Homeಮುಖಪುಟಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

ಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

- Advertisement -
- Advertisement -

ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಪೈಕಿ ಮೂವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಜನವರಿ 9ರಂದು ರದ್ದುಪಡಿಸಿದ್ದ ಸುಪ್ರೀಂ ಕೋರ್ಟ್‌ ಮುಂದಿನ ಎರಡು ವಾರಗಳಲ್ಲಿ ಜೈಲಿಗೆ ಮರಳುವಂತೆ ಸೂಚಿಸಿತ್ತು.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿ ಗೋವಿಂದಭಾಯಿ ನಾಯ್ ತಮ್ಮ ಅನಾರೋಗ್ಯ ಮತ್ತು ಮನೆಯ ಜವಾಬ್ದಾರಿಗಳನ್ನು ಉಲ್ಲೇಖಿಸಿ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದಾನೆ. “ನನ್ನ 88 ವರ್ಷದ ತಂದೆ ಹಾಸಿಗೆ ಹಿಡಿದಿದ್ದಾರೆ. ಅವರು ನನ್ನ ಮೇಲೆ ಅವಲಂಬಿತರಾಗಿದ್ದಾರೆ. ಹೆತ್ತವರನ್ನು ನೋಡಿಕೊಳ್ಳಲು ನನ್ನನ್ನು ಬಿಟ್ಟು ಬೇರೆ ಯಾರು ಇಲ್ಲ” ಎಂದು ಆತ ತನ್ನ ಅರ್ಜಿಯಲ್ಲಿ ಹೇಳಿದ್ದಾನೆ.

ಅಲ್ಲದೆ, ಇತ್ತೀಚೆಗೆ ಆಂಜಿಯೋಗ್ರಫಿಗೆ ಒಳಗಾಗಿದ್ದೇನೆ. ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. 55 ವರ್ಷ ವಯಸ್ಸಿನವನಾದ ನಾನು ಆಸ್ತಮಾದಿಂದ ಬಳಲುತ್ತಿದ್ದು, ಆರೋಗ್ಯ ಮಟ್ಟ ನಿಜವಾಗಿಯೂ ಕಳಪೆಯಾಗಿದೆ ಎಂದು ಹೇಳಿಕೊಂಡಿದ್ದಾನೆ.

ಮತ್ತೊಬ್ಬ ಅತ್ಯಾಚಾರಿ ರಮೇಶ್ ರೂಪಾಭಾಯ್ ಚಂದನ್, ತನ್ನ ಮಗನಿಗೆ ಮದುವೆಯಿದೆ, ಹಾಗಾಗಿ ಆರು ವಾರಗಳ ಕಾಲಾವಕಾಶ ನೀಡುವಂತೆ ಕೋರಿದ್ದಾನೆ. ಇನ್ನೋರ್ವ ಅತ್ಯಾಚಾರಿ ಮಿತೇಶ್ ಚಿಮನ್ಲಾಲ್ ಭಟ್, ತನ್ನ ಚಳಿಗಾಲದ ಕೃಷಿ ಉತ್ಪನ್ನಗಳು ಕೊಯ್ಲಿಗೆ ಸಿದ್ಧವಾಗಿವೆ. ಅದರ ಪ್ರಕ್ರಿಯೆ ಪೂರ್ಣಗೊಳಿಸಲು ಆರು ವಾರಗಳ ಕಾಲವಕಾಶ ಕೋರಿದ್ದಾನೆ. ಕೊಯ್ಲು ಕೆಲಸ ಮುಗಿದ ಬಳಿ ಶರಣಾಗುವುದಾಗಿ ತಿಳಿಸಿದ್ದಾನೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಅಪರಾಧಿಗಳಿಗೆ ಶರಣಾಗಲು ಜನವರಿ 21 ಕೊನೆಯ ದಿನಾಂಕವಾಗಿರುವುದರಿಂದ ಅವರು ಸಲ್ಲಿಸಿದ್ದ ಅರ್ಜಿಯನ್ನು ಆದಷ್ಟು ಬೇಗ ವಿಚಾರಣೆ ನಡೆಸಬೇಕೆಂದು ಹಿರಿಯ ವಕೀಲ ವಿ ಚಿತಂಬರೇಶ್‌ ಕೋರಿದ್ದರು.

ಈ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನಡೆಸಲು ಪೀಠವನ್ನು ರಚಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರಿಗೆ ಕೋರಲು ರಿಜಿಸ್ಟ್ರಿಗೆ ನ್ಯಾಯಮೂರ್ತಿ ಬಿವಿ ನಾಗರತ್ನ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೂವರು ಸೇರಿದಂತೆ ಒಟ್ಟು 11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿದೆ.

ಇದನ್ನೂ ಓದಿ : ರಾಮ ಮಂದಿರ ಉದ್ಘಾಟನಾ ಸಮಾರಂಭದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...