Homeಮುಖಪುಟಬಿಲ್ಕಿಸ್ ಪ್ರಕರಣ - ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

ಬಿಲ್ಕಿಸ್ ಪ್ರಕರಣ – ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

- Advertisement -
- Advertisement -

ಗರ್ಭಿಣಿಯಾದ ಆಕೆಯ ಮೇಲೆ ಬಿಟ್ಟೂಬಿಡದೆ 22 ಬಾರಿ ಅತ್ಯಾಚಾರ ನಡೆಯುತ್ತದೆ. ಮೂರು ವರ್ಷದ ಮಗಳ ತಲೆಯನ್ನು ನೆಲಕ್ಕೆ ಅಪ್ಪಳಿಸಿ ಕೊಲ್ಲಲಾಗುತ್ತದೆ. ಆಕೆಯ ತಾಯಿಯೂ ಸೇರಿದಂತೆ ಕುಟುಂಬದ ಇತರೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಚ್ಚಿ ಹಾಕಲಾಗುತ್ತದೆ.ಕಣ್ಣೆದುರಿಗೇ ಕುಟುಂಬದ 14 ಹೆಣಗಳು ಉರುಳುತ್ತವೆ. ಈ ಅಪರಾಧವನ್ನು ಹೀನಾತಿಹೀನ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಗುಜರಾತ್ ಸರ್ಕಾರ.

ಕೋಮುವಾದಿ ಹಿಂಸೆಯ ದಳ್ಳುರಿಯ ನಡುವೆ ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಬಡ ಹೆಣ್ಣುಮಗಳೊಬ್ಬಳಿಗೆ 50 ಲಕ್ಷರೂಪಾಯಿ ಪರಿಹಾರ ನೀಡುವಂತೆ ಸುಪ್ರೀಮ್‍ ಕೋರ್ಟ್‍ತೀರ್ಪು ನೀಡಿ ನಾಲ್ಕು ತಿಂಗಳುಗಳೇ ಉರುಳಿವೆ. ಈ ಮುನ್ನತನಗೆ ನ್ಯಾಯ ಬೇಡಿ 17 ವರ್ಷಗಳ ಕಾಲ ಕೋರ್ಟುಗಳ ಕಂಬ ಸುತ್ತಿದ್ದಳು ಆಕೆ.

ಬಿಲ್ಕಿಸ್‍ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಸಿದ್ದ ನ್ಯಾಯಾಲಯ ನಿಂದನೆ ಮೊಕದ್ದಮೆ ಕಳೆದ ವಾರ ಸುಪ್ರೀಮ್‍ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. ಪರಿಹಾರದ ಆದೇಶದ ವಿರುದ್ಧ ಮರುವಿಮರ್ಶೆಅರ್ಜಿ ಸಲ್ಲಿಸುವ ಇರಾದೆ ತನಗಿರುವ ಕಾರಣ ಪರಿಹಾರವನ್ನು ನೀಡಿಲ್ಲ ಎಂದು ಗುಜರಾತ್ ಸರ್ಕಾರ ಹೇಳಿಕೊಂಡಿತು. ಒಂದು ಪ್ರಕರಣದಲ್ಲಿ 50 ಲಕ್ಷ ನೀಡಿದರೆ ಇತರೆ ಪ್ರಕರಣಗಳ ಪಾಲಿಗೆ ಅದು ಪೂರ್ವನಿದರ್ಶನ ಆಗುತ್ತದೆಂಬುದು ಗುಜರಾತ್ ಸರ್ಕಾರದ ಬಾಧೆ.

2002ರ ಫೆಬ್ರವರಿ 27ರ ಮುಂಜಾನೆ ಗುಜರಾತಿನ ಗೋಧ್ರಾ ಬಳಿ ಸಾಬರಮತಿ ಎಕ್ಸ್ ಪ್ರೆಸ್‍ನ ಕರಸೇವಕರಿದ್ದ ಬೋಗಿಗೆ ಬೆಂಕಿ ಬಿದ್ದು 59 ಮಂದಿ ಆಹುತಿಯಾಗಿದ್ದರು. ಆಗ ಹೊತ್ತಿಕೊಂಡ ಕೋಮು ಗಲಭೆಗಳ ದಳ್ಳುರಿ ಗುಜರಾತಿನ ಉದ್ದಗಲಕ್ಕೆ ಅಲ್ಪಸಂಖ್ಯಾತರ ಮಾರಣ ಹೋಮಕ್ಕೆ ಕಾರಣವಾಯಿತು.

