Homeಮುಖಪುಟಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

ಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

- Advertisement -
- Advertisement -

ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಪೈಕಿ ಮೂವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಜನವರಿ 9ರಂದು ರದ್ದುಪಡಿಸಿದ್ದ ಸುಪ್ರೀಂ ಕೋರ್ಟ್‌ ಮುಂದಿನ ಎರಡು ವಾರಗಳಲ್ಲಿ ಜೈಲಿಗೆ ಮರಳುವಂತೆ ಸೂಚಿಸಿತ್ತು.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿ ಗೋವಿಂದಭಾಯಿ ನಾಯ್ ತಮ್ಮ ಅನಾರೋಗ್ಯ ಮತ್ತು ಮನೆಯ ಜವಾಬ್ದಾರಿಗಳನ್ನು ಉಲ್ಲೇಖಿಸಿ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದಾನೆ. “ನನ್ನ 88 ವರ್ಷದ ತಂದೆ ಹಾಸಿಗೆ ಹಿಡಿದಿದ್ದಾರೆ. ಅವರು ನನ್ನ ಮೇಲೆ ಅವಲಂಬಿತರಾಗಿದ್ದಾರೆ. ಹೆತ್ತವರನ್ನು ನೋಡಿಕೊಳ್ಳಲು ನನ್ನನ್ನು ಬಿಟ್ಟು ಬೇರೆ ಯಾರು ಇಲ್ಲ” ಎಂದು ಆತ ತನ್ನ ಅರ್ಜಿಯಲ್ಲಿ ಹೇಳಿದ್ದಾನೆ.

ಅಲ್ಲದೆ, ಇತ್ತೀಚೆಗೆ ಆಂಜಿಯೋಗ್ರಫಿಗೆ ಒಳಗಾಗಿದ್ದೇನೆ. ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. 55 ವರ್ಷ ವಯಸ್ಸಿನವನಾದ ನಾನು ಆಸ್ತಮಾದಿಂದ ಬಳಲುತ್ತಿದ್ದು, ಆರೋಗ್ಯ ಮಟ್ಟ ನಿಜವಾಗಿಯೂ ಕಳಪೆಯಾಗಿದೆ ಎಂದು ಹೇಳಿಕೊಂಡಿದ್ದಾನೆ.

ಮತ್ತೊಬ್ಬ ಅತ್ಯಾಚಾರಿ ರಮೇಶ್ ರೂಪಾಭಾಯ್ ಚಂದನ್, ತನ್ನ ಮಗನಿಗೆ ಮದುವೆಯಿದೆ, ಹಾಗಾಗಿ ಆರು ವಾರಗಳ ಕಾಲಾವಕಾಶ ನೀಡುವಂತೆ ಕೋರಿದ್ದಾನೆ. ಇನ್ನೋರ್ವ ಅತ್ಯಾಚಾರಿ ಮಿತೇಶ್ ಚಿಮನ್ಲಾಲ್ ಭಟ್, ತನ್ನ ಚಳಿಗಾಲದ ಕೃಷಿ ಉತ್ಪನ್ನಗಳು ಕೊಯ್ಲಿಗೆ ಸಿದ್ಧವಾಗಿವೆ. ಅದರ ಪ್ರಕ್ರಿಯೆ ಪೂರ್ಣಗೊಳಿಸಲು ಆರು ವಾರಗಳ ಕಾಲವಕಾಶ ಕೋರಿದ್ದಾನೆ. ಕೊಯ್ಲು ಕೆಲಸ ಮುಗಿದ ಬಳಿ ಶರಣಾಗುವುದಾಗಿ ತಿಳಿಸಿದ್ದಾನೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಅಪರಾಧಿಗಳಿಗೆ ಶರಣಾಗಲು ಜನವರಿ 21 ಕೊನೆಯ ದಿನಾಂಕವಾಗಿರುವುದರಿಂದ ಅವರು ಸಲ್ಲಿಸಿದ್ದ ಅರ್ಜಿಯನ್ನು ಆದಷ್ಟು ಬೇಗ ವಿಚಾರಣೆ ನಡೆಸಬೇಕೆಂದು ಹಿರಿಯ ವಕೀಲ ವಿ ಚಿತಂಬರೇಶ್‌ ಕೋರಿದ್ದರು.

ಈ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನಡೆಸಲು ಪೀಠವನ್ನು ರಚಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರಿಗೆ ಕೋರಲು ರಿಜಿಸ್ಟ್ರಿಗೆ ನ್ಯಾಯಮೂರ್ತಿ ಬಿವಿ ನಾಗರತ್ನ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೂವರು ಸೇರಿದಂತೆ ಒಟ್ಟು 11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿದೆ.

ಇದನ್ನೂ ಓದಿ : ರಾಮ ಮಂದಿರ ಉದ್ಘಾಟನಾ ಸಮಾರಂಭದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...