Homeಮುಖಪುಟಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

ಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

- Advertisement -
- Advertisement -

ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಪೈಕಿ ಮೂವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಜನವರಿ 9ರಂದು ರದ್ದುಪಡಿಸಿದ್ದ ಸುಪ್ರೀಂ ಕೋರ್ಟ್‌ ಮುಂದಿನ ಎರಡು ವಾರಗಳಲ್ಲಿ ಜೈಲಿಗೆ ಮರಳುವಂತೆ ಸೂಚಿಸಿತ್ತು.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿ ಗೋವಿಂದಭಾಯಿ ನಾಯ್ ತಮ್ಮ ಅನಾರೋಗ್ಯ ಮತ್ತು ಮನೆಯ ಜವಾಬ್ದಾರಿಗಳನ್ನು ಉಲ್ಲೇಖಿಸಿ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದಾನೆ. “ನನ್ನ 88 ವರ್ಷದ ತಂದೆ ಹಾಸಿಗೆ ಹಿಡಿದಿದ್ದಾರೆ. ಅವರು ನನ್ನ ಮೇಲೆ ಅವಲಂಬಿತರಾಗಿದ್ದಾರೆ. ಹೆತ್ತವರನ್ನು ನೋಡಿಕೊಳ್ಳಲು ನನ್ನನ್ನು ಬಿಟ್ಟು ಬೇರೆ ಯಾರು ಇಲ್ಲ” ಎಂದು ಆತ ತನ್ನ ಅರ್ಜಿಯಲ್ಲಿ ಹೇಳಿದ್ದಾನೆ.

ಅಲ್ಲದೆ, ಇತ್ತೀಚೆಗೆ ಆಂಜಿಯೋಗ್ರಫಿಗೆ ಒಳಗಾಗಿದ್ದೇನೆ. ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. 55 ವರ್ಷ ವಯಸ್ಸಿನವನಾದ ನಾನು ಆಸ್ತಮಾದಿಂದ ಬಳಲುತ್ತಿದ್ದು, ಆರೋಗ್ಯ ಮಟ್ಟ ನಿಜವಾಗಿಯೂ ಕಳಪೆಯಾಗಿದೆ ಎಂದು ಹೇಳಿಕೊಂಡಿದ್ದಾನೆ.

ಮತ್ತೊಬ್ಬ ಅತ್ಯಾಚಾರಿ ರಮೇಶ್ ರೂಪಾಭಾಯ್ ಚಂದನ್, ತನ್ನ ಮಗನಿಗೆ ಮದುವೆಯಿದೆ, ಹಾಗಾಗಿ ಆರು ವಾರಗಳ ಕಾಲಾವಕಾಶ ನೀಡುವಂತೆ ಕೋರಿದ್ದಾನೆ. ಇನ್ನೋರ್ವ ಅತ್ಯಾಚಾರಿ ಮಿತೇಶ್ ಚಿಮನ್ಲಾಲ್ ಭಟ್, ತನ್ನ ಚಳಿಗಾಲದ ಕೃಷಿ ಉತ್ಪನ್ನಗಳು ಕೊಯ್ಲಿಗೆ ಸಿದ್ಧವಾಗಿವೆ. ಅದರ ಪ್ರಕ್ರಿಯೆ ಪೂರ್ಣಗೊಳಿಸಲು ಆರು ವಾರಗಳ ಕಾಲವಕಾಶ ಕೋರಿದ್ದಾನೆ. ಕೊಯ್ಲು ಕೆಲಸ ಮುಗಿದ ಬಳಿ ಶರಣಾಗುವುದಾಗಿ ತಿಳಿಸಿದ್ದಾನೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಅಪರಾಧಿಗಳಿಗೆ ಶರಣಾಗಲು ಜನವರಿ 21 ಕೊನೆಯ ದಿನಾಂಕವಾಗಿರುವುದರಿಂದ ಅವರು ಸಲ್ಲಿಸಿದ್ದ ಅರ್ಜಿಯನ್ನು ಆದಷ್ಟು ಬೇಗ ವಿಚಾರಣೆ ನಡೆಸಬೇಕೆಂದು ಹಿರಿಯ ವಕೀಲ ವಿ ಚಿತಂಬರೇಶ್‌ ಕೋರಿದ್ದರು.

ಈ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನಡೆಸಲು ಪೀಠವನ್ನು ರಚಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರಿಗೆ ಕೋರಲು ರಿಜಿಸ್ಟ್ರಿಗೆ ನ್ಯಾಯಮೂರ್ತಿ ಬಿವಿ ನಾಗರತ್ನ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೂವರು ಸೇರಿದಂತೆ ಒಟ್ಟು 11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿದೆ.

ಇದನ್ನೂ ಓದಿ : ರಾಮ ಮಂದಿರ ಉದ್ಘಾಟನಾ ಸಮಾರಂಭದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...