Homeಮುಖಪುಟಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

- Advertisement -
- Advertisement -

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಂಬತ್ತು ಮಂದಿ ವಾಸಿಸುತ್ತಿದ್ದ ಗುಜರಾತ್‌ನ ದೋಹದ್ ಜಿಲ್ಲೆಯ ರಣಧಿಕ್‌ಪುರ್ ಮತ್ತು ಸಿಂಗ್‌ವಾಡ್ ಅವಳಿ ಗ್ರಾಮಗಳಲ್ಲಿ ಮನೆಗಳಿಗೆ ಬೀಗ ಹಾಕಲಾಗಿದೆ. ಅಲ್ಲಿಗೆ ತೆರಳಿದರೆ ಬಾಗಿಲು ಮುಚ್ಚಿರುವ ಅಪರಾಧಿಗಳ ಮನೆಗಳು ಮತ್ತು ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿ ನಮ್ಮನ್ನು ಸ್ವಾಗತಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಸೋಮವಾರ, 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದ ಬೆನ್ನಲ್ಲೇ ನಾವು ಅಪರಾಧಿಗಳು ವಾಸಿಸುತ್ತಿದ್ದ ಗ್ರಾಮಕ್ಕೆ ತೆರಳಿದ್ದೆವು. ಆದರೆ, ಅಲ್ಲಿದ್ದ ಅವರ ಸಂಬಂಧಿಕರು 9 ಅಪರಾಧಿಗಳು ಎಲ್ಲಿದ್ದಾರೆ ಎಂಬ ಮಾಹಿತಿ ಬಿಟ್ಟುಕೊಡಲು ನಿರಾಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ನನ್ನ ಮಗ ನಿರಪರಾಧಿ. ಆತ ಕಾಂಗ್ರೆಸ್‌ನ ರಾಜಕೀಯ ದ್ವೇಷಕ್ಕೆ ಬಲಿಯಾಗಿದ್ದಾನೆ” ಎಂದು ಅಪರಾಧಿಗಳಲ್ಲಿ ಒಬ್ಬನಾದ ಗೋವಿಂದ್ ನಾಯ್ (55) ನ ತಂದೆ ಅಖಂಭಾಯ್ ಚತುರ್ಭಾಯಿ ರಾವಲ್ (87) ಹೇಳಿದ್ದಾರೆ. ಆತ ಮನೆ ಬಿಟ್ಟು ಒಂದು ವಾರ ಕಳೆಯಿತು ಎಂದು ತಿಳಿಸಿದ್ದಾರೆ.

ಶನಿವಾರ (ಜನವರಿ 6) ಗೋವಿಂದ್ ಮನೆಯಿಂದ ಹೊರ ಹೋಗಿದ್ದಾನೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಮ್ಮದು ಹಿಂದೂ ಧರ್ಮದಲ್ಲಿ ಅತ್ಯಂತ ಶ್ರದ್ಧೆ, ಭಕ್ತಿ ಇರುವ ಕುಟುಂಬ, ನಮ್ಮ ಮಕ್ಕಳು ಆ ರೀತಿಯ ಅಪರಾಧ ಎಸಗಲು ಸಾಧ್ಯವಿಲ್ಲ” ಎಂದು ಗೋವಿಂದ್ ನಾಯ್‌ನ ವಯಸ್ಸಾದ ಪೋಷಕರು ಹೇಳಿದ್ದಾರೆ. ಗೋವಿಂದ್ ನಾಯ್‌ನ ಸಹೋದರ ಜಶ್ವಂತ್ ನಾಯ್ ಕೂಡ 11 ಅತ್ಯಾಚಾರಿಗಳಲ್ಲಿ ಒಬ್ಬ.

