Homeಮುಖಪುಟಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

- Advertisement -
- Advertisement -

ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರ, ಕುಟುಂಬಸ್ಥರ ಕೊಲೆ ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ 10 ದಿನಗಳ ಕಾಲ ಪೆರೋಲ್ ನೀಡಿದ್ದು, ಮಾ.5ರಂದು ಆತನಿಗೆ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಿದೆ. ಜನವರಿ 21ರಂದು ಎಲ್ಲಾ ಅಪರಾಧಿಗಳು ಶರಣಾದ ತಿಂಗಳೊಳಗೆ ಈತ ಜಾಮೀನಲ್ಲಿ ಬಿಡುಗಡೆಯಾದ ಎರಡನೇ ಅಪರಾಧಿಯಾಗಿದ್ದಾನೆ. ಹೇಯ ಕೃತ್ಯದ ಅಪರಾಧಿಗಳು ಒಬ್ಬರ ಹಿಂದೆ ಒಬ್ಬರಂತೆ ಪೆರೋಲ್‌ನಿಂದ ಹೊರ ಬರುತ್ತಿದ್ದು, ಜನರ ಟೀಕೆಗೆ ಕಾರಣವಾಗಿದೆ.

ಕಳೆದ ವಾರ ಪೆರೋಲ್‌ಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಮೇಶ್‌ ಚಂದನಾ, ಸುಪ್ರೀಂಕೋರ್ಟ್ ಆದೇಶದ ನಂತರ ಜನವರಿ 21ರಂದು ಗೋದ್ರಾ ಪಟ್ಟಣದ ಜೈಲಿನಲ್ಲಿ ಎಲ್ಲಾ 11 ಅಪರಾಧಿಗಳ ಜೊತೆ ಶರಣಾಗಿದ್ದ.  ಅಪರಾಧಿ ಸಹೋದರಿಯ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದ, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ನೇತೃತ್ವದ ಗುಜರಾತ್‌ ಹೈಕೋರ್ಟ್‌ ಪೀಠ 10 ದಿನಗಳ ಕಾಲ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂಕೋರ್ಟ್‌ಗೆ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಚಂದನಾ  2008ರಲ್ಲಿ ಸೆರೆವಾಸ ಘೋಷಿಸಿದ ಬಳಿಕ ಬರೊಬ್ಬರಿ 1,198 ದಿನಗಳವರೆಗೆ ಪೆರೋಲ್ ಅನುಭವಿಸಿದ್ದಾನೆ. ಇದಕ್ಕೂ ಮುನ್ನ, ಪ್ರಕರಣದ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ ಪೆರೋಲ್ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದ್ದು, ಫೆಬ್ರವರಿ 7ರಿಂದ 11ರವರೆಗೆ ಗೋಧ್ರಾ ಜೈಲಿನಿಂದ ಪೆರೋಲ್ ಮೇಲೆ ಆತನಿಗೆ ಬಿಡುಗಡೆ ಮಾಡಲಾಗಿತ್ತು.

2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಾಗಿದ್ದಾರೆ. ಈ ಕಿರಾತಕರಿಗೆ ಆಗಸ್ಟ್ 2022ರಲ್ಲಿ ರಾಜ್ಯ ಸರ್ಕಾರವು 1992ರ ನೀತಿಗೆ ಅನುಗುಣವಾಗಿ ಕ್ಷಮಾದಾನವನ್ನು ನೀಡಿ ಜೈಲಿನಿಂದ ಬಿಡುಗಡೆ ಮಾಡಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದ್ದವು.

11 ಅಪರಾಧಿಗಳ ಬಿಡುಗಡೆಯ ನಂತರ ಬಿಲ್ಕಿಸ್ ಬಾನು ಅವರು ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಪೀಠ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ರದ್ದುಗೊಳಿಸಿ, ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಹೇಳಿತ್ತು. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್‌ನನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.

ಜನವರಿ 8ರಂದು ತನ್ನ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಸುಪ್ರೀಂಕೋರ್ಟ್ ಪೀಠವು, ಗುಜರಾತ್ ರಾಜ್ಯವು ಈ ನ್ಯಾಯಾಲಯವು ನೀಡಿದ ನಿರ್ದೇಶನದ ಆಧಾರದ ಮೇಲೆ ಕಾರ್ಯನಿರ್ವಹಿಸಿದೆ, ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದರು ಎಂದು ಹೇಳಿತ್ತು.

2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ನಡೆದ ಹಿಂಸಾಚಾರದ ವೇಳೆ ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಮೃತಪಟ್ಟ ಆಕೆಯ ಏಳು ಕುಟುಂಬ ಸದಸ್ಯರಲ್ಲಿ ಅವಳ ಮೂರು ವರ್ಷದ ಮಗು ಕೂಡ ಸೇರಿತ್ತು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...