Homeಮುಖಪುಟಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

- Advertisement -
- Advertisement -

ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರ, ಕುಟುಂಬಸ್ಥರ ಕೊಲೆ ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ 10 ದಿನಗಳ ಕಾಲ ಪೆರೋಲ್ ನೀಡಿದ್ದು, ಮಾ.5ರಂದು ಆತನಿಗೆ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಿದೆ. ಜನವರಿ 21ರಂದು ಎಲ್ಲಾ ಅಪರಾಧಿಗಳು ಶರಣಾದ ತಿಂಗಳೊಳಗೆ ಈತ ಜಾಮೀನಲ್ಲಿ ಬಿಡುಗಡೆಯಾದ ಎರಡನೇ ಅಪರಾಧಿಯಾಗಿದ್ದಾನೆ. ಹೇಯ ಕೃತ್ಯದ ಅಪರಾಧಿಗಳು ಒಬ್ಬರ ಹಿಂದೆ ಒಬ್ಬರಂತೆ ಪೆರೋಲ್‌ನಿಂದ ಹೊರ ಬರುತ್ತಿದ್ದು, ಜನರ ಟೀಕೆಗೆ ಕಾರಣವಾಗಿದೆ.

ಕಳೆದ ವಾರ ಪೆರೋಲ್‌ಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಮೇಶ್‌ ಚಂದನಾ, ಸುಪ್ರೀಂಕೋರ್ಟ್ ಆದೇಶದ ನಂತರ ಜನವರಿ 21ರಂದು ಗೋದ್ರಾ ಪಟ್ಟಣದ ಜೈಲಿನಲ್ಲಿ ಎಲ್ಲಾ 11 ಅಪರಾಧಿಗಳ ಜೊತೆ ಶರಣಾಗಿದ್ದ.  ಅಪರಾಧಿ ಸಹೋದರಿಯ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದ, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ನೇತೃತ್ವದ ಗುಜರಾತ್‌ ಹೈಕೋರ್ಟ್‌ ಪೀಠ 10 ದಿನಗಳ ಕಾಲ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂಕೋರ್ಟ್‌ಗೆ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಚಂದನಾ  2008ರಲ್ಲಿ ಸೆರೆವಾಸ ಘೋಷಿಸಿದ ಬಳಿಕ ಬರೊಬ್ಬರಿ 1,198 ದಿನಗಳವರೆಗೆ ಪೆರೋಲ್ ಅನುಭವಿಸಿದ್ದಾನೆ. ಇದಕ್ಕೂ ಮುನ್ನ, ಪ್ರಕರಣದ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ ಪೆರೋಲ್ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದ್ದು, ಫೆಬ್ರವರಿ 7ರಿಂದ 11ರವರೆಗೆ ಗೋಧ್ರಾ ಜೈಲಿನಿಂದ ಪೆರೋಲ್ ಮೇಲೆ ಆತನಿಗೆ ಬಿಡುಗಡೆ ಮಾಡಲಾಗಿತ್ತು.

2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಾಗಿದ್ದಾರೆ. ಈ ಕಿರಾತಕರಿಗೆ ಆಗಸ್ಟ್ 2022ರಲ್ಲಿ ರಾಜ್ಯ ಸರ್ಕಾರವು 1992ರ ನೀತಿಗೆ ಅನುಗುಣವಾಗಿ ಕ್ಷಮಾದಾನವನ್ನು ನೀಡಿ ಜೈಲಿನಿಂದ ಬಿಡುಗಡೆ ಮಾಡಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದ್ದವು.

11 ಅಪರಾಧಿಗಳ ಬಿಡುಗಡೆಯ ನಂತರ ಬಿಲ್ಕಿಸ್ ಬಾನು ಅವರು ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಪೀಠ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ರದ್ದುಗೊಳಿಸಿ, ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಹೇಳಿತ್ತು. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್‌ನನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.

ಜನವರಿ 8ರಂದು ತನ್ನ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಸುಪ್ರೀಂಕೋರ್ಟ್ ಪೀಠವು, ಗುಜರಾತ್ ರಾಜ್ಯವು ಈ ನ್ಯಾಯಾಲಯವು ನೀಡಿದ ನಿರ್ದೇಶನದ ಆಧಾರದ ಮೇಲೆ ಕಾರ್ಯನಿರ್ವಹಿಸಿದೆ, ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದರು ಎಂದು ಹೇಳಿತ್ತು.

2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ನಡೆದ ಹಿಂಸಾಚಾರದ ವೇಳೆ ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಮೃತಪಟ್ಟ ಆಕೆಯ ಏಳು ಕುಟುಂಬ ಸದಸ್ಯರಲ್ಲಿ ಅವಳ ಮೂರು ವರ್ಷದ ಮಗು ಕೂಡ ಸೇರಿತ್ತು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...