Homeಮುಖಪುಟಬಿಲ್ಕಿಸ್ ಬಾನೊ ಪ್ರಕರಣ: ಅಪರಾಧಿಗಳ ಕ್ಷಮಾಪಣೆ ವಿರೋಧಿಸಿ ಸಲ್ಲಿಸಲಾದ ಅರ್ಜಿ ಪರಿಶೀಲನೆ ನಡೆಸುತ್ತೇವೆಂದ ಸುಪ್ರೀಂ

ಬಿಲ್ಕಿಸ್ ಬಾನೊ ಪ್ರಕರಣ: ಅಪರಾಧಿಗಳ ಕ್ಷಮಾಪಣೆ ವಿರೋಧಿಸಿ ಸಲ್ಲಿಸಲಾದ ಅರ್ಜಿ ಪರಿಶೀಲನೆ ನಡೆಸುತ್ತೇವೆಂದ ಸುಪ್ರೀಂ

- Advertisement -
- Advertisement -

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ನೀಡಲಾದ ಕ್ಷಮಾದಾನ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮನವಿಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ. ವಕೀಲರಾದ ಅಪರ್ಣಾ ಭಟ್ ಅವರು ಈ ಅರ್ಜಿಗಳಲ್ಲಿ ಒಂದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಿದ್ದರು.

ಸಿಪಿಎಂ(ಎಂ) ನಾಯಕಿ ಸುಭಾಷಿಣಿ ಅಲಿ ಮತ್ತು ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಸೇರಿದಂತೆ ಮೂವರು ಅರ್ಜಿದಾರರು ಈ ಅರ್ಜಿ ಸಲ್ಲಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಕೂಡ ಎರಡನೇ ಅರ್ಜಿ ಸಲ್ಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ನ್ಯಾಯಾಲಯದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾಗಿದೆಯೇ ಎಂದು ಸಿಜೆಐ ಪ್ರಶ್ನಿಸಿದೆರು. ಸುಪ್ರೀಂ ಕೋರ್ಟ್ ಆದೇಶದ ಮೂಲಕ ನಿರ್ಧಾರ ತೆಗೆದುಕೊಳ್ಳುವ ವಿವೇಚನೆಯನ್ನು ಗುಜರಾತ್ ಸರ್ಕಾರಕ್ಕೆ ನೀಡಿದೆ ಎಂದು ಅಪರ್ಣಾ ಭಟ್ ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸವಾಲಿರುವುದು ವಿನಾಯಿತಿಯ ತತ್ವಗಳ ಮೇಲೆ ಎಂದು ಹೇಳಿದಾಗ, ಸಿಜೆಐ, “ನಾವು ನೋಡೋಣ” ಎಂದು ಹೇಳಿದ್ದಾರೆ.

ಬುಧವಾರ ಈ ವಿಷಯವನ್ನು ಪಟ್ಟಿ ಮಾಡಲು ನ್ಯಾಯಾಲಯವು ಪರಿಗಣಿಸುತ್ತದೆಯೇ ಎಂದು ವಕೀಲೆ ಅಪರ್ಣಾ ಭಟ್ ಕೇಳಿದಾಗ, ಸಿಜೆಐ “ನೋಡೋಣ” ಎಂದು ಉತ್ತರಿಸಿದರು.

2002 ರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಗುಜರಾತ್ ಸರ್ಕಾರವು ಆಗಸ್ಟ್ 15 ರಂದು 11 ಅಪರಾಧಿಗಳನ್ನು ತನ್ನ ಕ್ಷಮಾದಾನ ಮತ್ತು ಅಕಾಲಿಕ ಬಿಡುಗಡೆ ನೀತಿಯ ಅಡಿಯಲ್ಲಿ ಬಿಡುಗಡೆ ಮಾಡಿತು. ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2008ರಲ್ಲಿ ಮುಂಬೈನ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಧೇಶ್ಯಾಮ್‌ ಶಾ 15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿದ್ದರು.

ಇದನ್ನೂ ಓದಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್‌ರನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಯಿತು ಮತ್ತು ಅವರ ಮೂರು ವರ್ಷದ ಮಗಳು ಸಲೇಹಾ ಸೇರಿದಂತೆ 14 ಜನರನ್ನು ಮಾರ್ಚ್ 3, 2002 ರಂದು ದಾಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಜನಸಮೂಹವೊಂದು ಕೊಂದು ಹಾಕಿತ್ತು. ಆ ಸಮಯದಲ್ಲಿ ಬಿಲ್ಕಿಸ್ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...