Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...