Homeಚಳವಳಿದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ - ಟ್ವಿಟ್ಟರ್ ಟ್ರೆಂಡಿಂಗ್

ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

- Advertisement -
- Advertisement -

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಹಿಂದಿ ಹೇರಿಕೆ ವಿರೋಧಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರನಟರು-ರಾಜಕಾರಣಿಗಳ ಬೆಂಬಲ ಸಿಕ್ಕಿದೆ. ಹಾಗಾಗಿ ಇಂದು ಟ್ವಿಟ್ಟರ್‌ನಲ್ಲಿ #WeWantTwolanguagepolicy ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದೆ.

ರಾಜ್ಯಾದ್ಯಂತ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ನೀತಿಯನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಟ್ವಿಟ್ಟರ್‌ನಲ್ಲಿ ಆಗ್ರಹ ಜೋರಾಗಿದೆ. ಉತ್ತರ ಭಾರತೀಯರು ತಮ್ಮ ಮಾತೃಭಾಷೆಯಾದ ಹಿಂದಿ ಜೊತೆಗೆ ವ್ಯವಹಾರಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯುತ್ತಾರೆ. ತಮಿಳಿಗರು ಕೂಡ ತಮಿಳಿನ ಜೊತೆ ಇಂಗ್ಲಿಷ್ ಕಲಿಯುತ್ತಾರೆ. ಆದರೆ, ಕರ್ನಾಟಕದಲ್ಲಿ ಕನ್ನಡದ ಜೊತೆಗೆ ವ್ಯಾವಹಾರಿಕ ಭಾಷೆಯಾಗಿ ಇಂಗ್ಲಿಷ್ ಭಾಷೆಯನ್ನು ಕಲಿಯುತ್ತಾರೆ. ಆದರೂ ಮೂರನೇಯ ಭಾಷೆಯಾಗಿ ಹಿಂದಿ ಹೇರಿಕೆ ಏಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು..? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ನಮ್ಮ ರಾಜ್ಯದ ಮೇಲೆ ಉತ್ತರ ಭಾರತದಿಂದ ಹೇರಲ್ಪಟ್ಟ ಭಾಷೆ. ಅನಗತ್ಯವಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿಯನ್ನು ಪಠ್ಯಕ್ರಮದಲ್ಲಿ ಸೇರಿಸಿ ಮಕ್ಕಳನ್ನು ಒತ್ತಡಕ್ಕೆ ಒಳಗಾಗಿಸುತ್ತಿದ್ದೇವೆ. ಬದಲಿಗೆ ನಮ್ಮದೇ ರಾಜ್ಯದ ತುಳು, ಕೊಡವ ಭಾಷೆಗಳನ್ನು ಕಲಿಯುವ ಆಸಕ್ತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬಹುದು ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷಾ ಸೂತ್ರದ ವಿರುದ್ಧದ ಕೂಗು ಬಹಳ ಹಿಂದಿನದ್ದು. ಕುವೆಂಪು,ತೇಜಸ್ವಿ ಹಾಗೆ ಅನೇಕ ಸಾಹಿತಿಗಳು ತ್ರಿಭಾಷಾ ಸೂತ್ರದ ವಿರುದ್ಧ ಇದ್ದವರೇ, ಇಂದಿನ ಯುವಕರು ದ್ವಿಭಾಷಾ ಸೂತ್ರದ ಪರ ಧ್ವನಿ ಎತ್ತುವುದರೊಂದಿಗೆ ತ್ರಿಭಾಷಾ ಸೂತ್ರದ ವಿರುದ್ಧದ ಹೋರಾಟವನ್ನು ಮುನ್ನೆಲೆಗೆ ತೆಗೆದುಕೊಂಡು ಬಂದಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇಬೇಕೆನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು? ಕರ್ನಾಟಕ ಪಠ್ಯದಲ್ಲಿ ಹಿಂದಿ ಸೇರಿಸಿರುವುದು ಹಿಂದಿ ಹೇರಿಕೆಯ ಮಹಾ ಹುನ್ನಾರ ಎಂದು ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನೆರೆಯ ತಮಿಳುನಾಡು ಹಾಗೂ ಉತ್ತರದ ಕೆಲ ರಾಜ್ಯಗಳಂತೆ ಕರ್ನಾಟಕದಲ್ಲೂ ದ್ವಿಭಾಷಾನೀತಿ ಜಾರಿಗೆ ಬರಬೇಕು. ಇತರೆ (optional) ಭಾಷೆಗಳನ್ನು ಆಯ್ಕೆ ಮಾಡುವ ಅವಕಾಶ ಕಲಿಯುವವರದ್ದಾಗಿರಬೇಕು!! ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ನಡೆಯಬಾರದು. ತ್ರಿಭಾಷಾನೀತಿ ಹೇರಣೆಯ ವಿರುದ್ಧ ಕೈಜೋಡಿಸೋಣ ಎಂದು ನಟ ವಸಿಷ್ಠ ಸಿಂಹ ಮನವಿ ಮಾಡಿದ್ದಾರೆ.

ಬಹಳಷ್ಟು ಕನ್ನಡಿಗರು ದ್ವಿಭಾಷಾ ನೀತಿ ಸಾಕು, ಹಿಂದಿ ಹೇರಿಕೆ ಬೇಡ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...