Homeಮುಖಪುಟಬಿಲ್ಕಿಸ್ ಪ್ರಕರಣ - ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

ಬಿಲ್ಕಿಸ್ ಪ್ರಕರಣ – ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

- Advertisement -
- Advertisement -

ಗರ್ಭಿಣಿಯಾದ ಆಕೆಯ ಮೇಲೆ ಬಿಟ್ಟೂಬಿಡದೆ 22 ಬಾರಿ ಅತ್ಯಾಚಾರ ನಡೆಯುತ್ತದೆ. ಮೂರು ವರ್ಷದ ಮಗಳ ತಲೆಯನ್ನು ನೆಲಕ್ಕೆ ಅಪ್ಪಳಿಸಿ ಕೊಲ್ಲಲಾಗುತ್ತದೆ. ಆಕೆಯ ತಾಯಿಯೂ ಸೇರಿದಂತೆ ಕುಟುಂಬದ ಇತರೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಚ್ಚಿ ಹಾಕಲಾಗುತ್ತದೆ.ಕಣ್ಣೆದುರಿಗೇ ಕುಟುಂಬದ 14 ಹೆಣಗಳು ಉರುಳುತ್ತವೆ. ಈ ಅಪರಾಧವನ್ನು ಹೀನಾತಿಹೀನ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಗುಜರಾತ್ ಸರ್ಕಾರ.

ಕೋಮುವಾದಿ ಹಿಂಸೆಯ ದಳ್ಳುರಿಯ ನಡುವೆ ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಬಡ ಹೆಣ್ಣುಮಗಳೊಬ್ಬಳಿಗೆ 50 ಲಕ್ಷರೂಪಾಯಿ ಪರಿಹಾರ ನೀಡುವಂತೆ ಸುಪ್ರೀಮ್‍ ಕೋರ್ಟ್‍ತೀರ್ಪು ನೀಡಿ ನಾಲ್ಕು ತಿಂಗಳುಗಳೇ ಉರುಳಿವೆ. ಈ ಮುನ್ನತನಗೆ ನ್ಯಾಯ ಬೇಡಿ 17 ವರ್ಷಗಳ ಕಾಲ ಕೋರ್ಟುಗಳ ಕಂಬ ಸುತ್ತಿದ್ದಳು ಆಕೆ.

ಬಿಲ್ಕಿಸ್‍ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಸಿದ್ದ ನ್ಯಾಯಾಲಯ ನಿಂದನೆ ಮೊಕದ್ದಮೆ ಕಳೆದ ವಾರ ಸುಪ್ರೀಮ್‍ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. ಪರಿಹಾರದ ಆದೇಶದ ವಿರುದ್ಧ ಮರುವಿಮರ್ಶೆಅರ್ಜಿ ಸಲ್ಲಿಸುವ ಇರಾದೆ ತನಗಿರುವ ಕಾರಣ ಪರಿಹಾರವನ್ನು ನೀಡಿಲ್ಲ ಎಂದು ಗುಜರಾತ್ ಸರ್ಕಾರ ಹೇಳಿಕೊಂಡಿತು. ಒಂದು ಪ್ರಕರಣದಲ್ಲಿ 50 ಲಕ್ಷ ನೀಡಿದರೆ ಇತರೆ ಪ್ರಕರಣಗಳ ಪಾಲಿಗೆ ಅದು ಪೂರ್ವನಿದರ್ಶನ ಆಗುತ್ತದೆಂಬುದು ಗುಜರಾತ್ ಸರ್ಕಾರದ ಬಾಧೆ.

2002ರ ಫೆಬ್ರವರಿ 27ರ ಮುಂಜಾನೆ ಗುಜರಾತಿನ ಗೋಧ್ರಾ ಬಳಿ ಸಾಬರಮತಿ ಎಕ್ಸ್ ಪ್ರೆಸ್‍ನ ಕರಸೇವಕರಿದ್ದ ಬೋಗಿಗೆ ಬೆಂಕಿ ಬಿದ್ದು 59 ಮಂದಿ ಆಹುತಿಯಾಗಿದ್ದರು. ಆಗ ಹೊತ್ತಿಕೊಂಡ ಕೋಮು ಗಲಭೆಗಳ ದಳ್ಳುರಿ ಗುಜರಾತಿನ ಉದ್ದಗಲಕ್ಕೆ ಅಲ್ಪಸಂಖ್ಯಾತರ ಮಾರಣ ಹೋಮಕ್ಕೆ ಕಾರಣವಾಯಿತು.