“ನಮ್ಮ ಮಕ್ಕಳು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಸೇವೆ ಮಾಡಬೇಕೆಂದು ನಾನು ಬಯಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ. ಏನನ್ನೂ ಮಾಡದೆ ದಿನವೂ ತಿರುಗಾಡುವುದಕ್ಕಿಂತ ಸೇವೆ ಮಾಡುವುದು ಉತ್ತಮ. ಅವರು ಜೈಲಿನಿಂದ ಬಿಡುಗಡೆಯಾದಾಗಿನಿಂದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಜೈಲಿಗೆ ಹಿಂತಿರುಗುವುದು ದೊಡ್ಡ ವಿಷಯವಲ್ಲ. ಅವರು ಕಾನೂನು ಬಾಹಿರವಾಗಿ ಜೈಲಿನಿಂದ ಹೊರಬಂದಿಲ್ಲ. ಕಾನೂನು ಪ್ರಕ್ರಿಯೆಯೊಂದಿಗೆ ಬಿಡುಗಡೆ ಮಾಡಲಾಗಿತ್ತು, ಈಗ ಕಾನೂನು ಹಿಂತಿರುಗಿ ಹೋಗುವಂತೆ ಹೇಳಿದೆ. ಆದ್ದರಿಂದ ಹಿಂತಿರುಗುತ್ತಾರೆ. ಅವರು 20 ವರ್ಷಗಳ ಕಾಲ ಜೈಲಿನಲ್ಲಿ ಕಾಲ ಕಳೆದಿದ್ದಾರೆ. ಇದು ಹೊಸದೇನಲ್ಲ” ಎಂದು ಅಖಂಭಾಯ್ ಹೇಳಿದ್ದಾರೆ.

ಅಪರಾಧಿಗಳ ಮನೆಗಳ ಪೈಕಿ ಗೋವಿಂದ್‌ನ ಮನೆ ಬಿಲ್ಕಿಸ್ ಬಾನೊ 2002 ರಲ್ಲಿ ವಾಸಿಸುತ್ತಿದ್ದ ಸ್ಥಳದಿಂದ ಅತ್ಯಂತ ದೂರದಲ್ಲಿದೆ.

ಹಿಂದಿನ ದಿನ ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ಬಿಲ್ಕಿಸ್ ಬಾನೊ ಮತ್ತು ಆಕೆಯ ಕುಟುಂಬ ಫೆಬ್ರವರಿ 28,2002 ರಂದು ರಣಧಿಕ್‌ಪುರದಲ್ಲಿದ್ದ ತಮ್ಮ ಮನೆಯನ್ನು ತೊರೆದಿದ್ದರು. ಮಾರ್ಚ್ 3,2002 ರಂದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು ಮತ್ತು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದ 14 ಸದಸ್ಯರನ್ನು ದಾಹೋಡ್‌ನ ಲಿಮ್ಖೇಡಾ ತಾಲೂಕಿನ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ಮೃತ 14 ಮಂದಿಯ ಪೈಕಿ ಆರು ಮಂದಿಯ ಮೃತದೇಹಗಳು ಇದುವರೆಗೆ ಪತ್ತೆಯಾಗಿಲ್ಲ.

ಜನವರಿ 21, 2008 ರಂದು ಸಿಬಿಐ ವಿಶೇಷ ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಸೋಮವಾರ ತಮ್ಮ ವರದಿಗಾರರು ತೆರಳಿದ್ದ ವೇಳೆ ಅತ್ಯಾಚಾರಿ ಗೋವಿಂದ್‌ನ ಮನೆಗೆ ಬೀಗ ಹಾಕಲಾಗಿತ್ತು. ಮನೆಯ ಮುಂದೆ ರಣಧಿಕ್‌ಪುರ್‌ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ ಕಾವಲು ಕಾಯುತ್ತಿದ್ದರು. ಗೋವಿಂದ್‌ನ ಮನೆಯ ಪಕ್ಕದಲ್ಲೇ ಆತನ ಪೋಷಕರ ಮನೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

ಬಿಲ್ಕಿಸ್ ಬಾನೊ ಅತ್ಯಾಚಾರದ ಮತ್ತೋರ್ವ ಅಪರಾಧಿ, ರಾಧೇಶ್ಯಾಮ್ ಶಾ ಕಳೆದ 15 ತಿಂಗಳಿಂದ ಮನೆಗೆ ಬಂದಿಲ್ಲ ಎಂದು ಆತನ ತಂದೆ ಭಗವಾನ್‌ದಾಸ್ ಶಾ ಹೇಳಿದ್ದಾರೆ. ಆದರೆ, ರಾಧೇಶ್ಯಾಮ್ ಸೇರಿದಂತೆ ಬಹುತೇಕ ಎಲ್ಲಾ ಅಪರಾಧಿಗಳು ಭಾನುವಾರದವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಂದು  ಸ್ಥಳೀಯರು ತಿಳಿಸಿದ್ದಾರೆ. “ರಾಧೇಶ್ಯಾಮ್ ಎಲ್ಲಿದ್ದಾನೆಂದು ನಮಗೆ ಗೊತ್ತಿಲ್ಲ. ಆತ ತನ್ನ ಹೆಂಡತಿ ಮತ್ತು ಮಗನ ಜೊತೆ ಮನೆ ಬಿಟ್ಟು ಹೋಗಿದ್ದಾನೆ” ಎಂದು ಭಗವಾನ್‌ದಾಸ್ ಹೇಳಿದ್ದಾರೆ.