ಅಹ್ಮದಾಬಾದ್ ನಿಂದ 200 ಕಿ.ಮೀ. ದೂರದ ದಾಹೋದ್ ನ ಒಂದು ಹಳ್ಳಿ ರಾಧಿಕಾಪುರ ಬಿಲ್ಕಿಸ್ ಬಾನುವಿನ ಹುಟ್ಟೂರು. ನೆರೆ ಹೊರೆಯವರು ಮುಸಲ್ಮಾನರಎಲ್ಲ 60 ಮನೆಗಳಿಗೆ ಬೆಂಕಿ ಇಟ್ಟಿದ್ದರು. ಬಿಲ್ಕಿಸ್ ಮತ್ತು ಆಕೆಯ ಕುಟುಂಬ ಬೆದರಿ ಹೊಲಗಳತ್ತ ಪರಾರಿಯಾಗಿತ್ತು. ಒಂದೆಡೆಯಿಂದ ಇನ್ನೊಂದೆಡೆಗೆ ಪರಾರಿಯಾಗುತ್ತಲೇ ತಲೆಮರೆಸಿಕೊಂಡಿದ್ದಾಗ ಆಕೆಯ ರಕ್ತಸಂಬಂಧಿ ಶಮೀಮ್ ಹೆಣ್ಣುಮಗುವನ್ನು ಪ್ರಸವಿಸಿದ್ದಳು.

ಸುತ್ತಮುತ್ತಲ ಅಡವಿಯ ಗಿಡಮರಗಳ ನೆರಳುಗಳಲ್ಲಿ ಅಡಗಿಕೊಳ್ಳುತ್ತಿದ್ದ ಅವರು ಹೇಗಾದರೂ ಮಾಡಿ ಮುಸ್ಲಿಂ ಬಾಹುಳ್ಯದ ವಸತಿಯನ್ನು ತಲುಪಬೇಕಿತ್ತು. ಹೆದ್ದಾರಿಗಳನ್ನು ಹಿಡಿಯುವಂತಿರಲಿಲ್ಲ. ಒಳನಾಡಿನ ಕಚ್ಚಾದಾರಿಗಳಲ್ಲೇ ಸಾಗಬೇಕಿತ್ತು. ಭೀತಿಯ ಪಯಣದಲ್ಲಿಕರುಣೆ ಸಹಾನುಭೂತಿಯುಳ್ಳ ಜನ ಅವರನ್ನು ಕಾಪಾಡಿದ್ದುಂಟು.

ಪನ್ನಿವೇಲ್ ಎಂಬ ಹಳ್ಳಿ ಸೇರಿದ್ದರೆ ಈ ಕುಟುಂಬದ ಪ್ರಾಣಗಳು ಉಳಿಯುತ್ತಿದ್ದವು. ಆದರೆ ಹಾಗಾಗಲಿಲ್ಲ. ಈ ಕುಟುಂಬ ಪಯಣಿಸುತ್ತಿದ್ದ ಟ್ರಕ್‍ನ್ನು ಎರಡು ಟ್ರಕ್‍ಗಳು ಅಡ್ಡ ಹಾಕಿದ್ದವು. 20- 30 ಮಂದಿಯ ಕೈಗಳಲ್ಲಿ ಹಿರಿದಿದ್ದಕತ್ತಿ ಕುಡುಗೋಲುಗಳು. ಬಿಲ್ಕಿಸ್‍ ಅಪ್ಪನಿಗೆ ಚಿಕಿತ್ಸೆ ನೀಡಿದ್ದ, ಅದೇ ಬೀದಿಯ ಎದುರಿಗಿದ್ದ ವೈದ್ಯನ ಮಗ, ಬಳೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿ, ಹೊಟೇಲು ಇಟ್ಟು ಕೊಂಡಿದ್ದಾತ, ಗ್ರಾಮಪಂಚಾಯಿತಿ ಸದಸ್ಯೆಯಗಂಡ… ಇವರೆಲ್ಲ ಬಿಲ್ಕಿಸ್ ಗೆ ಚಿರ ಪರಿಚಿತರೇ. ಬಾಲ್ಯದಿಂದತನ್ನನ್ನು ಬಲ್ಲವರೇಆದರೂತನ್ನನ್ನು ಎಷ್ಟು ಕ್ರೌರ್ಯದಿಂದ ಉಲ್ಲಂಘಿಸಿದರಲ್ಲ ಎಂಬುದು ಆಕೆಯನ್ನು ಬಹುಕಾಲ ಅಲ್ಲಾಡಿಸಿದ ಕಟು ವಾಸ್ತವ.

