Homeಮುಖಪುಟಮುಸುಕು, ಹಿಜಾಬ್‌, ಬಿಕಿನಿ, ಜೀನ್ಸ್‌ ಆಯ್ಕೆ ಮಹಿಳೆಯ ಹಕ್ಕು: ಪ್ರಿಯಾಂಕಾ

ಮುಸುಕು, ಹಿಜಾಬ್‌, ಬಿಕಿನಿ, ಜೀನ್ಸ್‌ ಆಯ್ಕೆ ಮಹಿಳೆಯ ಹಕ್ಕು: ಪ್ರಿಯಾಂಕಾ

- Advertisement -
- Advertisement -

ನವ ದೆಹಲಿ: ಕರ್ನಾಟಕದಲ್ಲಿ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕಾಲೇಜು ವಿದ್ಯಾರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದು, ಯಾವ ಬಟ್ಟೆಯನ್ನು ಧರಿಸಬೇಕೆಂಬುದರ ಆಯ್ಕೆ ಅವರದು ಮತ್ತು ಈ ಹಕ್ಕನ್ನು ಸಂವಿಧಾನವು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

“ಅದು ಬಿಕಿನಿಯಾಗಿರಲಿ, ಘೂಂಘಟ್‌ (ತಲೆ ಮೇಲೆ ಸೆರಗು ಮುಚ್ಚುವುದು) ಆಗಿರಲಿ, ಜೀನ್ಸ್ ಆಗಿರಲಿ ಅಥವಾ ಹಿಜಾಬ್ ಆಗಿರಲಿ, ಆಕೆ ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕು ಭಾರತೀಯ ಸಂವಿಧಾನದ ಮೂಲಕ ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ. #ladkihoonladsaktihoon (ಹುಡುಗಿಯಾಗಿದ್ದೇನೆ ಆದರೆ ಹೋರಾಟಬಲ್ಲೆ) ಎಂಬ ಹ್ಯಾಶ್‌ಟ್ಯಾಗ್‌ ಹಾಕಿದ್ದಾರೆ.

ನಾಳೆಯಿಂದ ಆರಂಭವಾಗಲಿರುವ ಏಳು ಹಂತದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಳಸಿರುವ ಧ್ಯೇಯವಾಕ್ಯ #ladkihoonladsaktihoon. ಕಾಂಗ್ರೆಸ್‌ ಪಕ್ಷವು ಮಹಿಳಾ ಹಕ್ಕುಗಳು ಮತ್ತು ಸಬಲೀಕರಣವನ್ನು ಚುನಾವಣೆಯ ಪ್ರಮುಖ ವಿಷಯಗಳಾಗಿ ಪರಿಗಣಿಸಿದೆ.

ಕಳೆದ ವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿದ್ಯಾರ್ಥಿಗಳ ಹಕ್ಕನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. “ವಿದ್ಯಾರ್ಥಿಗಳ ಹಿಜಾಬನ್ನು ಶಿಕ್ಷಣಕ್ಕೆ ಅಡ್ಡಿಯಾಗುವಂತೆ ಮಾಡಿ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಯಾರೊಂದಿಗೂ ಭೇದ ತೋರಿಸುವುದಿಲ್ಲ” ಎಂದು ರಾಹುಲ್ ಟ್ವೀಟ್ ಮಾಡಿದ್ದರು.

ಕಾಲೇಜು ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕಿನ ವಿರುದ್ಧ ಕರ್ನಾಟಕದ ಉಡುಪಿ, ಚಿಕ್ಕಮಗಳೂರು ಮತ್ತು ಮಂಡ್ಯ ಜಿಲ್ಲೆಗಳ ಹಲವಾರು ಕಡೆ ಆಘಾತಕಾರಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ.

ಮಂಡ್ಯದಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬಳಿಗೆ ಕೇಸರಿ ಶಾಲುಗಳನ್ನು ಬೀಸುತ್ತಾ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಿರುವಾಗ ಮನಕಲಕುವ ದೃಶ್ಯ ವೈರಲ್‌ ಆಗಿದೆ. ಕೇಸರಿ ಪಡೆಯ ದೌರ್ಜನ್ಯವನ್ನು ಖಂಡಿಸಿದ ಏಕಾಂಗಿ ಹೆಣ್ಣುಮಗಳು ಧಾರ್ಮಿಕ ಹಕ್ಕನ್ನು ಪ್ರತಿಪಾದಿಸಿದ್ದು, ಪ್ರಶಂಸೆಗೆ ಪಾತ್ರವಾಗಿದೆ.

ವಿದ್ಯಾರ್ಥಿನಿ ಮುಸ್ಕಾನ್ ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, “ನಾನು ಚಿಂತಿಸಲಿಲ್ಲ. ನಾನು ಕಾಲೇಜಿಗೆ ಪ್ರವೇಶಿಸಿದಾಗ ನಾನು ಬುರ್ಖಾ ಧರಿಸಿದ್ದಕ್ಕಾಗಿ ಅವರು ನನಗೆ ಅವಕಾಶ ನೀಡಲಿಲ್ಲ. ಅವರು ನಮ್ಮ ಶಿಕ್ಷಣವನ್ನು ಹಾಳುಮಾಡುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಎರಡು ಪಟ್ಟಣಗಳಲ್ಲಿ ಹಿಜಾಬ್ ಧರಿಸಿದ ಪ್ರತಿಭಟನಾಕಾರರು ಮತ್ತು ಕೇಸರಿ ಶಾಲು ಧರಿಸಿದವರು ಪರಸ್ಪರ ಕಲ್ಲು ತೂರಾಟ ನಡೆಸಿದ ನಂತರ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೇಸರಿ ಸ್ಕಾರ್ಫ್ ಧರಿಸಿದ್ದ ಹುಡುಗರು ಶಾಲಾ ಆವರಣದಲ್ಲಿ ಕೇಸರಿ ಭಾವುಟ ಹಾರಿಸಿ ವಾತಾವರಣವನ್ನು ಕಲುಷಿತಗೊಳಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಚಾಕು ಹಿಡಿದುಕೊಂಡಿದ್ದ ಇಬ್ಬರನ್ನು ಸೋಮವಾರ ಕುಂದಾಪುರದಲ್ಲಿ ಬಂಧಿಸಲಾಗಿದೆ.


ಇದನ್ನೂ ಓದಿರಿ: ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...