ಅಹ್ಮದಾಬಾದ್ ನಿಂದ 200 ಕಿ.ಮೀ. ದೂರದ ದಾಹೋದ್ ನ ಒಂದು ಹಳ್ಳಿ ರಾಧಿಕಾಪುರ ಬಿಲ್ಕಿಸ್ ಬಾನುವಿನ ಹುಟ್ಟೂರು. ನೆರೆ ಹೊರೆಯವರು ಮುಸಲ್ಮಾನರಎಲ್ಲ 60 ಮನೆಗಳಿಗೆ ಬೆಂಕಿ ಇಟ್ಟಿದ್ದರು. ಬಿಲ್ಕಿಸ್ ಮತ್ತು ಆಕೆಯ ಕುಟುಂಬ ಬೆದರಿ ಹೊಲಗಳತ್ತ ಪರಾರಿಯಾಗಿತ್ತು. ಒಂದೆಡೆಯಿಂದ ಇನ್ನೊಂದೆಡೆಗೆ ಪರಾರಿಯಾಗುತ್ತಲೇ ತಲೆಮರೆಸಿಕೊಂಡಿದ್ದಾಗ ಆಕೆಯ ರಕ್ತಸಂಬಂಧಿ ಶಮೀಮ್ ಹೆಣ್ಣುಮಗುವನ್ನು ಪ್ರಸವಿಸಿದ್ದಳು.

ಸುತ್ತಮುತ್ತಲ ಅಡವಿಯ ಗಿಡಮರಗಳ ನೆರಳುಗಳಲ್ಲಿ ಅಡಗಿಕೊಳ್ಳುತ್ತಿದ್ದ ಅವರು ಹೇಗಾದರೂ ಮಾಡಿ ಮುಸ್ಲಿಂ ಬಾಹುಳ್ಯದ ವಸತಿಯನ್ನು ತಲುಪಬೇಕಿತ್ತು. ಹೆದ್ದಾರಿಗಳನ್ನು ಹಿಡಿಯುವಂತಿರಲಿಲ್ಲ. ಒಳನಾಡಿನ ಕಚ್ಚಾದಾರಿಗಳಲ್ಲೇ ಸಾಗಬೇಕಿತ್ತು. ಭೀತಿಯ ಪಯಣದಲ್ಲಿಕರುಣೆ ಸಹಾನುಭೂತಿಯುಳ್ಳ ಜನ ಅವರನ್ನು ಕಾಪಾಡಿದ್ದುಂಟು.

ಪನ್ನಿವೇಲ್ ಎಂಬ ಹಳ್ಳಿ ಸೇರಿದ್ದರೆ ಈ ಕುಟುಂಬದ ಪ್ರಾಣಗಳು ಉಳಿಯುತ್ತಿದ್ದವು. ಆದರೆ ಹಾಗಾಗಲಿಲ್ಲ. ಈ ಕುಟುಂಬ ಪಯಣಿಸುತ್ತಿದ್ದ ಟ್ರಕ್‍ನ್ನು ಎರಡು ಟ್ರಕ್‍ಗಳು ಅಡ್ಡ ಹಾಕಿದ್ದವು. 20- 30 ಮಂದಿಯ ಕೈಗಳಲ್ಲಿ ಹಿರಿದಿದ್ದಕತ್ತಿ ಕುಡುಗೋಲುಗಳು. ಬಿಲ್ಕಿಸ್‍ ಅಪ್ಪನಿಗೆ ಚಿಕಿತ್ಸೆ ನೀಡಿದ್ದ, ಅದೇ ಬೀದಿಯ ಎದುರಿಗಿದ್ದ ವೈದ್ಯನ ಮಗ, ಬಳೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿ, ಹೊಟೇಲು ಇಟ್ಟು ಕೊಂಡಿದ್ದಾತ, ಗ್ರಾಮಪಂಚಾಯಿತಿ ಸದಸ್ಯೆಯಗಂಡ… ಇವರೆಲ್ಲ ಬಿಲ್ಕಿಸ್ ಗೆ ಚಿರ ಪರಿಚಿತರೇ. ಬಾಲ್ಯದಿಂದತನ್ನನ್ನು ಬಲ್ಲವರೇಆದರೂತನ್ನನ್ನು ಎಷ್ಟು ಕ್ರೌರ್ಯದಿಂದ ಉಲ್ಲಂಘಿಸಿದರಲ್ಲ ಎಂಬುದು ಆಕೆಯನ್ನು ಬಹುಕಾಲ ಅಲ್ಲಾಡಿಸಿದ ಕಟು ವಾಸ್ತವ.

