Homeಚಳವಳಿದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ - ಟ್ವಿಟ್ಟರ್ ಟ್ರೆಂಡಿಂಗ್

ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

- Advertisement -
- Advertisement -

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಹಿಂದಿ ಹೇರಿಕೆ ವಿರೋಧಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರನಟರು-ರಾಜಕಾರಣಿಗಳ ಬೆಂಬಲ ಸಿಕ್ಕಿದೆ. ಹಾಗಾಗಿ ಇಂದು ಟ್ವಿಟ್ಟರ್‌ನಲ್ಲಿ #WeWantTwolanguagepolicy ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದೆ.

ರಾಜ್ಯಾದ್ಯಂತ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ನೀತಿಯನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಟ್ವಿಟ್ಟರ್‌ನಲ್ಲಿ ಆಗ್ರಹ ಜೋರಾಗಿದೆ. ಉತ್ತರ ಭಾರತೀಯರು ತಮ್ಮ ಮಾತೃಭಾಷೆಯಾದ ಹಿಂದಿ ಜೊತೆಗೆ ವ್ಯವಹಾರಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯುತ್ತಾರೆ. ತಮಿಳಿಗರು ಕೂಡ ತಮಿಳಿನ ಜೊತೆ ಇಂಗ್ಲಿಷ್ ಕಲಿಯುತ್ತಾರೆ. ಆದರೆ, ಕರ್ನಾಟಕದಲ್ಲಿ ಕನ್ನಡದ ಜೊತೆಗೆ ವ್ಯಾವಹಾರಿಕ ಭಾಷೆಯಾಗಿ ಇಂಗ್ಲಿಷ್ ಭಾಷೆಯನ್ನು ಕಲಿಯುತ್ತಾರೆ. ಆದರೂ ಮೂರನೇಯ ಭಾಷೆಯಾಗಿ ಹಿಂದಿ ಹೇರಿಕೆ ಏಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು..? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ನಮ್ಮ ರಾಜ್ಯದ ಮೇಲೆ ಉತ್ತರ ಭಾರತದಿಂದ ಹೇರಲ್ಪಟ್ಟ ಭಾಷೆ. ಅನಗತ್ಯವಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿಯನ್ನು ಪಠ್ಯಕ್ರಮದಲ್ಲಿ ಸೇರಿಸಿ ಮಕ್ಕಳನ್ನು ಒತ್ತಡಕ್ಕೆ ಒಳಗಾಗಿಸುತ್ತಿದ್ದೇವೆ. ಬದಲಿಗೆ ನಮ್ಮದೇ ರಾಜ್ಯದ ತುಳು, ಕೊಡವ ಭಾಷೆಗಳನ್ನು ಕಲಿಯುವ ಆಸಕ್ತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬಹುದು ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷಾ ಸೂತ್ರದ ವಿರುದ್ಧದ ಕೂಗು ಬಹಳ ಹಿಂದಿನದ್ದು. ಕುವೆಂಪು,ತೇಜಸ್ವಿ ಹಾಗೆ ಅನೇಕ ಸಾಹಿತಿಗಳು ತ್ರಿಭಾಷಾ ಸೂತ್ರದ ವಿರುದ್ಧ ಇದ್ದವರೇ, ಇಂದಿನ ಯುವಕರು ದ್ವಿಭಾಷಾ ಸೂತ್ರದ ಪರ ಧ್ವನಿ ಎತ್ತುವುದರೊಂದಿಗೆ ತ್ರಿಭಾಷಾ ಸೂತ್ರದ ವಿರುದ್ಧದ ಹೋರಾಟವನ್ನು ಮುನ್ನೆಲೆಗೆ ತೆಗೆದುಕೊಂಡು ಬಂದಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇಬೇಕೆನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು? ಕರ್ನಾಟಕ ಪಠ್ಯದಲ್ಲಿ ಹಿಂದಿ ಸೇರಿಸಿರುವುದು ಹಿಂದಿ ಹೇರಿಕೆಯ ಮಹಾ ಹುನ್ನಾರ ಎಂದು ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನೆರೆಯ ತಮಿಳುನಾಡು ಹಾಗೂ ಉತ್ತರದ ಕೆಲ ರಾಜ್ಯಗಳಂತೆ ಕರ್ನಾಟಕದಲ್ಲೂ ದ್ವಿಭಾಷಾನೀತಿ ಜಾರಿಗೆ ಬರಬೇಕು. ಇತರೆ (optional) ಭಾಷೆಗಳನ್ನು ಆಯ್ಕೆ ಮಾಡುವ ಅವಕಾಶ ಕಲಿಯುವವರದ್ದಾಗಿರಬೇಕು!! ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ನಡೆಯಬಾರದು. ತ್ರಿಭಾಷಾನೀತಿ ಹೇರಣೆಯ ವಿರುದ್ಧ ಕೈಜೋಡಿಸೋಣ ಎಂದು ನಟ ವಸಿಷ್ಠ ಸಿಂಹ ಮನವಿ ಮಾಡಿದ್ದಾರೆ.

ಬಹಳಷ್ಟು ಕನ್ನಡಿಗರು ದ್ವಿಭಾಷಾ ನೀತಿ ಸಾಕು, ಹಿಂದಿ ಹೇರಿಕೆ ಬೇಡ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....