Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪಪ್ರಕರಣದ 14 ಜನ ಅಪರಾಧಿಗಳನ್ನು ಮತ್ತು ಕೊಲೆ ಆರೋಪದ 11 ಜನರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಲು ಅನುಮತಿ ನೀಡಿದ ಕಾರಣವನ್ನು ವಿವರಿಸುವಂತೆ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸ್ವತಃ ಬಾನೋ ಅವರೇ ಸಲ್ಲಿಸಿದ ಅರ್ಜಿಗಳನ್ನು ಆಲಿಸುವಾಗ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿತು.

”ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಹಲವಾರು ಜನರನ್ನು ಕೊಲ್ಲಲಾಯಿತು” ಎಂಬುದನ್ನು ಪೀಠವು ಗಮನಿಸಿತು. ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

”ಶೀಘ್ರ ಬಿಡುಗಡೆಗಾಗಿ ಅಪರಾಧಿಗಳ ಅರ್ಜಿಗಳನ್ನು ನಿರ್ಧರಿಸುವಾಗ ಪ್ರಕರಣದ ಹಿನ್ನೆಲೆಯನ್ನು ಮನಸ್ಸಿನಿಂದ ನೋಡಬೇಕು. ಇಂದು ಬಿಲ್ಕಿಸ್ ಆದರೆ ನಾಳೆ ಅದು ಯಾರಿಗಾದರೂ ಆಗಬಹುದು.. ಸಂತ್ರಸ್ತರಿಗೆ ನೀವು ಏನು ಪರಿಹಾರ ವದಿಗಿಸಿದ್ದೀರಿ ಎನ್ನುವುದನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ನ್ಯಾಯಾಲಯವು ಗುಜರಾತ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಕೇಂದ್ರ ಮತ್ತು ಗುಜರಾತ್ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಮಾರ್ಚ್ 27 ರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎಂದು ಪಿಟಿಐ ವರದಿ ಮಾಡಿದೆ. ಅಂದು, ಅಪರಾಧಿಗಳಿಗೆ ವಿನಾಯತಿ ನೀಡುವ ಕುರಿತು ಮೂಲ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಹೇಳಿತ್ತು.

ವಿಭಾಗೀಯ ಪೀಠವು ಆ ಆದೇಶವನ್ನು ಅನುಸರಿಸಿ, ಸರ್ಕಾರದ ನಿಲುವು ನ್ಯಾಯಾಲಯದ ನಿಂದನೆಯಾಗಿದೆ ಎಂದು ಟೀಕಿಸಿತು. ಏಕೆಂದರೆ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಂಡಿದೆ. ಮರುಪರಿಶೀಲನೆ ಮಾಡಿರುವ ಫೈಲ್‌ಗಳನ್ನು ಇನ್ನೂ ಸಲ್ಲಿಸುತ್ತಿಲ್ಲ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

”ಇಂದು ಫೈಲ್‌ಗಳನ್ನು ನಮಗೆ ತೋರಿಸುವುದರಲ್ಲಿ ಏನು ಸಮಸ್ಯೆ? ನೀವು ಯಾಕೆ ದೂರ ಸರಿಯುತ್ತಿದ್ದೀರಾ? ನೀವು ವಿಮರ್ಶೆಯನ್ನು ಸಲ್ಲಿಸಿಲ್ಲ; ನಾವು ನಿಮ್ಮನ್ನು ಎಂದಿಗೂ ನಿಲ್ಲಿಸಲ್ಲ” ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಗುಜರಾತ್ ಸರ್ಕಾರದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದ ಮಾತ್ರಕ್ಕೆ ಅದನ್ನೇ ಮಾಡಬೇಕು ಎಂದಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2 ರಂದು ನಡೆಯಲಿದೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಗುಜರಾತ್‌ನ ತುಂಬಾ ಕೋಮು ಗಲಭೆಗಳು ಭುಗಿಲೆದ್ದಿದ್ದವು. ಗಲಭೆ ಸಂಸ್ಕೃತಿಯ ಅವಿಭಾಜ್ಯ ಎಂದಾಗಿರುವ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆಗಳು ಪೊಲೀಸರ ಕಣ್ಗಾವಲಿನಲ್ಲಿಯೇ ನಡೆದವು. ದಿನ ಬೆಳಗಾಗಿ ಮುಖನೋಡುತ್ತಿದ್ದ ನೆರೆಹೊರೆಯವರು ಧರ್ಮದ ಅಮಲಿನಲ್ಲಿ ರಾಕ್ಷಸರಿಗಿಂತ ವಿಪರೀತವಾಗಿ ವರ್ತಿಸಿದರು.

