Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...