Homeಮುಖಪುಟಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

- Advertisement -
- Advertisement -

ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರ, ಕುಟುಂಬಸ್ಥರ ಕೊಲೆ ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ 10 ದಿನಗಳ ಕಾಲ ಪೆರೋಲ್ ನೀಡಿದ್ದು, ಮಾ.5ರಂದು ಆತನಿಗೆ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಿದೆ. ಜನವರಿ 21ರಂದು ಎಲ್ಲಾ ಅಪರಾಧಿಗಳು ಶರಣಾದ ತಿಂಗಳೊಳಗೆ ಈತ ಜಾಮೀನಲ್ಲಿ ಬಿಡುಗಡೆಯಾದ ಎರಡನೇ ಅಪರಾಧಿಯಾಗಿದ್ದಾನೆ. ಹೇಯ ಕೃತ್ಯದ ಅಪರಾಧಿಗಳು ಒಬ್ಬರ ಹಿಂದೆ ಒಬ್ಬರಂತೆ ಪೆರೋಲ್‌ನಿಂದ ಹೊರ ಬರುತ್ತಿದ್ದು, ಜನರ ಟೀಕೆಗೆ ಕಾರಣವಾಗಿದೆ.

ಕಳೆದ ವಾರ ಪೆರೋಲ್‌ಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಮೇಶ್‌ ಚಂದನಾ, ಸುಪ್ರೀಂಕೋರ್ಟ್ ಆದೇಶದ ನಂತರ ಜನವರಿ 21ರಂದು ಗೋದ್ರಾ ಪಟ್ಟಣದ ಜೈಲಿನಲ್ಲಿ ಎಲ್ಲಾ 11 ಅಪರಾಧಿಗಳ ಜೊತೆ ಶರಣಾಗಿದ್ದ.  ಅಪರಾಧಿ ಸಹೋದರಿಯ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದ, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ನೇತೃತ್ವದ ಗುಜರಾತ್‌ ಹೈಕೋರ್ಟ್‌ ಪೀಠ 10 ದಿನಗಳ ಕಾಲ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂಕೋರ್ಟ್‌ಗೆ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಚಂದನಾ  2008ರಲ್ಲಿ ಸೆರೆವಾಸ ಘೋಷಿಸಿದ ಬಳಿಕ ಬರೊಬ್ಬರಿ 1,198 ದಿನಗಳವರೆಗೆ ಪೆರೋಲ್ ಅನುಭವಿಸಿದ್ದಾನೆ. ಇದಕ್ಕೂ ಮುನ್ನ, ಪ್ರಕರಣದ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ ಪೆರೋಲ್ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದ್ದು, ಫೆಬ್ರವರಿ 7ರಿಂದ 11ರವರೆಗೆ ಗೋಧ್ರಾ ಜೈಲಿನಿಂದ ಪೆರೋಲ್ ಮೇಲೆ ಆತನಿಗೆ ಬಿಡುಗಡೆ ಮಾಡಲಾಗಿತ್ತು.

2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಾಗಿದ್ದಾರೆ. ಈ ಕಿರಾತಕರಿಗೆ ಆಗಸ್ಟ್ 2022ರಲ್ಲಿ ರಾಜ್ಯ ಸರ್ಕಾರವು 1992ರ ನೀತಿಗೆ ಅನುಗುಣವಾಗಿ ಕ್ಷಮಾದಾನವನ್ನು ನೀಡಿ ಜೈಲಿನಿಂದ ಬಿಡುಗಡೆ ಮಾಡಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದ್ದವು.

11 ಅಪರಾಧಿಗಳ ಬಿಡುಗಡೆಯ ನಂತರ ಬಿಲ್ಕಿಸ್ ಬಾನು ಅವರು ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಪೀಠ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ರದ್ದುಗೊಳಿಸಿ, ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಹೇಳಿತ್ತು. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್‌ನನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.

ಜನವರಿ 8ರಂದು ತನ್ನ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಸುಪ್ರೀಂಕೋರ್ಟ್ ಪೀಠವು, ಗುಜರಾತ್ ರಾಜ್ಯವು ಈ ನ್ಯಾಯಾಲಯವು ನೀಡಿದ ನಿರ್ದೇಶನದ ಆಧಾರದ ಮೇಲೆ ಕಾರ್ಯನಿರ್ವಹಿಸಿದೆ, ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದರು ಎಂದು ಹೇಳಿತ್ತು.

2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ನಡೆದ ಹಿಂಸಾಚಾರದ ವೇಳೆ ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಮೃತಪಟ್ಟ ಆಕೆಯ ಏಳು ಕುಟುಂಬ ಸದಸ್ಯರಲ್ಲಿ ಅವಳ ಮೂರು ವರ್ಷದ ಮಗು ಕೂಡ ಸೇರಿತ್ತು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...