Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪಪ್ರಕರಣದ 14 ಜನ ಅಪರಾಧಿಗಳನ್ನು ಮತ್ತು ಕೊಲೆ ಆರೋಪದ 11 ಜನರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಲು ಅನುಮತಿ ನೀಡಿದ ಕಾರಣವನ್ನು ವಿವರಿಸುವಂತೆ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸ್ವತಃ ಬಾನೋ ಅವರೇ ಸಲ್ಲಿಸಿದ ಅರ್ಜಿಗಳನ್ನು ಆಲಿಸುವಾಗ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿತು.

”ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಹಲವಾರು ಜನರನ್ನು ಕೊಲ್ಲಲಾಯಿತು” ಎಂಬುದನ್ನು ಪೀಠವು ಗಮನಿಸಿತು. ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

”ಶೀಘ್ರ ಬಿಡುಗಡೆಗಾಗಿ ಅಪರಾಧಿಗಳ ಅರ್ಜಿಗಳನ್ನು ನಿರ್ಧರಿಸುವಾಗ ಪ್ರಕರಣದ ಹಿನ್ನೆಲೆಯನ್ನು ಮನಸ್ಸಿನಿಂದ ನೋಡಬೇಕು. ಇಂದು ಬಿಲ್ಕಿಸ್ ಆದರೆ ನಾಳೆ ಅದು ಯಾರಿಗಾದರೂ ಆಗಬಹುದು.. ಸಂತ್ರಸ್ತರಿಗೆ ನೀವು ಏನು ಪರಿಹಾರ ವದಿಗಿಸಿದ್ದೀರಿ ಎನ್ನುವುದನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ನ್ಯಾಯಾಲಯವು ಗುಜರಾತ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಕೇಂದ್ರ ಮತ್ತು ಗುಜರಾತ್ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಮಾರ್ಚ್ 27 ರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎಂದು ಪಿಟಿಐ ವರದಿ ಮಾಡಿದೆ. ಅಂದು, ಅಪರಾಧಿಗಳಿಗೆ ವಿನಾಯತಿ ನೀಡುವ ಕುರಿತು ಮೂಲ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಹೇಳಿತ್ತು.

ವಿಭಾಗೀಯ ಪೀಠವು ಆ ಆದೇಶವನ್ನು ಅನುಸರಿಸಿ, ಸರ್ಕಾರದ ನಿಲುವು ನ್ಯಾಯಾಲಯದ ನಿಂದನೆಯಾಗಿದೆ ಎಂದು ಟೀಕಿಸಿತು. ಏಕೆಂದರೆ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಂಡಿದೆ. ಮರುಪರಿಶೀಲನೆ ಮಾಡಿರುವ ಫೈಲ್‌ಗಳನ್ನು ಇನ್ನೂ ಸಲ್ಲಿಸುತ್ತಿಲ್ಲ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

”ಇಂದು ಫೈಲ್‌ಗಳನ್ನು ನಮಗೆ ತೋರಿಸುವುದರಲ್ಲಿ ಏನು ಸಮಸ್ಯೆ? ನೀವು ಯಾಕೆ ದೂರ ಸರಿಯುತ್ತಿದ್ದೀರಾ? ನೀವು ವಿಮರ್ಶೆಯನ್ನು ಸಲ್ಲಿಸಿಲ್ಲ; ನಾವು ನಿಮ್ಮನ್ನು ಎಂದಿಗೂ ನಿಲ್ಲಿಸಲ್ಲ” ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಗುಜರಾತ್ ಸರ್ಕಾರದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದ ಮಾತ್ರಕ್ಕೆ ಅದನ್ನೇ ಮಾಡಬೇಕು ಎಂದಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2 ರಂದು ನಡೆಯಲಿದೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಗುಜರಾತ್‌ನ ತುಂಬಾ ಕೋಮು ಗಲಭೆಗಳು ಭುಗಿಲೆದ್ದಿದ್ದವು. ಗಲಭೆ ಸಂಸ್ಕೃತಿಯ ಅವಿಭಾಜ್ಯ ಎಂದಾಗಿರುವ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆಗಳು ಪೊಲೀಸರ ಕಣ್ಗಾವಲಿನಲ್ಲಿಯೇ ನಡೆದವು. ದಿನ ಬೆಳಗಾಗಿ ಮುಖನೋಡುತ್ತಿದ್ದ ನೆರೆಹೊರೆಯವರು ಧರ್ಮದ ಅಮಲಿನಲ್ಲಿ ರಾಕ್ಷಸರಿಗಿಂತ ವಿಪರೀತವಾಗಿ ವರ್ತಿಸಿದರು.

