Homeಮುಖಪುಟಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

- Advertisement -
- Advertisement -

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಂಬತ್ತು ಮಂದಿ ವಾಸಿಸುತ್ತಿದ್ದ ಗುಜರಾತ್‌ನ ದೋಹದ್ ಜಿಲ್ಲೆಯ ರಣಧಿಕ್‌ಪುರ್ ಮತ್ತು ಸಿಂಗ್‌ವಾಡ್ ಅವಳಿ ಗ್ರಾಮಗಳಲ್ಲಿ ಮನೆಗಳಿಗೆ ಬೀಗ ಹಾಕಲಾಗಿದೆ. ಅಲ್ಲಿಗೆ ತೆರಳಿದರೆ ಬಾಗಿಲು ಮುಚ್ಚಿರುವ ಅಪರಾಧಿಗಳ ಮನೆಗಳು ಮತ್ತು ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿ ನಮ್ಮನ್ನು ಸ್ವಾಗತಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಸೋಮವಾರ, 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದ ಬೆನ್ನಲ್ಲೇ ನಾವು ಅಪರಾಧಿಗಳು ವಾಸಿಸುತ್ತಿದ್ದ ಗ್ರಾಮಕ್ಕೆ ತೆರಳಿದ್ದೆವು. ಆದರೆ, ಅಲ್ಲಿದ್ದ ಅವರ ಸಂಬಂಧಿಕರು 9 ಅಪರಾಧಿಗಳು ಎಲ್ಲಿದ್ದಾರೆ ಎಂಬ ಮಾಹಿತಿ ಬಿಟ್ಟುಕೊಡಲು ನಿರಾಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ನನ್ನ ಮಗ ನಿರಪರಾಧಿ. ಆತ ಕಾಂಗ್ರೆಸ್‌ನ ರಾಜಕೀಯ ದ್ವೇಷಕ್ಕೆ ಬಲಿಯಾಗಿದ್ದಾನೆ” ಎಂದು ಅಪರಾಧಿಗಳಲ್ಲಿ ಒಬ್ಬನಾದ ಗೋವಿಂದ್ ನಾಯ್ (55) ನ ತಂದೆ ಅಖಂಭಾಯ್ ಚತುರ್ಭಾಯಿ ರಾವಲ್ (87) ಹೇಳಿದ್ದಾರೆ. ಆತ ಮನೆ ಬಿಟ್ಟು ಒಂದು ವಾರ ಕಳೆಯಿತು ಎಂದು ತಿಳಿಸಿದ್ದಾರೆ.

ಶನಿವಾರ (ಜನವರಿ 6) ಗೋವಿಂದ್ ಮನೆಯಿಂದ ಹೊರ ಹೋಗಿದ್ದಾನೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಮ್ಮದು ಹಿಂದೂ ಧರ್ಮದಲ್ಲಿ ಅತ್ಯಂತ ಶ್ರದ್ಧೆ, ಭಕ್ತಿ ಇರುವ ಕುಟುಂಬ, ನಮ್ಮ ಮಕ್ಕಳು ಆ ರೀತಿಯ ಅಪರಾಧ ಎಸಗಲು ಸಾಧ್ಯವಿಲ್ಲ” ಎಂದು ಗೋವಿಂದ್ ನಾಯ್‌ನ ವಯಸ್ಸಾದ ಪೋಷಕರು ಹೇಳಿದ್ದಾರೆ. ಗೋವಿಂದ್ ನಾಯ್‌ನ ಸಹೋದರ ಜಶ್ವಂತ್ ನಾಯ್ ಕೂಡ 11 ಅತ್ಯಾಚಾರಿಗಳಲ್ಲಿ ಒಬ್ಬ.

