Homeಮುಖಪುಟಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

- Advertisement -
- Advertisement -

ಬೆಂಗಳೂರು: ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಜೆಡಿಎಸ್‌ ಆಯ್ಕೆ ಮಾಡಿದೆ.

ನಾಜಿಯಾ ಶಕೀಲಾ ಅಂಗಡಿ ಅವರು ಎಂ.ಎ. ಬಿ.ಇಡಿ ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

“ಅನೇಕ ವರ್ಷಗಳಿಂದ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು” ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಶಕೀಲಾ ಅಂಗಡಿ

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯನ್ನಾಗಿ ಬಿ.ಇ. ಎಂ.ಟೆಕ್‌‌ ಪದವೀಧರರಾಗಿರುವ ನಿಯಾಜ್ ಶೇಕ್ ಅವರನ್ನು ಎಚ್.ಡಿ.ಕುಮಾರಸ್ವಾಮಿ ಅವರು ಆಯ್ಕೆ ಮಾಡಿದ್ದಾರೆ.

ನಿಯಾಜ್ ಶೇಕ್

ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ.

ಬಿಜೆಪಿಯ ಅಭ್ಯರ್ಥಿ ಯಾರು?: ಸಿಂದಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾನಗಲ್‌ ಕ್ಷೇತ್ರಕ್ಕೆ ಗದಗ ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಉದಾಸಿ ಅವರನ್ನು ಕಣಕ್ಕಿಳಿಸಲಾಗುವುದು ಎನ್ನಲಾಗುತ್ತಿದೆ.

ಕಾಂಗ್ರೆಸ್‌ನಲ್ಲಿ ಬೆಳವಣಿಗೆ ಏನು?: ಹಾನಗಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಶೀಲ್ದಾರ ಸೇರಿದಂತೆ ಇನ್ನು ಆನೇಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಆರ್‌.ಧ್ರುವನಾರಾಯಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು (ಅ.2) ಸಭೆ ನಡೆದಿದೆ. ಸೆಪ್ಟೆಂಬರ್‌ 28ರಂದೇ ಕಾಂಗ್ರೆಸ್‌, ಸಿಂದಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅಶೋಕ್ ‌ಮನಗೂಳಿ‌ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಯಾರೆಂಬುದು ಇಂದು ಅಥವಾ ನಾಳೆ ಕಾಂಗ್ರೆಸ್‌ ಘೋಷಿಸುವ ಸಾಧ್ಯತೆ ಇದೆ.

ಅಶೋಕ್ ‌ಮನಗೂಳಿ‌

ಸಿಂಧಗಿಯ ಜೆಡಿಎಸ್‌ ಶಾಸಕ  ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ ಶಾಸಕ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. 2018ರ ಚುನಾವಣೆಯಲ್ಲಿ ಎಂ.ಸಿ.ಮನಗೂಳಿ ಅವರು 70,865 ಮತಗಳನ್ನು ಪಡೆದು ಜಯಗಳಿಸಿದ್ದರು. ಪ್ರತಿಸ್ಪರ್ಧಿ ಬಿಜೆಪಿಯ ರಮೇಶ ಭೂಸನೂರ 61,560 ಮತಗಳನ್ನು ಪಡೆದು, 9305 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಎಂ.ಉದಾಸಿ 80,529 ಮತಗಳನ್ನು ಪಡೆದು ಜಯಭೇರಿ ಭಾರಿಸಿದ್ದರು. ಅವರ ವಿರುದ್ಧ ಕಾಂಗ್ರೆಸ್‌ನ ಮಾನೆ ಶ್ರೀನಿವಾಸ್‌ 74,015 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...