Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...