“ನಮ್ಮ ಮಕ್ಕಳು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಸೇವೆ ಮಾಡಬೇಕೆಂದು ನಾನು ಬಯಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ. ಏನನ್ನೂ ಮಾಡದೆ ದಿನವೂ ತಿರುಗಾಡುವುದಕ್ಕಿಂತ ಸೇವೆ ಮಾಡುವುದು ಉತ್ತಮ. ಅವರು ಜೈಲಿನಿಂದ ಬಿಡುಗಡೆಯಾದಾಗಿನಿಂದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಜೈಲಿಗೆ ಹಿಂತಿರುಗುವುದು ದೊಡ್ಡ ವಿಷಯವಲ್ಲ. ಅವರು ಕಾನೂನು ಬಾಹಿರವಾಗಿ ಜೈಲಿನಿಂದ ಹೊರಬಂದಿಲ್ಲ. ಕಾನೂನು ಪ್ರಕ್ರಿಯೆಯೊಂದಿಗೆ ಬಿಡುಗಡೆ ಮಾಡಲಾಗಿತ್ತು, ಈಗ ಕಾನೂನು ಹಿಂತಿರುಗಿ ಹೋಗುವಂತೆ ಹೇಳಿದೆ. ಆದ್ದರಿಂದ ಹಿಂತಿರುಗುತ್ತಾರೆ. ಅವರು 20 ವರ್ಷಗಳ ಕಾಲ ಜೈಲಿನಲ್ಲಿ ಕಾಲ ಕಳೆದಿದ್ದಾರೆ. ಇದು ಹೊಸದೇನಲ್ಲ” ಎಂದು ಅಖಂಭಾಯ್ ಹೇಳಿದ್ದಾರೆ.

ಅಪರಾಧಿಗಳ ಮನೆಗಳ ಪೈಕಿ ಗೋವಿಂದ್‌ನ ಮನೆ ಬಿಲ್ಕಿಸ್ ಬಾನೊ 2002 ರಲ್ಲಿ ವಾಸಿಸುತ್ತಿದ್ದ ಸ್ಥಳದಿಂದ ಅತ್ಯಂತ ದೂರದಲ್ಲಿದೆ.

ಹಿಂದಿನ ದಿನ ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ಬಿಲ್ಕಿಸ್ ಬಾನೊ ಮತ್ತು ಆಕೆಯ ಕುಟುಂಬ ಫೆಬ್ರವರಿ 28,2002 ರಂದು ರಣಧಿಕ್‌ಪುರದಲ್ಲಿದ್ದ ತಮ್ಮ ಮನೆಯನ್ನು ತೊರೆದಿದ್ದರು. ಮಾರ್ಚ್ 3,2002 ರಂದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು ಮತ್ತು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದ 14 ಸದಸ್ಯರನ್ನು ದಾಹೋಡ್‌ನ ಲಿಮ್ಖೇಡಾ ತಾಲೂಕಿನ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ಮೃತ 14 ಮಂದಿಯ ಪೈಕಿ ಆರು ಮಂದಿಯ ಮೃತದೇಹಗಳು ಇದುವರೆಗೆ ಪತ್ತೆಯಾಗಿಲ್ಲ.

ಜನವರಿ 21, 2008 ರಂದು ಸಿಬಿಐ ವಿಶೇಷ ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಸೋಮವಾರ ತಮ್ಮ ವರದಿಗಾರರು ತೆರಳಿದ್ದ ವೇಳೆ ಅತ್ಯಾಚಾರಿ ಗೋವಿಂದ್‌ನ ಮನೆಗೆ ಬೀಗ ಹಾಕಲಾಗಿತ್ತು. ಮನೆಯ ಮುಂದೆ ರಣಧಿಕ್‌ಪುರ್‌ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ ಕಾವಲು ಕಾಯುತ್ತಿದ್ದರು. ಗೋವಿಂದ್‌ನ ಮನೆಯ ಪಕ್ಕದಲ್ಲೇ ಆತನ ಪೋಷಕರ ಮನೆಯಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

ಬಿಲ್ಕಿಸ್ ಬಾನೊ ಅತ್ಯಾಚಾರದ ಮತ್ತೋರ್ವ ಅಪರಾಧಿ, ರಾಧೇಶ್ಯಾಮ್ ಶಾ ಕಳೆದ 15 ತಿಂಗಳಿಂದ ಮನೆಗೆ ಬಂದಿಲ್ಲ ಎಂದು ಆತನ ತಂದೆ ಭಗವಾನ್‌ದಾಸ್ ಶಾ ಹೇಳಿದ್ದಾರೆ. ಆದರೆ, ರಾಧೇಶ್ಯಾಮ್ ಸೇರಿದಂತೆ ಬಹುತೇಕ ಎಲ್ಲಾ ಅಪರಾಧಿಗಳು ಭಾನುವಾರದವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಂದು  ಸ್ಥಳೀಯರು ತಿಳಿಸಿದ್ದಾರೆ. “ರಾಧೇಶ್ಯಾಮ್ ಎಲ್ಲಿದ್ದಾನೆಂದು ನಮಗೆ ಗೊತ್ತಿಲ್ಲ. ಆತ ತನ್ನ ಹೆಂಡತಿ ಮತ್ತು ಮಗನ ಜೊತೆ ಮನೆ ಬಿಟ್ಟು ಹೋಗಿದ್ದಾನೆ” ಎಂದು ಭಗವಾನ್‌ದಾಸ್ ಹೇಳಿದ್ದಾರೆ.