ಬಗಲಲ್ಲಿ ಮೂರು ವರ್ಷದ ಮಗಳು ಸಾಲೇಹ. ಅವಳನ್ನು ಕಸಿದುಕೊಂಡು ತಲೆಯನ್ನು ನೆಲಕ್ಕೆ ಅಪ್ಪಳಿಸಿ ಅರೆನಿಮಿಷದಲ್ಲೇಕೊಂದು ಹಾಕಿದನೊಬ್ಬ. ತನ್ನದೇ ಹಳ್ಳಿಯ ಮೂವರು ಪುರುಷರು ಆಕೆಯನ್ನು ಎಳೆದುಕೊಂಡು ಬಟ್ಟೆಗಳನ್ನು ಹರಿದೆಸೆದರು. ಗರ್ಭಿಣಿಯೆಂದು ಆಕೆ ಅಲವತ್ತು ಕೊಂಡಳು. ನೀವೆಲ್ಲ ನನ್ನ ಅಣ್ಣಂದಿರು, ಚಿಕ್ಕಪ್ಪಂದಿರಿದ್ದಂತೆ ಎಂದರೂ ಬಿಡದೆ ಅತ್ಯಾಚಾರ ನಡೆಸಿದರು.

ಹತ್ಯೆಅತ್ಯಾಚಾರದ ಅಮಾನುಷತೆಯ ವಿಕೃತ ವಿಜೃಂಭಣೆಗೆ 14 ಮಂದಿ ಬಲಿಯಾದರು. ಹಿಂದಿನ ದಿನವಷ್ಟೇ ಹೆಣ್ಣುಮಗುವನ್ನು ಹಡೆದಿದ್ದ ಶಮೀಮ್‍ಳನ್ನು ಅವಳ ಹಸುಳೆಯ ಸಹಿತ ಹತ್ಯೆ ಮಾಡಲಾಗಿತ್ತು.ಮೂರ್ಛೆ ಹೋಗಿದ್ದ ಬಿಲ್ಕಿಸ್ ಸತ್ತೇ ಹೋಗಿದ್ದಾಳೆಂದು ಭಾವಿಸಿದ ದಾಳಿಕೋರರು ಮಾರಣಹೋಮದತಾಣವನ್ನುತೊರೆದಿದ್ದರು.

ಎಚ್ಚ ಬಂದಾಗ ಪೂರ್ಣ ಬೆತ್ತಲಾಗಿದ್ದದ್ದು ತಿಳಿಯಿತು. ಸುತ್ತಮುತ್ತಕೊಚ್ಚಿ ಹಾಕಲಾಗಿದ್ದತನ್ನದೇಕುಟುಂಬದ ರಕ್ತಸಿಕ್ತ ಕಳೇಬರಗಳು. ಪೆಟ್ಟಿಕೋಟಿನಿಂದ ಮೈ ಮುಚ್ಚಿಕೊಂಡು ಪಕ್ಕದಲ್ಲಿದ್ದ ಗುಡ್ಡ ಹತ್ತಿ ಅಲ್ಲಿಯೇದುಃಖ ಭೀತಿಯಲ್ಲಿ ಮುಳುಗಿ ಇರುಳು ಕಳೆದಳು. ಮರುದಿನ ನೀರಿಗಾಗಿ ಅರಸುತ್ತಿದ್ದವಳನ್ನು ಕೊಳವೆ ಬಾವಿಯೊಂದರ ಬಳಿ ಕಂಡ ಆದಿವಾಸಿ ಹೆಣ್ಣುಮಗಳು ಬಟ್ಟೆಗಳನ್ನಿತ್ತಳು. ಪೊಲೀಸ್‍ ಅಧಿಕಾರಿಯೊಬ್ಬನನ್ನು ಸಂಪರ್ಕಿಸಿದಳು. ಆತ ಆಕೆಯನ್ನು ತನ್ನ ವಾಹನದಲ್ಲಿ ಲಿಮ್ಖೇಡ ಪೊಲೀಸ್‍ಠಾಣೆಗೆ ಕರೆದೊಯ್ದ.

ಎಂಟು ಸಾಮೂಹಿಕ ಅತ್ಯಾಚಾರಗಳು ಮತ್ತು 14 ಹತ್ಯೆಗಳನ್ನು ನೋಡಿದ ನಂತರವೂ ಪ್ರಾಣಸಹಿತ ಉಳಿದಿದ್ದ ಏಕೈಕ ಸಾಕ್ಷಿ ಬಿಲ್ಕಿಸ್ ಬಾನು.ಆದರೆ ಪೊಲೀಸರುದೂರು ದಾಖಲಿಸಿಕೊಳ್ಳುವುದಿಲ್ಲ. ಒತ್ತಾಯಿಸಿದರೆ ವಿಷದ ಸೂಜಿಮದ್ದು ನೀಡಿಕೊಲ್ಲುವ ಬೆದರಿಕೆ ಹಾಕಲಾಗುತ್ತದೆ. ಪರಿಹಾರ ಶಿಬಿರವೊಂದಕ್ಕೆ ಆಕೆಯನ್ನು ಸಾಗ ಹಾಕಲಾಗುತ್ತದೆ. ಅಲ್ಲಿತನ್ನ ಪತಿಯಾಕೂಬ್‍ರಸೂಲನನ್ನು ಸೇರಿಕೊಳ್ಳುತ್ತಾಳೆ.

