HomeUncategorizedಬಿಲ್ಕಿಸ್ ಬಾನೋ ಪ್ರಕರಣದ ಆದೇಶದಲ್ಲಿ ಗುಜರಾತ್ ಸರ್ಕಾರ ವಿರುದ್ಧದ ಟೀಕೆ ತೆಗೆದುಹಾಕಲ್ಲ ಎಂದ ಸುಪ್ರೀಂ ಕೋರ್ಟ್!

ಬಿಲ್ಕಿಸ್ ಬಾನೋ ಪ್ರಕರಣದ ಆದೇಶದಲ್ಲಿ ಗುಜರಾತ್ ಸರ್ಕಾರ ವಿರುದ್ಧದ ಟೀಕೆ ತೆಗೆದುಹಾಕಲ್ಲ ಎಂದ ಸುಪ್ರೀಂ ಕೋರ್ಟ್!

- Advertisement -
- Advertisement -

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದ ಆದೇಶದಲ್ಲಿ ಮಾಡಲಾದ ಗುಜರಾತ್ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದ್ದು, ರಾಜ್ಯದ ಬಿಜೆಪಿ ಸರ್ಕಾರ ತೀವ್ರ ಮುಖಭಂಗ ಅನುಭಿಸಿದೆ. ”ರಾಜ್ಯ ಸರ್ಕಾರವು ಒಪ್ಪಂದ ಮಾಡಿಕೊಂಡಂತೆ ವರ್ತಿಸಿದೆ ಮತ್ತು ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂಬ ಹೇಳಿಕೆ ಸೇರಿದಂತೆ ಕೆಲವು ತೀಕ್ಷ್ಣ ಹೇಳಿಕೆಯನ್ನು ಸುಪ್ರಿಂಕೋರ್ಟ್ ಆದೇಶದಲ್ಲಿ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂತಹ ಕೆಲವು ಹೇಳಿಕೆಗಳನ್ನು ತೆಗೆದು ಹಾಕುವಂತೆ ಕೇಳಿಕೊಂಡಿದ್ದ ಗುಜರಾತ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ನ ಈ ಹೇಳಿಕೆ ಸೂಕ್ತವಲ್ಲ ಮತ್ತು ಪ್ರಕರಣದ ದಾಖಲೆಗೆ ವಿರುದ್ಧವಾಗಿದೆ ಮತ್ತು ಅರ್ಜಿದಾರರ ವಿರುದ್ಧ ಪಕ್ಷಪಾತ ಮಾಡುತ್ತದೆ ಎಂದು ಸರ್ಕಾರ ವಾದಿಸಿತ್ತು.

ಇದನ್ನೂಓದಿ: ಸಿಬಿಐಗೆ ನೀಡಿದ್ದ ‘ಸಾಮಾನ್ಯ ಒಪ್ಪಿಗೆ’ ಹಿಂಪಡೆದ ಕರ್ನಾಟಕ : ಇದೇ ರೀತಿಯ ನಿರ್ಧಾರ ಕೈಗೊಂಡ ಇತರ ರಾಜ್ಯಗಳು ಯಾವುವು?

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಅವರ ಕುಟುಂಬವನ್ನು ಕೊಂದ ಅಪರಾಧಿಗಳಾದ 11 ಮಂದಿಯ ಅಕಾಲಿಕ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವೇಳೆ ಗುಜರಾತ್‌ನ ಬಿಜೆಪಿ ಸರ್ಕಾರವು ಆದೇಶದಲ್ಲಿ ಇರುವ ತನ್ನ ವಿರುದ್ಧದ ಕೆಲವು ಟೀಕೆಗಳನ್ನು ತೆಗೆದುಹಾಕುವಂತೆ ಮನವಿ ಮಾಡಿತ್ತು.

ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಒಪ್ಪದೆ ನಿರಾಕರಿಸಿದೆ. “ಪರಿಶೀಲನಾ ಅರ್ಜಿಗಳು, ಸುಪ್ರಿಂಕೋರ್ಟ್‌ನ ಆದೇಶ ಮತ್ತು ಅದಕ್ಕೆ ಲಗತ್ತಿಸಲಾದ ಪೇಪರ್‌ಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ದಾಖಲೆಯಲ್ಲಿ ಯಾವುದೇ ದೋಷವಿಲ್ಲ ಅಥವಾ ಪರಿಶೀಲನಾ ಅರ್ಜಿಗೆ ಅರ್ಹತೆ ಇಲ್ಲ” ಎಂದು ಪೀಠ ಹೇಳಿದೆ.

