Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...