ಬಿಲ್ಕಿಸ್‍ ಕುಟುಂಬದ ಹತ್ಯೆ ನಡೆದಎರಡು ದಿನಗಳ ನಂತರಎಂಟು ಶವಗಳನ್ನು ಕಂಡವರು ಕೆಲ ಸ್ಥಳೀಯ ಛಾಯಾ ಚಿತ್ರಕಾರರು. ಪೊಲೀಸರು ಕಾರ್ಯಪ್ರವೃತ್ತರಾಗುತ್ತಾರೆ. ಅತ್ಯಾಚಾರಜರುಗಿದ ನಾಲ್ಕು ದಿನಗಳ ನಂತರ ಗೋಧ್ರಾ ಸಿವಿಲ್ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯಿತು.

ಕಳೇಬರಗಳ ಮಹಜರು ನಡೆಯುವುದಿಲ್ಲ. ಕೊಳೆಯಲು ಬಿಡಲಾಗುತ್ತದೆ. ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ಮಹತ್ವದ ಸಾಕ್ಷ್ಯ ಪುರಾವೆಗಳಾಗಬೇಕಿದ್ದ ರಕ್ತ ಮತ್ತು ಇತರೆ ಜೈವಿಕ ಸ್ಯಾಂಪಲ್ ಗಳನ್ನು ಸಂಗ್ರಹಿಸಲಿಲ್ಲ. ಶವಗಳನ್ನು ಸಾಮೂಹಿಕವಾಗಿ ದಫನು ಮಾಡಲಾಗುತ್ತದೆ. ಎರಡು ವರ್ಷಗಳ ನಂತರ 2004ರಲ್ಲಿ ಸಿಬಿಐ ಈ ತನಿಖೆಯನ್ನುಕೈಗೆತ್ತಿಕೊಂಡಾಗ ಹೂತಿದ್ದ ಶವಗಳನ್ನು ಹೊರತೆಗೆದಾಗಯಾವ ಶವಕ್ಕೂ ರುಂಡವಿರುವುದಿಲ್ಲ. ಮರಣೋತ್ತರ ಪರೀಕ್ಷೆಯ ನಂತರಗುರುತು ಸಿಗದಿರಲೆಂದು ರುಂಡಗಳನ್ನು ಬೇರ್ಪಡಿಸಲಾಗಿತ್ತು. ಶವಗಳು ಬೇಗನೆ ಕೊಳೆತು ಹೋಗಲೆಂದು ಅವುಗಳ ಮೇಲೆ ಉಪ್ಪು ಸುರಿದು ಹುಗಿಯಲಾಗಿರುತ್ತದೆ.

ಹನ್ನೊಂದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಮುಂಬಯಿ ಹೈಕೋರ್ಟ್ 2017ರ ಮೇ 4ರಂದು ಎತ್ತಿ ಹಿಡಿದಿತ್ತು. ಮಹತ್ವದ ಸಾಕ್ಷ್ಯ ಪುರಾವೆಗಳನ್ನು ತಿದ್ದಿದ ಮತ್ತು ನಾಶ ಮಾಡಿದ ಏಳು ಮಂದಿ ಪೊಲೀಸರು ಹಾಗೂ ವೈದ್ಯರಖುಲಾಸೆಯ ಆದೇಶವನ್ನು ತಳ್ಳಿ ಹಾಕಿತ್ತು.

ಮನುಷ್ಯಳಾಗಿ, ನಾಗರಿಕಳಾಗಿ, ಮಹಿಳೆಯಾಗಿ, ತಾಯಿಯಾಗಿ ತನ್ನ ಹಕ್ಕುಗಳನ್ನು ಅತ್ಯಂತ ಪಾಶವೀತನದಿಂದ ಉಲ್ಲಂಘಿಸಲಾಗಿದೆ ಎಂದು ಬಿಲ್ಕಿಸ್ ಬಾನು ನ್ಯಾಯಾಲಯದ ಮುಂದೆ ಅರಿಕೆ ಮಾಡಿಕೊಂಡಿದ್ದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...