಾಯವನ್ನು ಅಸ್ತವ್ಯಸ್ತಗೊಳಿಸಲಿದೆ. ಇದು ಈಗಾಗಲೇ ಆಕ್ರೋಶಕ್ಕೆ ಕಾರಣವಾಗಿದೆ.

“ಪದವಿ ಮುಗಿಸಿ ಬೆಂಗಳೂರು ಮಹಾನಗರಕ್ಕೆ ಕೆಲಸ ಹುಡುಕಲು ಬಂದ ನನಗೆ ಆರಂಭದಲ್ಲಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ. ಆದರೆ, ನಾನು ಉಳಿದುಕೊಂಡಿದ್ದ ರೂಮ್ ಬಾಡಿಗೆ, ಊಟ ತಿಂಡಿ ಖರ್ಚು ಮತ್ತು ಬಸ್ ಖರ್ಚಿಗೆ ಹಣ ಬೇಕಿತ್ತು. ಆಗ ನಾನು ನನ್ನಲ್ಲಿದ್ದ ಬೈಕ್‌ನಲ್ಲಿ ರ್ಯಾಪಿಡೋ ಸೇವೆ ನೀಡಿ ಖರ್ಚು ನಿಭಾಯಿಸುತ್ತಿದ್ದೆ” ಎನ್ನುತ್ತಾರೆ ಚಿಕ್ಕಮಗಳೂರು ಮೂಲದ ಆರ್‌.ಟಿ ನಗರದಲ್ಲಿ ವಾಸ್ತವ್ಯ ಇರುವ ರಾಶಿದ್ ಅಹ್ಮದ್.

“ಬೆಂಗಳೂರಿನ ನೆಲಮಂಗಲ ಕ್ರಾಸ್ ಬಳಿ ಇದ್ದ ನನ್ನ ಸಣ್ಣ ಹೋಟೆಲ್ ನಷ್ಟದಿಂದ ಮುಚ್ಚಿದಾಗ, ಅತ್ತ ಮನೆಗೂ ಹೋಗಲಾಗದೆ, ಇತ್ತ ಖರ್ಚಿಗೂ ಹಣವಿಲ್ಲದೆ ಚಿಂತೆಯಲ್ಲಿ ಕುಳಿತಿದ್ದಾಗ ನನಗೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಜೀವನ ನಡೆಸಲು ನೆರವಾಗಿತ್ತು. ಪ್ರಸ್ತುತ ಅದನ್ನೇ ನಂಬಿ ಕುಳಿತಿದ್ದೇನೆ. ಈಗ ಬಂದಿರುವ ನಿಷೇಧ ಸುದ್ದಿಯಿಂದ ಮತ್ತೆ ನಾನು ಸಂಕಷ್ಟ ಅನುಭವಿಸಬೇಕಿದೆ. ಮುಂದೇನು ಗೊತ್ತಿಲ್ಲ” ಎಂದು ಮಂಗಳೂರು ಮೂಲದ ಪ್ರಸ್ತುತ ಜಯಮಹಲ್‌ನಲ್ಲಿ ನೆಲೆಸಿರುವ ಝೈನುದ್ದೀನ್ ಆತಂಕ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಇಕೋ ಸಿಸ್ಟಮ್ : ಈ ನಿಷೇಧವು ಆಟೋ-ರಿಕ್ಷಾಗಳು ಮತ್ತು ಕ್ಯಾಬ್‌ಗಳಿಗೆ ಬೇಡಿಕೆಯನ್ನು ಹೆಚ್ಚಿಸಬಹುದು. ಚಾಲಕರಿಗೆ ಪ್ರಯೋಜನವನ್ನು ನೀಡಬಹುದು. ಆದರೆ ಪ್ರಯಾಣಿಕರು ಹೆಚ್ಚಿನ ದರ ಪಾವತಿಸಬೇಕಿದೆ ಮತ್ತು ದೀರ್ಘ ಸಮಯ ಕಾಯಬೇಕಾಗುತ್ತದೆ.