ವರದಿಗಾರರು ತೆರಳಿದ್ದಾಗ ರಾಧೇಶ್ಯಾಮ್‌ನ ಸಹೋದರ ಆಶಿಶ್ ಶಾ ತರಾತುರಿಯಲ್ಲಿ ತನ್ನ ಬಟ್ಟೆ, ಬರೆಗಳನ್ನು ಪ್ಯಾಕ್ ಮಾಡ್ತಿದ್ದ. ಆತ ರಾಧೇಶ್ಯಾಮ್‌ನ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾನೆ. ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಕೇಳಿದ್ದಕ್ಕೆ, “ಈಗಷ್ಟೇ ತೀರ್ಪು ಹೊರ ಬಿದ್ದಿದೆ. ನಾವಿನ್ನೂ ನಮ್ಮ ವಕೀಲರ ಜೊತೆ ಮಾತನಾಡಿಲ್ಲ. ಮುಂದೆ ಏನು ಮಾಡೋದು ನೋಡೋಣ” ಎಂದು ಆಶಿಶ್ ಶಾ ಹೇಳಿದ್ದಾಗಿ ವರದಿ ತಿಳಿಸಿದೆ.

ಸ್ಥಳೀಯ ಅಂಗಡಿಯವರನ್ನು ಮಾತನಾಡಿಸಲು ಪ್ರಯತ್ನಿಸಲಾಯಿತಾದರೂ, ಅವರು ಯಾರೂ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಮುಂದೆ ಬಂದಿಲ್ಲ. ಎಲ್ಲರೂ ಮೌನ ಪಾಲಿಸಿದ್ದರು. ಈಗ ನಿಮಗೆ ಅವರು ಸಿಗಲಾರರು, ಅವರು ಮನೆಗಳಿಗೆ ಬೀಗ ಹಾಕಿ ತೆರಳಿದ್ದಾರೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾಗಿ ವರದಿ ಹೇಳಿದೆ.

“ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಅಪರಾಧಿಗಳ ಮನೆಗಳ ಮುಂದೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು” ಎಂದು ರಣಧಿಕ್‌ಪುರ್‌ ಪೊಲೀಸ್ ಠಾಣೆಯ ಪ್ರಭಾರಿ ಸಬ್ ಇನ್ಸ್‌ಪೆಕ್ಟರ್ ಜಿ ಬಿ ರಥ್ವಾ ಮಾಹಿತಿ ನೀಡಿದ್ದಾರೆ.

“ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆ ಮಾಧ್ಯಮದವರು ಮನೆ ಬಳಿ ಬರಬಹುದೆಂದು ಅಂದಾಜಿಸಿ ಅವರು ಬೀಗ ಹಾಕಿ ಹೋಗಿರಬಹುದು. ಅಲ್ಲದೆ, ತಲೆಮರೆಸಿಕೊಳ್ಳುವ ಉದ್ದೇಶ ಅವರಿಗೆ ಇರಲು ಸಾಧ್ಯವಿಲ್ಲ. ಏಕೆಂದರೆ, ಕಳೆದ 20 ವರ್ಷಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಗೊಂಡಾಗಲೂ ಅವರು ಯಾರೂ ತಪ್ಪಿಸಿಕೊಂಡಿಲ್ಲ” ಎಂದು ಅಪರಾಧಿ ಗೋವಿಂದ್‌ನ ತಂದೆ ಅಖಂಭಾಯ್ ಹೇಳಿದ್ದಾರೆ.