ಗಲಭೆಯಿಂದ ರಕ್ಷಿಸಿಕೊಳ್ಳಲು ಕುಟುಂಬ ಸಮೇತ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಗಲಭೆಕೋರರು ಬಿಲ್ಕಿಸ್ ಬಾನೋ ಕೈಯಿಂದ ಅವಳ 3 ವರ್ಷದ ಮಗುವನ್ನು ಎಳೆದುಕೊಂಡು ನೆಲಕ್ಕೆ ಚಚ್ಚಿ ಕೊಂದರು. 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ, ಅವಳನ್ನು ದಿನಲೂ ನೋಡುತ್ತಿದ್ದ ಗಂಡಸರು ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದರು. ಗಾಡಿಯಲ್ಲಿದ್ದ ಬಿಲ್ಕಿಸ್ ಕುಟುಂಬದ 7 ಸದಸ್ಯರನ್ನು ಕೊಲೆ ಮಾಡಿದರು. ಬಿಲ್ಕಿಸ್ ಕೂಡ ಸತ್ತಿರಬಹುದೆಂದುಕೊಂಡ ಕೊಲೆಗಡುಕರು ಹೊರಟುಹೋದರು. ಆ ಕರಾಳ ಹಿಂಸೆಯ ಮಧ್ಯೆ ಬದುಕುಳಿದ ಬಿಲ್ಕಿಸ್ ತನ್ನ ಗಾಯಗಳನ್ನು ದಿನವೂ ಕೆದಕುವ ಭಯಾನಕ ನೆನಪುಗಳ ವಾತಾವರಣದಲ್ಲಿ ನ್ಯಾಯಕ್ಕಾಗಿ ಮುಳ್ಳಿನ ಹಾದಿ ತುಳಿದಳು.

ಸಂಪೂರ್ಣವಾಗಿ ಸರ್ಕಾರದ ಕೈಗೊಂಬೆಯಾಗಿದ್ದ ಪೊಲೀಸರು ಅವಳ ಕಂಪ್ಲೇಂಟನ್ನು ಕಡೆಗಣಿಸಿದರು. ಅನಿವಾರ್ಯವಾಗಿ ಅವಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ಸುಪ್ರೀಂ ಕೋರ್ಟ್ 2003ರಲ್ಲಿ ಸಿಬಿಐಗೆ ವಿಚಾರಣೆಯನ್ನು ಒಪ್ಪಿಸಿತು. ಆದರೆ ನಿರಂತರವಾಗಿ ಭಯದ ನೆರಳಲ್ಲಿ ಬದುಕುತ್ತಿದ್ದ ಬಿಲ್ಕಿಸ್‌ಳ ಮನವಿಯ ಮೇರೆಗೆ ಕೇಸನ್ನು ನೆರೆ ರಾಜ್ಯವಾದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ವಿಚಾರಣೆ ನಂತರ 20 ಜನರ ಪೈಕಿ 13 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಕೋರ್ಟ್ 11 ಜನರಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು. 2017ರಲ್ಲಿ ಬಾಂಬೆ ಹೈಕೋರ್ಟ್ ಈ ತೀರ್ಮಾನವನ್ನು ಎತ್ತಿ ಹಿಡಿಯಿತು. ಅತ್ಯಾಚಾರಿ, ಕೊಲೆಗಡುಕರು ಕೊನೆಗೂ ಜೈಲು ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...