ಬಗಲಲ್ಲಿ ಮೂರು ವರ್ಷದ ಮಗಳು ಸಾಲೇಹ. ಅವಳನ್ನು ಕಸಿದುಕೊಂಡು ತಲೆಯನ್ನು ನೆಲಕ್ಕೆ ಅಪ್ಪಳಿಸಿ ಅರೆನಿಮಿಷದಲ್ಲೇಕೊಂದು ಹಾಕಿದನೊಬ್ಬ. ತನ್ನದೇ ಹಳ್ಳಿಯ ಮೂವರು ಪುರುಷರು ಆಕೆಯನ್ನು ಎಳೆದುಕೊಂಡು ಬಟ್ಟೆಗಳನ್ನು ಹರಿದೆಸೆದರು. ಗರ್ಭಿಣಿಯೆಂದು ಆಕೆ ಅಲವತ್ತು ಕೊಂಡಳು. ನೀವೆಲ್ಲ ನನ್ನ ಅಣ್ಣಂದಿರು, ಚಿಕ್ಕಪ್ಪಂದಿರಿದ್ದಂತೆ ಎಂದರೂ ಬಿಡದೆ ಅತ್ಯಾಚಾರ ನಡೆಸಿದರು.

ಹತ್ಯೆಅತ್ಯಾಚಾರದ ಅಮಾನುಷತೆಯ ವಿಕೃತ ವಿಜೃಂಭಣೆಗೆ 14 ಮಂದಿ ಬಲಿಯಾದರು. ಹಿಂದಿನ ದಿನವಷ್ಟೇ ಹೆಣ್ಣುಮಗುವನ್ನು ಹಡೆದಿದ್ದ ಶಮೀಮ್‍ಳನ್ನು ಅವಳ ಹಸುಳೆಯ ಸಹಿತ ಹತ್ಯೆ ಮಾಡಲಾಗಿತ್ತು.ಮೂರ್ಛೆ ಹೋಗಿದ್ದ ಬಿಲ್ಕಿಸ್ ಸತ್ತೇ ಹೋಗಿದ್ದಾಳೆಂದು ಭಾವಿಸಿದ ದಾಳಿಕೋರರು ಮಾರಣಹೋಮದತಾಣವನ್ನುತೊರೆದಿದ್ದರು.

ಎಚ್ಚ ಬಂದಾಗ ಪೂರ್ಣ ಬೆತ್ತಲಾಗಿದ್ದದ್ದು ತಿಳಿಯಿತು. ಸುತ್ತಮುತ್ತಕೊಚ್ಚಿ ಹಾಕಲಾಗಿದ್ದತನ್ನದೇಕುಟುಂಬದ ರಕ್ತಸಿಕ್ತ ಕಳೇಬರಗಳು. ಪೆಟ್ಟಿಕೋಟಿನಿಂದ ಮೈ ಮುಚ್ಚಿಕೊಂಡು ಪಕ್ಕದಲ್ಲಿದ್ದ ಗುಡ್ಡ ಹತ್ತಿ ಅಲ್ಲಿಯೇದುಃಖ ಭೀತಿಯಲ್ಲಿ ಮುಳುಗಿ ಇರುಳು ಕಳೆದಳು. ಮರುದಿನ ನೀರಿಗಾಗಿ ಅರಸುತ್ತಿದ್ದವಳನ್ನು ಕೊಳವೆ ಬಾವಿಯೊಂದರ ಬಳಿ ಕಂಡ ಆದಿವಾಸಿ ಹೆಣ್ಣುಮಗಳು ಬಟ್ಟೆಗಳನ್ನಿತ್ತಳು. ಪೊಲೀಸ್‍ ಅಧಿಕಾರಿಯೊಬ್ಬನನ್ನು ಸಂಪರ್ಕಿಸಿದಳು. ಆತ ಆಕೆಯನ್ನು ತನ್ನ ವಾಹನದಲ್ಲಿ ಲಿಮ್ಖೇಡ ಪೊಲೀಸ್‍ಠಾಣೆಗೆ ಕರೆದೊಯ್ದ.

ಎಂಟು ಸಾಮೂಹಿಕ ಅತ್ಯಾಚಾರಗಳು ಮತ್ತು 14 ಹತ್ಯೆಗಳನ್ನು ನೋಡಿದ ನಂತರವೂ ಪ್ರಾಣಸಹಿತ ಉಳಿದಿದ್ದ ಏಕೈಕ ಸಾಕ್ಷಿ ಬಿಲ್ಕಿಸ್ ಬಾನು.ಆದರೆ ಪೊಲೀಸರುದೂರು ದಾಖಲಿಸಿಕೊಳ್ಳುವುದಿಲ್ಲ. ಒತ್ತಾಯಿಸಿದರೆ ವಿಷದ ಸೂಜಿಮದ್ದು ನೀಡಿಕೊಲ್ಲುವ ಬೆದರಿಕೆ ಹಾಕಲಾಗುತ್ತದೆ. ಪರಿಹಾರ ಶಿಬಿರವೊಂದಕ್ಕೆ ಆಕೆಯನ್ನು ಸಾಗ ಹಾಕಲಾಗುತ್ತದೆ. ಅಲ್ಲಿತನ್ನ ಪತಿಯಾಕೂಬ್‍ರಸೂಲನನ್ನು ಸೇರಿಕೊಳ್ಳುತ್ತಾಳೆ.

