Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪಪ್ರಕರಣದ 14 ಜನ ಅಪರಾಧಿಗಳನ್ನು ಮತ್ತು ಕೊಲೆ ಆರೋಪದ 11 ಜನರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಲು ಅನುಮತಿ ನೀಡಿದ ಕಾರಣವನ್ನು ವಿವರಿಸುವಂತೆ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸ್ವತಃ ಬಾನೋ ಅವರೇ ಸಲ್ಲಿಸಿದ ಅರ್ಜಿಗಳನ್ನು ಆಲಿಸುವಾಗ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿತು.

”ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಹಲವಾರು ಜನರನ್ನು ಕೊಲ್ಲಲಾಯಿತು” ಎಂಬುದನ್ನು ಪೀಠವು ಗಮನಿಸಿತು. ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

”ಶೀಘ್ರ ಬಿಡುಗಡೆಗಾಗಿ ಅಪರಾಧಿಗಳ ಅರ್ಜಿಗಳನ್ನು ನಿರ್ಧರಿಸುವಾಗ ಪ್ರಕರಣದ ಹಿನ್ನೆಲೆಯನ್ನು ಮನಸ್ಸಿನಿಂದ ನೋಡಬೇಕು. ಇಂದು ಬಿಲ್ಕಿಸ್ ಆದರೆ ನಾಳೆ ಅದು ಯಾರಿಗಾದರೂ ಆಗಬಹುದು.. ಸಂತ್ರಸ್ತರಿಗೆ ನೀವು ಏನು ಪರಿಹಾರ ವದಿಗಿಸಿದ್ದೀರಿ ಎನ್ನುವುದನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ನ್ಯಾಯಾಲಯವು ಗುಜರಾತ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಕೇಂದ್ರ ಮತ್ತು ಗುಜರಾತ್ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಮಾರ್ಚ್ 27 ರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎಂದು ಪಿಟಿಐ ವರದಿ ಮಾಡಿದೆ. ಅಂದು, ಅಪರಾಧಿಗಳಿಗೆ ವಿನಾಯತಿ ನೀಡುವ ಕುರಿತು ಮೂಲ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಹೇಳಿತ್ತು.

ವಿಭಾಗೀಯ ಪೀಠವು ಆ ಆದೇಶವನ್ನು ಅನುಸರಿಸಿ, ಸರ್ಕಾರದ ನಿಲುವು ನ್ಯಾಯಾಲಯದ ನಿಂದನೆಯಾಗಿದೆ ಎಂದು ಟೀಕಿಸಿತು. ಏಕೆಂದರೆ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಂಡಿದೆ. ಮರುಪರಿಶೀಲನೆ ಮಾಡಿರುವ ಫೈಲ್‌ಗಳನ್ನು ಇನ್ನೂ ಸಲ್ಲಿಸುತ್ತಿಲ್ಲ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

”ಇಂದು ಫೈಲ್‌ಗಳನ್ನು ನಮಗೆ ತೋರಿಸುವುದರಲ್ಲಿ ಏನು ಸಮಸ್ಯೆ? ನೀವು ಯಾಕೆ ದೂರ ಸರಿಯುತ್ತಿದ್ದೀರಾ? ನೀವು ವಿಮರ್ಶೆಯನ್ನು ಸಲ್ಲಿಸಿಲ್ಲ; ನಾವು ನಿಮ್ಮನ್ನು ಎಂದಿಗೂ ನಿಲ್ಲಿಸಲ್ಲ” ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಗುಜರಾತ್ ಸರ್ಕಾರದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದ ಮಾತ್ರಕ್ಕೆ ಅದನ್ನೇ ಮಾಡಬೇಕು ಎಂದಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2 ರಂದು ನಡೆಯಲಿದೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಗುಜರಾತ್‌ನ ತುಂಬಾ ಕೋಮು ಗಲಭೆಗಳು ಭುಗಿಲೆದ್ದಿದ್ದವು. ಗಲಭೆ ಸಂಸ್ಕೃತಿಯ ಅವಿಭಾಜ್ಯ ಎಂದಾಗಿರುವ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆಗಳು ಪೊಲೀಸರ ಕಣ್ಗಾವಲಿನಲ್ಲಿಯೇ ನಡೆದವು. ದಿನ ಬೆಳಗಾಗಿ ಮುಖನೋಡುತ್ತಿದ್ದ ನೆರೆಹೊರೆಯವರು ಧರ್ಮದ ಅಮಲಿನಲ್ಲಿ ರಾಕ್ಷಸರಿಗಿಂತ ವಿಪರೀತವಾಗಿ ವರ್ತಿಸಿದರು.

