Homeಚಳವಳಿದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ - ಟ್ವಿಟ್ಟರ್ ಟ್ರೆಂಡಿಂಗ್

ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

- Advertisement -
- Advertisement -

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಹಿಂದಿ ಹೇರಿಕೆ ವಿರೋಧಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರನಟರು-ರಾಜಕಾರಣಿಗಳ ಬೆಂಬಲ ಸಿಕ್ಕಿದೆ. ಹಾಗಾಗಿ ಇಂದು ಟ್ವಿಟ್ಟರ್‌ನಲ್ಲಿ #WeWantTwolanguagepolicy ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದೆ.

ರಾಜ್ಯಾದ್ಯಂತ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ನೀತಿಯನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಟ್ವಿಟ್ಟರ್‌ನಲ್ಲಿ ಆಗ್ರಹ ಜೋರಾಗಿದೆ. ಉತ್ತರ ಭಾರತೀಯರು ತಮ್ಮ ಮಾತೃಭಾಷೆಯಾದ ಹಿಂದಿ ಜೊತೆಗೆ ವ್ಯವಹಾರಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯುತ್ತಾರೆ. ತಮಿಳಿಗರು ಕೂಡ ತಮಿಳಿನ ಜೊತೆ ಇಂಗ್ಲಿಷ್ ಕಲಿಯುತ್ತಾರೆ. ಆದರೆ, ಕರ್ನಾಟಕದಲ್ಲಿ ಕನ್ನಡದ ಜೊತೆಗೆ ವ್ಯಾವಹಾರಿಕ ಭಾಷೆಯಾಗಿ ಇಂಗ್ಲಿಷ್ ಭಾಷೆಯನ್ನು ಕಲಿಯುತ್ತಾರೆ. ಆದರೂ ಮೂರನೇಯ ಭಾಷೆಯಾಗಿ ಹಿಂದಿ ಹೇರಿಕೆ ಏಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು..? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ನಮ್ಮ ರಾಜ್ಯದ ಮೇಲೆ ಉತ್ತರ ಭಾರತದಿಂದ ಹೇರಲ್ಪಟ್ಟ ಭಾಷೆ. ಅನಗತ್ಯವಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿಯನ್ನು ಪಠ್ಯಕ್ರಮದಲ್ಲಿ ಸೇರಿಸಿ ಮಕ್ಕಳನ್ನು ಒತ್ತಡಕ್ಕೆ ಒಳಗಾಗಿಸುತ್ತಿದ್ದೇವೆ. ಬದಲಿಗೆ ನಮ್ಮದೇ ರಾಜ್ಯದ ತುಳು, ಕೊಡವ ಭಾಷೆಗಳನ್ನು ಕಲಿಯುವ ಆಸಕ್ತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬಹುದು ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷಾ ಸೂತ್ರದ ವಿರುದ್ಧದ ಕೂಗು ಬಹಳ ಹಿಂದಿನದ್ದು. ಕುವೆಂಪು,ತೇಜಸ್ವಿ ಹಾಗೆ ಅನೇಕ ಸಾಹಿತಿಗಳು ತ್ರಿಭಾಷಾ ಸೂತ್ರದ ವಿರುದ್ಧ ಇದ್ದವರೇ, ಇಂದಿನ ಯುವಕರು ದ್ವಿಭಾಷಾ ಸೂತ್ರದ ಪರ ಧ್ವನಿ ಎತ್ತುವುದರೊಂದಿಗೆ ತ್ರಿಭಾಷಾ ಸೂತ್ರದ ವಿರುದ್ಧದ ಹೋರಾಟವನ್ನು ಮುನ್ನೆಲೆಗೆ ತೆಗೆದುಕೊಂಡು ಬಂದಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇಬೇಕೆನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು? ಕರ್ನಾಟಕ ಪಠ್ಯದಲ್ಲಿ ಹಿಂದಿ ಸೇರಿಸಿರುವುದು ಹಿಂದಿ ಹೇರಿಕೆಯ ಮಹಾ ಹುನ್ನಾರ ಎಂದು ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನೆರೆಯ ತಮಿಳುನಾಡು ಹಾಗೂ ಉತ್ತರದ ಕೆಲ ರಾಜ್ಯಗಳಂತೆ ಕರ್ನಾಟಕದಲ್ಲೂ ದ್ವಿಭಾಷಾನೀತಿ ಜಾರಿಗೆ ಬರಬೇಕು. ಇತರೆ (optional) ಭಾಷೆಗಳನ್ನು ಆಯ್ಕೆ ಮಾಡುವ ಅವಕಾಶ ಕಲಿಯುವವರದ್ದಾಗಿರಬೇಕು!! ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ನಡೆಯಬಾರದು. ತ್ರಿಭಾಷಾನೀತಿ ಹೇರಣೆಯ ವಿರುದ್ಧ ಕೈಜೋಡಿಸೋಣ ಎಂದು ನಟ ವಸಿಷ್ಠ ಸಿಂಹ ಮನವಿ ಮಾಡಿದ್ದಾರೆ.

ಬಹಳಷ್ಟು ಕನ್ನಡಿಗರು ದ್ವಿಭಾಷಾ ನೀತಿ ಸಾಕು, ಹಿಂದಿ ಹೇರಿಕೆ ಬೇಡ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...