ಪ್ರಕರಣ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ (57)ನ ಮನೆಗೆ ಕೂಡ ಬೀಗ ಹಾಕಲಾಗಿತ್ತು. ಪ್ರದೀಪ್ ಸೋಮವಾರ ಮುಂಜಾನೆ ಮನೆಯಿಂದ ಹೊರ ಹೋಗಿದ್ದಾನೆ. ಆತನ ಬೈಕ್ ಮನೆ ಬಳಿಯೇ ಇದೆ. ಆದ್ದರಿಂದ ವಾಪಸ್ ಬರಬಹುದು ಎಂದು ಮನೆ ಬಳಿ ನಿಯೋಜಿಸಿದ್ದ ಸಬ್ ಇನ್ಸ್‌ಪೆಕ್ಟರ್ ಆರ್ ಎನ್ ದಾಮೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಪೊಲೀಸ್ ಭದ್ರತೆ ಕಲ್ಪಿಸಿ ಕೇವಲ ಒಂದೆರಡು ದಿನಗಳಾಗಿವೆ. ಕಳೆದ 16 ತಿಂಗಳಿನಿಂದ ಅಪರಾಧಿಗಳು ಮನೆಯಲ್ಲೇ ಇದ್ದರು. ಎಲ್ಲೂ ತಪ್ಪಿಸಿಕೊಂಡಿಲ್ಲ ಎಂದು ದಾಮೋರ್ ತಿಳಿಸಿದ್ದಾರೆ.

ಮತ್ತೋರ್ವ ಅಪರಾಧಿ ರಮೇಶ್ ಚಂದ್‌ ಮನೆಯಲ್ಲಿ ಇರಲಿಲ್ಲ. ಆತನಿಗೆ ಕರೆ ಮಾಡಿದ್ರೆ ಸ್ವೀಕರಿಸಿಲ್ಲ. 2022ರ ಆಗಸ್ಟ್‌ನಲ್ಲಿ ಆತನ ಜೈಲಿನಿಂದ ಬಿಡುಗಡೆಯಾದಾಗ ಮಾಧ್ಯಮವದರು ಆತನನ್ನು ಭೇಟಿಯಾಗಿದ್ದರು. ಸಿಂಗ್‌ವಾಡ್‌ ಗ್ರಾಮದಲ್ಲಿ ನೆಲೆಸಿದ್ದ ರಮೇಶ್, ಪ್ರಸ್ತುತ ಗೋದ್ರಾದಲ್ಲಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಮೇಶ್‌ನ ಮನೆಯ ಪಕ್ಕದಲ್ಲೇ ಆತನ ಅಳಿಯ ಪ್ರದೀಪ್‌ನ ಮನೆ ಇದೆ. ಆತನೊಂದಿಗೆ ರಮೇಶ್ ಬಗ್ಗೆ ವಿಚಾರಿಸಿದ್ದಕ್ಕೆ, “ರಮೇಶ್ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ, ಫೋನ್‌ ಮೂಲಕವೂ ಮಾತನಾಡುವುದು ಕಷ್ಟ” ಎಂದು ಹೇಳಿದ್ದಾರೆ.

ಅಪರಾಧಿ ರಾಧೇಶ್ಯಾಮ್‌ನ ಮನೆಯ ಪಕ್ಕದಲ್ಲೇ ಇನ್ನಿಬ್ಬರು ಅಪರಾಧಿಗಳಾದ ಶೈಲೇಶ್ ಭಟ್ (65) ಮತ್ತು ಮಿತೇಶ್ ಭಟ್ (58) ಮನೆಯಿದೆ. ಅಲ್ಲಿ ಅವರು ಇರುವ ಬಗ್ಗೆ ರಾಧೇಶ್ಯಾಮ್‌ನ ಮನೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ವಾಸವಿದ್ದ ಉಳಿದ ಅಪರಾಧಿಗಳೆಂದರೆ ರಾಜುಭಾಯ್ ಸೋನಿ, ಕೇಶರಭಾಯ್ ವೋಹಾನಿಯಾ, ಬಕಾಭಾಯಿ ವೋಹಾನಿಯಾ ಮತ್ತು ಬಿಪಿನ್‌ಚಂದ್ರ ಜೋಶಿ, ಇವರು ಪ್ರಸ್ತುತ ಜಿಲ್ಲೆಯಲ್ಲೇ ಇಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾಗಿ ವರದಿ ಹೇಳಿದೆ.

ಇದನ್ನೂ ಓದಿ : ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...