ವರದಿಗಾರರು ತೆರಳಿದ್ದಾಗ ರಾಧೇಶ್ಯಾಮ್‌ನ ಸಹೋದರ ಆಶಿಶ್ ಶಾ ತರಾತುರಿಯಲ್ಲಿ ತನ್ನ ಬಟ್ಟೆ, ಬರೆಗಳನ್ನು ಪ್ಯಾಕ್ ಮಾಡ್ತಿದ್ದ. ಆತ ರಾಧೇಶ್ಯಾಮ್‌ನ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾನೆ. ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಕೇಳಿದ್ದಕ್ಕೆ, “ಈಗಷ್ಟೇ ತೀರ್ಪು ಹೊರ ಬಿದ್ದಿದೆ. ನಾವಿನ್ನೂ ನಮ್ಮ ವಕೀಲರ ಜೊತೆ ಮಾತನಾಡಿಲ್ಲ. ಮುಂದೆ ಏನು ಮಾಡೋದು ನೋಡೋಣ” ಎಂದು ಆಶಿಶ್ ಶಾ ಹೇಳಿದ್ದಾಗಿ ವರದಿ ತಿಳಿಸಿದೆ.

ಸ್ಥಳೀಯ ಅಂಗಡಿಯವರನ್ನು ಮಾತನಾಡಿಸಲು ಪ್ರಯತ್ನಿಸಲಾಯಿತಾದರೂ, ಅವರು ಯಾರೂ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಮುಂದೆ ಬಂದಿಲ್ಲ. ಎಲ್ಲರೂ ಮೌನ ಪಾಲಿಸಿದ್ದರು. ಈಗ ನಿಮಗೆ ಅವರು ಸಿಗಲಾರರು, ಅವರು ಮನೆಗಳಿಗೆ ಬೀಗ ಹಾಕಿ ತೆರಳಿದ್ದಾರೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾಗಿ ವರದಿ ಹೇಳಿದೆ.

“ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಅಪರಾಧಿಗಳ ಮನೆಗಳ ಮುಂದೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು” ಎಂದು ರಣಧಿಕ್‌ಪುರ್‌ ಪೊಲೀಸ್ ಠಾಣೆಯ ಪ್ರಭಾರಿ ಸಬ್ ಇನ್ಸ್‌ಪೆಕ್ಟರ್ ಜಿ ಬಿ ರಥ್ವಾ ಮಾಹಿತಿ ನೀಡಿದ್ದಾರೆ.

“ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆ ಮಾಧ್ಯಮದವರು ಮನೆ ಬಳಿ ಬರಬಹುದೆಂದು ಅಂದಾಜಿಸಿ ಅವರು ಬೀಗ ಹಾಕಿ ಹೋಗಿರಬಹುದು. ಅಲ್ಲದೆ, ತಲೆಮರೆಸಿಕೊಳ್ಳುವ ಉದ್ದೇಶ ಅವರಿಗೆ ಇರಲು ಸಾಧ್ಯವಿಲ್ಲ. ಏಕೆಂದರೆ, ಕಳೆದ 20 ವರ್ಷಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಗೊಂಡಾಗಲೂ ಅವರು ಯಾರೂ ತಪ್ಪಿಸಿಕೊಂಡಿಲ್ಲ” ಎಂದು ಅಪರಾಧಿ ಗೋವಿಂದ್‌ನ ತಂದೆ ಅಖಂಭಾಯ್ ಹೇಳಿದ್ದಾರೆ.