ಗಲಭೆಯಿಂದ ರಕ್ಷಿಸಿಕೊಳ್ಳಲು ಕುಟುಂಬ ಸಮೇತ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಗಲಭೆಕೋರರು ಬಿಲ್ಕಿಸ್ ಬಾನೋ ಕೈಯಿಂದ ಅವಳ 3 ವರ್ಷದ ಮಗುವನ್ನು ಎಳೆದುಕೊಂಡು ನೆಲಕ್ಕೆ ಚಚ್ಚಿ ಕೊಂದರು. 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ, ಅವಳನ್ನು ದಿನಲೂ ನೋಡುತ್ತಿದ್ದ ಗಂಡಸರು ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದರು. ಗಾಡಿಯಲ್ಲಿದ್ದ ಬಿಲ್ಕಿಸ್ ಕುಟುಂಬದ 7 ಸದಸ್ಯರನ್ನು ಕೊಲೆ ಮಾಡಿದರು. ಬಿಲ್ಕಿಸ್ ಕೂಡ ಸತ್ತಿರಬಹುದೆಂದುಕೊಂಡ ಕೊಲೆಗಡುಕರು ಹೊರಟುಹೋದರು. ಆ ಕರಾಳ ಹಿಂಸೆಯ ಮಧ್ಯೆ ಬದುಕುಳಿದ ಬಿಲ್ಕಿಸ್ ತನ್ನ ಗಾಯಗಳನ್ನು ದಿನವೂ ಕೆದಕುವ ಭಯಾನಕ ನೆನಪುಗಳ ವಾತಾವರಣದಲ್ಲಿ ನ್ಯಾಯಕ್ಕಾಗಿ ಮುಳ್ಳಿನ ಹಾದಿ ತುಳಿದಳು.

ಸಂಪೂರ್ಣವಾಗಿ ಸರ್ಕಾರದ ಕೈಗೊಂಬೆಯಾಗಿದ್ದ ಪೊಲೀಸರು ಅವಳ ಕಂಪ್ಲೇಂಟನ್ನು ಕಡೆಗಣಿಸಿದರು. ಅನಿವಾರ್ಯವಾಗಿ ಅವಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ಸುಪ್ರೀಂ ಕೋರ್ಟ್ 2003ರಲ್ಲಿ ಸಿಬಿಐಗೆ ವಿಚಾರಣೆಯನ್ನು ಒಪ್ಪಿಸಿತು. ಆದರೆ ನಿರಂತರವಾಗಿ ಭಯದ ನೆರಳಲ್ಲಿ ಬದುಕುತ್ತಿದ್ದ ಬಿಲ್ಕಿಸ್‌ಳ ಮನವಿಯ ಮೇರೆಗೆ ಕೇಸನ್ನು ನೆರೆ ರಾಜ್ಯವಾದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ವಿಚಾರಣೆ ನಂತರ 20 ಜನರ ಪೈಕಿ 13 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಕೋರ್ಟ್ 11 ಜನರಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು. 2017ರಲ್ಲಿ ಬಾಂಬೆ ಹೈಕೋರ್ಟ್ ಈ ತೀರ್ಮಾನವನ್ನು ಎತ್ತಿ ಹಿಡಿಯಿತು. ಅತ್ಯಾಚಾರಿ, ಕೊಲೆಗಡುಕರು ಕೊನೆಗೂ ಜೈಲು ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...