Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...