ಗಲಭೆಯಿಂದ ರಕ್ಷಿಸಿಕೊಳ್ಳಲು ಕುಟುಂಬ ಸಮೇತ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಗಲಭೆಕೋರರು ಬಿಲ್ಕಿಸ್ ಬಾನೋ ಕೈಯಿಂದ ಅವಳ 3 ವರ್ಷದ ಮಗುವನ್ನು ಎಳೆದುಕೊಂಡು ನೆಲಕ್ಕೆ ಚಚ್ಚಿ ಕೊಂದರು. 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ, ಅವಳನ್ನು ದಿನಲೂ ನೋಡುತ್ತಿದ್ದ ಗಂಡಸರು ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದರು. ಗಾಡಿಯಲ್ಲಿದ್ದ ಬಿಲ್ಕಿಸ್ ಕುಟುಂಬದ 7 ಸದಸ್ಯರನ್ನು ಕೊಲೆ ಮಾಡಿದರು. ಬಿಲ್ಕಿಸ್ ಕೂಡ ಸತ್ತಿರಬಹುದೆಂದುಕೊಂಡ ಕೊಲೆಗಡುಕರು ಹೊರಟುಹೋದರು. ಆ ಕರಾಳ ಹಿಂಸೆಯ ಮಧ್ಯೆ ಬದುಕುಳಿದ ಬಿಲ್ಕಿಸ್ ತನ್ನ ಗಾಯಗಳನ್ನು ದಿನವೂ ಕೆದಕುವ ಭಯಾನಕ ನೆನಪುಗಳ ವಾತಾವರಣದಲ್ಲಿ ನ್ಯಾಯಕ್ಕಾಗಿ ಮುಳ್ಳಿನ ಹಾದಿ ತುಳಿದಳು.

ಸಂಪೂರ್ಣವಾಗಿ ಸರ್ಕಾರದ ಕೈಗೊಂಬೆಯಾಗಿದ್ದ ಪೊಲೀಸರು ಅವಳ ಕಂಪ್ಲೇಂಟನ್ನು ಕಡೆಗಣಿಸಿದರು. ಅನಿವಾರ್ಯವಾಗಿ ಅವಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ಸುಪ್ರೀಂ ಕೋರ್ಟ್ 2003ರಲ್ಲಿ ಸಿಬಿಐಗೆ ವಿಚಾರಣೆಯನ್ನು ಒಪ್ಪಿಸಿತು. ಆದರೆ ನಿರಂತರವಾಗಿ ಭಯದ ನೆರಳಲ್ಲಿ ಬದುಕುತ್ತಿದ್ದ ಬಿಲ್ಕಿಸ್‌ಳ ಮನವಿಯ ಮೇರೆಗೆ ಕೇಸನ್ನು ನೆರೆ ರಾಜ್ಯವಾದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ವಿಚಾರಣೆ ನಂತರ 20 ಜನರ ಪೈಕಿ 13 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಕೋರ್ಟ್ 11 ಜನರಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು. 2017ರಲ್ಲಿ ಬಾಂಬೆ ಹೈಕೋರ್ಟ್ ಈ ತೀರ್ಮಾನವನ್ನು ಎತ್ತಿ ಹಿಡಿಯಿತು. ಅತ್ಯಾಚಾರಿ, ಕೊಲೆಗಡುಕರು ಕೊನೆಗೂ ಜೈಲು ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...