Homeಚಳವಳಿದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ - ಟ್ವಿಟ್ಟರ್ ಟ್ರೆಂಡಿಂಗ್

ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

- Advertisement -
- Advertisement -

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಹಿಂದಿ ಹೇರಿಕೆ ವಿರೋಧಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರನಟರು-ರಾಜಕಾರಣಿಗಳ ಬೆಂಬಲ ಸಿಕ್ಕಿದೆ. ಹಾಗಾಗಿ ಇಂದು ಟ್ವಿಟ್ಟರ್‌ನಲ್ಲಿ #WeWantTwolanguagepolicy ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದೆ.

ರಾಜ್ಯಾದ್ಯಂತ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ನೀತಿಯನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಟ್ವಿಟ್ಟರ್‌ನಲ್ಲಿ ಆಗ್ರಹ ಜೋರಾಗಿದೆ. ಉತ್ತರ ಭಾರತೀಯರು ತಮ್ಮ ಮಾತೃಭಾಷೆಯಾದ ಹಿಂದಿ ಜೊತೆಗೆ ವ್ಯವಹಾರಕ್ಕಾಗಿ ಇಂಗ್ಲಿಷ್ ಭಾಷೆ ಕಲಿಯುತ್ತಾರೆ. ತಮಿಳಿಗರು ಕೂಡ ತಮಿಳಿನ ಜೊತೆ ಇಂಗ್ಲಿಷ್ ಕಲಿಯುತ್ತಾರೆ. ಆದರೆ, ಕರ್ನಾಟಕದಲ್ಲಿ ಕನ್ನಡದ ಜೊತೆಗೆ ವ್ಯಾವಹಾರಿಕ ಭಾಷೆಯಾಗಿ ಇಂಗ್ಲಿಷ್ ಭಾಷೆಯನ್ನು ಕಲಿಯುತ್ತಾರೆ. ಆದರೂ ಮೂರನೇಯ ಭಾಷೆಯಾಗಿ ಹಿಂದಿ ಹೇರಿಕೆ ಏಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು..? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ನಮ್ಮ ರಾಜ್ಯದ ಮೇಲೆ ಉತ್ತರ ಭಾರತದಿಂದ ಹೇರಲ್ಪಟ್ಟ ಭಾಷೆ. ಅನಗತ್ಯವಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿಯನ್ನು ಪಠ್ಯಕ್ರಮದಲ್ಲಿ ಸೇರಿಸಿ ಮಕ್ಕಳನ್ನು ಒತ್ತಡಕ್ಕೆ ಒಳಗಾಗಿಸುತ್ತಿದ್ದೇವೆ. ಬದಲಿಗೆ ನಮ್ಮದೇ ರಾಜ್ಯದ ತುಳು, ಕೊಡವ ಭಾಷೆಗಳನ್ನು ಕಲಿಯುವ ಆಸಕ್ತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬಹುದು ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷಾ ಸೂತ್ರದ ವಿರುದ್ಧದ ಕೂಗು ಬಹಳ ಹಿಂದಿನದ್ದು. ಕುವೆಂಪು,ತೇಜಸ್ವಿ ಹಾಗೆ ಅನೇಕ ಸಾಹಿತಿಗಳು ತ್ರಿಭಾಷಾ ಸೂತ್ರದ ವಿರುದ್ಧ ಇದ್ದವರೇ, ಇಂದಿನ ಯುವಕರು ದ್ವಿಭಾಷಾ ಸೂತ್ರದ ಪರ ಧ್ವನಿ ಎತ್ತುವುದರೊಂದಿಗೆ ತ್ರಿಭಾಷಾ ಸೂತ್ರದ ವಿರುದ್ಧದ ಹೋರಾಟವನ್ನು ಮುನ್ನೆಲೆಗೆ ತೆಗೆದುಕೊಂಡು ಬಂದಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇಬೇಕೆನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು? ಕರ್ನಾಟಕ ಪಠ್ಯದಲ್ಲಿ ಹಿಂದಿ ಸೇರಿಸಿರುವುದು ಹಿಂದಿ ಹೇರಿಕೆಯ ಮಹಾ ಹುನ್ನಾರ ಎಂದು ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನೆರೆಯ ತಮಿಳುನಾಡು ಹಾಗೂ ಉತ್ತರದ ಕೆಲ ರಾಜ್ಯಗಳಂತೆ ಕರ್ನಾಟಕದಲ್ಲೂ ದ್ವಿಭಾಷಾನೀತಿ ಜಾರಿಗೆ ಬರಬೇಕು. ಇತರೆ (optional) ಭಾಷೆಗಳನ್ನು ಆಯ್ಕೆ ಮಾಡುವ ಅವಕಾಶ ಕಲಿಯುವವರದ್ದಾಗಿರಬೇಕು!! ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ನಡೆಯಬಾರದು. ತ್ರಿಭಾಷಾನೀತಿ ಹೇರಣೆಯ ವಿರುದ್ಧ ಕೈಜೋಡಿಸೋಣ ಎಂದು ನಟ ವಸಿಷ್ಠ ಸಿಂಹ ಮನವಿ ಮಾಡಿದ್ದಾರೆ.

ಬಹಳಷ್ಟು ಕನ್ನಡಿಗರು ದ್ವಿಭಾಷಾ ನೀತಿ ಸಾಕು, ಹಿಂದಿ ಹೇರಿಕೆ ಬೇಡ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...