ಬಿಲ್ಕಿಸ್‍ ಕುಟುಂಬದ ಹತ್ಯೆ ನಡೆದಎರಡು ದಿನಗಳ ನಂತರಎಂಟು ಶವಗಳನ್ನು ಕಂಡವರು ಕೆಲ ಸ್ಥಳೀಯ ಛಾಯಾ ಚಿತ್ರಕಾರರು. ಪೊಲೀಸರು ಕಾರ್ಯಪ್ರವೃತ್ತರಾಗುತ್ತಾರೆ. ಅತ್ಯಾಚಾರಜರುಗಿದ ನಾಲ್ಕು ದಿನಗಳ ನಂತರ ಗೋಧ್ರಾ ಸಿವಿಲ್ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯಿತು.

ಕಳೇಬರಗಳ ಮಹಜರು ನಡೆಯುವುದಿಲ್ಲ. ಕೊಳೆಯಲು ಬಿಡಲಾಗುತ್ತದೆ. ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ಮಹತ್ವದ ಸಾಕ್ಷ್ಯ ಪುರಾವೆಗಳಾಗಬೇಕಿದ್ದ ರಕ್ತ ಮತ್ತು ಇತರೆ ಜೈವಿಕ ಸ್ಯಾಂಪಲ್ ಗಳನ್ನು ಸಂಗ್ರಹಿಸಲಿಲ್ಲ. ಶವಗಳನ್ನು ಸಾಮೂಹಿಕವಾಗಿ ದಫನು ಮಾಡಲಾಗುತ್ತದೆ. ಎರಡು ವರ್ಷಗಳ ನಂತರ 2004ರಲ್ಲಿ ಸಿಬಿಐ ಈ ತನಿಖೆಯನ್ನುಕೈಗೆತ್ತಿಕೊಂಡಾಗ ಹೂತಿದ್ದ ಶವಗಳನ್ನು ಹೊರತೆಗೆದಾಗಯಾವ ಶವಕ್ಕೂ ರುಂಡವಿರುವುದಿಲ್ಲ. ಮರಣೋತ್ತರ ಪರೀಕ್ಷೆಯ ನಂತರಗುರುತು ಸಿಗದಿರಲೆಂದು ರುಂಡಗಳನ್ನು ಬೇರ್ಪಡಿಸಲಾಗಿತ್ತು. ಶವಗಳು ಬೇಗನೆ ಕೊಳೆತು ಹೋಗಲೆಂದು ಅವುಗಳ ಮೇಲೆ ಉಪ್ಪು ಸುರಿದು ಹುಗಿಯಲಾಗಿರುತ್ತದೆ.

ಹನ್ನೊಂದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಮುಂಬಯಿ ಹೈಕೋರ್ಟ್ 2017ರ ಮೇ 4ರಂದು ಎತ್ತಿ ಹಿಡಿದಿತ್ತು. ಮಹತ್ವದ ಸಾಕ್ಷ್ಯ ಪುರಾವೆಗಳನ್ನು ತಿದ್ದಿದ ಮತ್ತು ನಾಶ ಮಾಡಿದ ಏಳು ಮಂದಿ ಪೊಲೀಸರು ಹಾಗೂ ವೈದ್ಯರಖುಲಾಸೆಯ ಆದೇಶವನ್ನು ತಳ್ಳಿ ಹಾಕಿತ್ತು.

ಮನುಷ್ಯಳಾಗಿ, ನಾಗರಿಕಳಾಗಿ, ಮಹಿಳೆಯಾಗಿ, ತಾಯಿಯಾಗಿ ತನ್ನ ಹಕ್ಕುಗಳನ್ನು ಅತ್ಯಂತ ಪಾಶವೀತನದಿಂದ ಉಲ್ಲಂಘಿಸಲಾಗಿದೆ ಎಂದು ಬಿಲ್ಕಿಸ್ ಬಾನು ನ್ಯಾಯಾಲಯದ ಮುಂದೆ ಅರಿಕೆ ಮಾಡಿಕೊಂಡಿದ್ದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...