ಪ್ರಕರಣ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ (57)ನ ಮನೆಗೆ ಕೂಡ ಬೀಗ ಹಾಕಲಾಗಿತ್ತು. ಪ್ರದೀಪ್ ಸೋಮವಾರ ಮುಂಜಾನೆ ಮನೆಯಿಂದ ಹೊರ ಹೋಗಿದ್ದಾನೆ. ಆತನ ಬೈಕ್ ಮನೆ ಬಳಿಯೇ ಇದೆ. ಆದ್ದರಿಂದ ವಾಪಸ್ ಬರಬಹುದು ಎಂದು ಮನೆ ಬಳಿ ನಿಯೋಜಿಸಿದ್ದ ಸಬ್ ಇನ್ಸ್‌ಪೆಕ್ಟರ್ ಆರ್ ಎನ್ ದಾಮೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಪೊಲೀಸ್ ಭದ್ರತೆ ಕಲ್ಪಿಸಿ ಕೇವಲ ಒಂದೆರಡು ದಿನಗಳಾಗಿವೆ. ಕಳೆದ 16 ತಿಂಗಳಿನಿಂದ ಅಪರಾಧಿಗಳು ಮನೆಯಲ್ಲೇ ಇದ್ದರು. ಎಲ್ಲೂ ತಪ್ಪಿಸಿಕೊಂಡಿಲ್ಲ ಎಂದು ದಾಮೋರ್ ತಿಳಿಸಿದ್ದಾರೆ.

ಮತ್ತೋರ್ವ ಅಪರಾಧಿ ರಮೇಶ್ ಚಂದ್‌ ಮನೆಯಲ್ಲಿ ಇರಲಿಲ್ಲ. ಆತನಿಗೆ ಕರೆ ಮಾಡಿದ್ರೆ ಸ್ವೀಕರಿಸಿಲ್ಲ. 2022ರ ಆಗಸ್ಟ್‌ನಲ್ಲಿ ಆತನ ಜೈಲಿನಿಂದ ಬಿಡುಗಡೆಯಾದಾಗ ಮಾಧ್ಯಮವದರು ಆತನನ್ನು ಭೇಟಿಯಾಗಿದ್ದರು. ಸಿಂಗ್‌ವಾಡ್‌ ಗ್ರಾಮದಲ್ಲಿ ನೆಲೆಸಿದ್ದ ರಮೇಶ್, ಪ್ರಸ್ತುತ ಗೋದ್ರಾದಲ್ಲಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಮೇಶ್‌ನ ಮನೆಯ ಪಕ್ಕದಲ್ಲೇ ಆತನ ಅಳಿಯ ಪ್ರದೀಪ್‌ನ ಮನೆ ಇದೆ. ಆತನೊಂದಿಗೆ ರಮೇಶ್ ಬಗ್ಗೆ ವಿಚಾರಿಸಿದ್ದಕ್ಕೆ, “ರಮೇಶ್ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ, ಫೋನ್‌ ಮೂಲಕವೂ ಮಾತನಾಡುವುದು ಕಷ್ಟ” ಎಂದು ಹೇಳಿದ್ದಾರೆ.

ಅಪರಾಧಿ ರಾಧೇಶ್ಯಾಮ್‌ನ ಮನೆಯ ಪಕ್ಕದಲ್ಲೇ ಇನ್ನಿಬ್ಬರು ಅಪರಾಧಿಗಳಾದ ಶೈಲೇಶ್ ಭಟ್ (65) ಮತ್ತು ಮಿತೇಶ್ ಭಟ್ (58) ಮನೆಯಿದೆ. ಅಲ್ಲಿ ಅವರು ಇರುವ ಬಗ್ಗೆ ರಾಧೇಶ್ಯಾಮ್‌ನ ಮನೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ವಾಸವಿದ್ದ ಉಳಿದ ಅಪರಾಧಿಗಳೆಂದರೆ ರಾಜುಭಾಯ್ ಸೋನಿ, ಕೇಶರಭಾಯ್ ವೋಹಾನಿಯಾ, ಬಕಾಭಾಯಿ ವೋಹಾನಿಯಾ ಮತ್ತು ಬಿಪಿನ್‌ಚಂದ್ರ ಜೋಶಿ, ಇವರು ಪ್ರಸ್ತುತ ಜಿಲ್ಲೆಯಲ್ಲೇ ಇಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾಗಿ ವರದಿ ಹೇಳಿದೆ.

ಇದನ್ನೂ ಓದಿ : ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...