Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ...

ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಮುಂಚಿತ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಆ ಕುರಿತ ವಿಚಾರಣೆಗೆ ವಿಶೇ‍ಷ ಪೀಠ ರಚಿಸಲು ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಹೊಸ ಪೀಠವನ್ನು ರಚಿಸುವುದಾಗಿ ಬಿಲ್ಕಿಸ್ ಬಾನೋರವರನ್ನು ಪ್ರತಿನಿಧಿಸುವ ವಕೀಲೆ ಶೋಭಾ ಗುಪ್ತಾ ಮೂಲಕ ಬಾನೋ ಅವರಿಗೆ ಭರವಸೆ ನೀಡಿತು.

“ನಾವು ಪೀಠವನ್ನು ರಚಿಸುತ್ತೇನೆ. ಇಂದು ಸಂಜೆ ಆ ಕುರಿತು ಚರ್ಚಿಸಲಾಗುವುದು” ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೈದ 11 ಅಪರಾಧಿಗಳನ್ನು ಕ್ಷಮಾಧಾನ ನೀಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿದ ಕ್ರಮವನ್ನು ಪ್ರಶ್ನಿಸಿ ಸಂತಸ್ತೆ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶೆ ಬೇಲಾ ಎಂ ತ್ರಿವೇದಿ ಕಳೆದ ಡಿಸೆಂಬರ್‌ನಲ್ಲಿ ಹಿಂದೆ ಸರಿದಿದ್ದರು.

ನ್ಯಾಯಾಧೀಶೆ ತ್ರಿವೇದಿ ಮತ್ತು ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಬೇಕಿತ್ತು. ಆದರೆ ನ್ಯಾಯಮೂರ್ತಿ ರಸ್ತೋಗಿ ಅವರು ತಮ್ಮ ಸಹೋದರಿ ನ್ಯಾಯಾಧೀಶರು ಪ್ರಕರಣವನ್ನು ಆಲಿಸಲು ಇಷ್ಟಪಡುವುದಿಲ್ಲ. ಹಾಗಾಗಿ ಅವರ ಸದಸ್ಯರಲ್ಲದ ಪೀಠದ ಮುಂದೆ ಪ್ರಕರಣವನ್ನು ತನ್ನಿ ಎಂದು ಹೇಳಿದರು. ಅದರೆ ನ್ಯಾಯಾಧೀಶೆ ತ್ರಿವೇದಿ ಅವರು ಹಿಂದೆ ಸರಿದುದ್ದಕ್ಕೆ ನಿರ್ದಿಷ್ಟ ಕಾರಣವನ್ನು ಪೀಠವು ಸ್ಪಷ್ಟಪಡಿಸಿಲ್ಲ.

2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಮಾತ್ರವಲ್ಲದೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬಿಕರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೂ ಈ ವರ್ಷ ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿದೆ.

ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಪರ ವಕೀಲರು ನವೆಂಬರ್ 30 ರಂದು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಮುಂಚೆ ಈ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ ಎಂದಿತ್ತು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...