ಬಿಲ್ಕೀಸ್ ಬಾನೋ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಭಗವಾನದಾಸ್ ಮತ್ತು ರಾಜುಭಾಯ್ ಬಾಬುಲಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ಜುಲೈನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

“ಉತ್ತಮ ನಡವಳಿಕೆ”ಗಾಗಿ ಗುಜರಾತ್ ಸರ್ಕಾರದಿಂದ ಬಿಡುಗಡೆಯಾದ 11 ಮಂದಿ ಜೈಲಿಗೆ ಮರಳಬೇಕೆಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ” ಎಂದು ದೇಶದಾದ್ಯಂತ ತೀವ್ರ ಆಕ್ರೋಶ ಉಂಟುಮಾಡಿದ ಸರ್ಕಾರದ ನಿರ್ಧಾರದ ಕುರಿತು ನೀಡಿದ್ದ ಮಹತ್ವದ ಆದೇಶದಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಜೊತೆಗೆ ಅಂತಹ ಆದೇಶವನ್ನು ಜಾರಿಗೊಳಿಸಿದ್ದಕ್ಕಾಗಿ ಗುಜರಾತ್ ಸರ್ಕಾರವನ್ನು ತೀವ್ರವಾಗಿ ಖಂಡಿಸಿತ್ತು.

ಇದನ್ನೂಓದಿ:  ಲೈಂಗಿಕ ದೌರ್ಜನ್ಯ; ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಸಮಾವೇಶದಲ್ಲಿ ಕೃತ್ಯದ ಬಗ್ಗೆ ಹೇಳಿಕೊಂಡ ಅಪ್ರಾಪ್ತ ಬಾಲಕಿ

ಅಪರಾಧಿಗಳನ್ನು ವಿಚಾರಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಮಾತ್ರ ಬಿಡುಗಡೆ ಮಾಡು ಅಧಿಕಾರ ಇದೆ ಎಂದು ಸುಪ್ರಿಂಕೋರ್ಟ್ ಹೇಳಿತ್ತು. ಬಿಲ್ಕೀಸ್ ಬಾನೋ ಅವರ ಅತ್ಯಾಚಾರ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ವಿಚಾರಣೆ ಮಾಡಿತ್ತು. “ಗುಜರಾತ್ ಸರ್ಕಾರವು ಅಧಿಕಾರವನ್ನು ಚಲಾಯಿಸುವುದು ಅಧಿಕಾರವನ್ನು ಕಿತ್ತುಕೊಳ್ಳುವ ಮತ್ತು ಅಧಿಕಾರದ ದುರುಪಯೋಗದ ನಿದರ್ಶನವಾಗಿದೆ” ಎಂದು ನ್ಯಾಯಾಲಯ ಹೇಳಿತ್ತು. “ಅಪರಾಧಿಗಳು ಮೋಸದ ಮಾರ್ಗಗಳ ಮೂಲಕ ಸರ್ಕಾರದ ಆದೇಶವನ್ನು ಪಡೆದಿದ್ದಾರೆ” ಎಂದು ನ್ಯಾಯಾಲಯ ಹೇಳಿದ್ದು, ಗುಜರಾತ್ ಸರ್ಕಾರವು 2022 ರ ಆದೇಶವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿತ್ತು.

ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಅಪರಾಧಿಗಳಿಗೆ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಿದ ನಂತರ ಅವರನ್ನು ಜೈಲಿನ ಆವರಣದಲ್ಲಿ ಮಹಿಳೆಯರು ಸೇರಿದಂತೆ ಬಿಜೆಪಿ ಬೆಂಬಲಿಗರ ಗುಂಪು ಆರತಿ ಬೆಳಗಿ, ಹೂವುನ ಹಾರ ಹಾಕಿ ಮತ್ತು ಸಿಹಿ ತಿಂಡಿಗಳು ನೀಡಿ ಸ್ವಾಗತಿಸಿದ್ದರು. ಅಲ್ಲದೆ ನಂತರದ ದಿನಗಳಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರೊಂದಿಗೆ ಅವರು ವೇದಿಕೆ ಹಂಚಿಕೊಂಡಿದ್ದು ಕೂಡಾ ವರದಿಯಾಗಿತ್ತು. ಜೊತೆಗೆ ಚುನಾವಣಾ ಪ್ರಚಾರದಲ್ಲೂ ಭಾಗವಹಿಸಿದ್ದರು. ಕಂಡುಬಂದಿತು.

ಗುಜರಾತ್ ಗಲಭೆ ವೇಳೆ 21 ವರ್ಷದ ಬಿಲ್ಕಿಸ್ ಬಾನೊ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ತಮ್ಮ ಮನೆ ಕಳೆದುಕೊಂಡು ಪರಾರಿಯಾಗುತ್ತಿದ್ದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ದುಷ್ಕರ್ಮಿಗಳು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ, ಅವರ ಮೂರು ವರ್ಷದ ಮಗಳನ್ನು ನೆಲಕ್ಕೆ ಬಡಿದುಕೊಳ್ಳಲಾಗಿತ್ತು. ನಂತರ ಅವರ ಕುಟುಂಬದ ಇತರ 6 ಜನರನ್ನು ಕೊಲೆ ಮಾಡಲಾಗಿತ್ತು. ಬಿಲ್ಕೀಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳು ಅವರು ಕೂಡಾ ಸಾವಿಗೀಡಾಗಿದ್ದಾರೆ ಎಂದು ಭಾವಿಸಿ ಅಲ್ಲಿಂದ ತೆರಳಿದ್ದರು.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...