ಕಂಪನಿಗಳು: ಬೈಕ್ ಟ್ಯಾಕ್ಸಿ ನಿಷೇಧದಿಂದ ರಾಪಿಡೊ, ಓಲಾ ಮತ್ತು ಉಬರ್‌ನಂತಹ ಕಂಪನಿಗಳು ಪ್ರಮುಖ ಮಾರುಕಟ್ಟೆಯಾದ ಕರ್ನಾಟಕದಲ್ಲಿ ಕಾರ್ಯಾಚರಣೆ ಮತ್ತು ಆರ್ಥಿಕ ಹಿನ್ನಡೆಯನ್ನು ಎದುರಿಸಬಹುದು. ಈ ಕಂಪನಿಗಳು ಭವಿಷ್ಯದಲ್ಲಿ ಇತರ ಸೇವೆಗಳಿಗೆ ಬದಲಾಯಿಸಿಕೊಳ್ಳಬೇಕಿದೆ ಅಥವಾ ನಿಷೇಧವನ್ನು ಕಾನೂನುಬದ್ಧವಾಗಿ ಪ್ರಶ್ನಿಸಬೇಕಾಗಿದೆ.

ಜನರ ಅಭಿಪ್ರಾಯ : ಬೈಕ್ ಟ್ಯಾಕ್ಸಿಗಳ ನಿಷೇಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಇತರ ರೀತಿಯಲ್ಲಿ ಜನರಿಂದ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಹಲವರು ನಿಷೇಧವನ್ನು ವಿರೋಧಿಸಿದರೆ, ಕೆಲವರು ಸುರಕ್ಷತೆ ಮತ್ತು ಇತರ ಕಾರಣಗಳನ್ನು ನೀಡಿ ಸಮರ್ಥಿಸಿಕೊಂಡಿದ್ದಾರೆ.

ಹಿಂದಿನ ಪ್ರತಿಭಟನೆಗಳು: ಆಟೋ ಚಾಲಕರ ಸಂಘಗಳು ಕಳೆದ ಕೆಲ ವರ್ಷಗಳಿಂದ ಬೈಕ್ ಟ್ಯಾಕ್ಸಿಗಳ ವಿರುದ್ಧ ಧ್ವನಿ ಎತ್ತುತ್ತಿವೆ. 2023ರ ಬಳಿಕ ಆಗಾಗ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಜುಲೈ 2024ರಲ್ಲಿ ಕರ್ನಾಟಕ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ 133 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿತ್ತು ಎಂದು ವರದಿಯಾಗಿದೆ. ಹಲವೆಡೆ ಆಟೋ ಚಾಲಕರು ಬೈಕ್ ಟ್ಯಾಕ್ಸಿ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಮತ್ತು ಹಲ್ಲೆಗೆ ಮುಂದಾದ ಉದಾಹರಣೆಗಳಿವೆ. ಸರ್ಕಾರ ಹಲವು ಬಾರಿ ಆಟೋ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ಕಂಪನಿಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರೂ, ಹಗ್ಗಜಗ್ಗಾಟ ಮುಂದುವರಿದಿತ್ತು.

ಇತರ ರಾಜ್ಯಗಳೊಂದಿಗೆ ಹೋಲಿಕೆ: ಗೋವಾದಂತಹ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾನೂನುಬದ್ಧವಾಗಿವೆ. ಅಲ್ಲಿ ನಿಯಮಗಳು ಅವುಗಳ ಕಾರ್ಯಾಚರಣೆಯನ್ನು ಅನುಮತಿಸುತ್ತವೆ. ಕರ್ನಾಟಕದಲ್ಲಿ ಬೈಕ್ಸ್ ಟ್ಯಾಕ್ಸಿಗೆ ಅವಕಾಶವಿಲ್ಲ. ಇದರ ಹಿಂದೆ ಆಟೋ ಚಾಲಕರ ಸಂಘಗಳ ಪ್ರಭಾವ ಇದೆ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್

ಬೈಕ್ ಟ್ಯಾಕ್ಸಿ ನಿಷೇಧದ ಹಿನ್ನೆಲೆ, ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಕರ್ನಾಟಕದಾದ್ಯಂತ ದೈನಂದಿನ ಆದಾಯಕ್ಕಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಅವಲಂಬಿಸಿರುವ ಒಂದು ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರ ಜೀವನೋಪಾಯವನ್ನು ರಕ್ಷಿಸಲು ಮಧ್ಯಪ್ರವೇಶಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ಸಂಪೂರ್ಣ ನಿಷೇಧದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ 1,00,000 ಕ್ಕೂ ಹೆಚ್ಚು ಗಿಗ್ ಕಾರ್ಮಿಕರು ಸಂಪಾದಿಸಿ ತಮ್ಮ ಕುಟುಂಬವನ್ನು ಪೋಷಿಸುವ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಈ ನಿಷೇಧವನ್ನು ತೆಗೆದುಹಾಕಿ ಅವರ ದೈನಂದಿನ ಸಂಪಾದನೆಯನ್ನು ಘನತೆಯಿಂದ ಮಾಡಲು ಸಹಾಯ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...