Homeಮುಖಪುಟಬಿಲ್ಕಿಸ್ ಪ್ರಕರಣ - ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

ಬಿಲ್ಕಿಸ್ ಪ್ರಕರಣ – ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

- Advertisement -
- Advertisement -

ಗರ್ಭಿಣಿಯಾದ ಆಕೆಯ ಮೇಲೆ ಬಿಟ್ಟೂಬಿಡದೆ 22 ಬಾರಿ ಅತ್ಯಾಚಾರ ನಡೆಯುತ್ತದೆ. ಮೂರು ವರ್ಷದ ಮಗಳ ತಲೆಯನ್ನು ನೆಲಕ್ಕೆ ಅಪ್ಪಳಿಸಿ ಕೊಲ್ಲಲಾಗುತ್ತದೆ. ಆಕೆಯ ತಾಯಿಯೂ ಸೇರಿದಂತೆ ಕುಟುಂಬದ ಇತರೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಚ್ಚಿ ಹಾಕಲಾಗುತ್ತದೆ.ಕಣ್ಣೆದುರಿಗೇ ಕುಟುಂಬದ 14 ಹೆಣಗಳು ಉರುಳುತ್ತವೆ. ಈ ಅಪರಾಧವನ್ನು ಹೀನಾತಿಹೀನ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಗುಜರಾತ್ ಸರ್ಕಾರ.

ಕೋಮುವಾದಿ ಹಿಂಸೆಯ ದಳ್ಳುರಿಯ ನಡುವೆ ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಬಡ ಹೆಣ್ಣುಮಗಳೊಬ್ಬಳಿಗೆ 50 ಲಕ್ಷರೂಪಾಯಿ ಪರಿಹಾರ ನೀಡುವಂತೆ ಸುಪ್ರೀಮ್‍ ಕೋರ್ಟ್‍ತೀರ್ಪು ನೀಡಿ ನಾಲ್ಕು ತಿಂಗಳುಗಳೇ ಉರುಳಿವೆ. ಈ ಮುನ್ನತನಗೆ ನ್ಯಾಯ ಬೇಡಿ 17 ವರ್ಷಗಳ ಕಾಲ ಕೋರ್ಟುಗಳ ಕಂಬ ಸುತ್ತಿದ್ದಳು ಆಕೆ.

ಬಿಲ್ಕಿಸ್‍ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಸಿದ್ದ ನ್ಯಾಯಾಲಯ ನಿಂದನೆ ಮೊಕದ್ದಮೆ ಕಳೆದ ವಾರ ಸುಪ್ರೀಮ್‍ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. ಪರಿಹಾರದ ಆದೇಶದ ವಿರುದ್ಧ ಮರುವಿಮರ್ಶೆಅರ್ಜಿ ಸಲ್ಲಿಸುವ ಇರಾದೆ ತನಗಿರುವ ಕಾರಣ ಪರಿಹಾರವನ್ನು ನೀಡಿಲ್ಲ ಎಂದು ಗುಜರಾತ್ ಸರ್ಕಾರ ಹೇಳಿಕೊಂಡಿತು. ಒಂದು ಪ್ರಕರಣದಲ್ಲಿ 50 ಲಕ್ಷ ನೀಡಿದರೆ ಇತರೆ ಪ್ರಕರಣಗಳ ಪಾಲಿಗೆ ಅದು ಪೂರ್ವನಿದರ್ಶನ ಆಗುತ್ತದೆಂಬುದು ಗುಜರಾತ್ ಸರ್ಕಾರದ ಬಾಧೆ.

2002ರ ಫೆಬ್ರವರಿ 27ರ ಮುಂಜಾನೆ ಗುಜರಾತಿನ ಗೋಧ್ರಾ ಬಳಿ ಸಾಬರಮತಿ ಎಕ್ಸ್ ಪ್ರೆಸ್‍ನ ಕರಸೇವಕರಿದ್ದ ಬೋಗಿಗೆ ಬೆಂಕಿ ಬಿದ್ದು 59 ಮಂದಿ ಆಹುತಿಯಾಗಿದ್ದರು. ಆಗ ಹೊತ್ತಿಕೊಂಡ ಕೋಮು ಗಲಭೆಗಳ ದಳ್ಳುರಿ ಗುಜರಾತಿನ ಉದ್ದಗಲಕ್ಕೆ ಅಲ್ಪಸಂಖ್ಯಾತರ ಮಾರಣ ಹೋಮಕ್ಕೆ ಕಾರಣವಾಯಿತು.

ಅಹ್ಮದಾಬಾದ್ ನಿಂದ 200 ಕಿ.ಮೀ. ದೂರದ ದಾಹೋದ್ ನ ಒಂದು ಹಳ್ಳಿ ರಾಧಿಕಾಪುರ ಬಿಲ್ಕಿಸ್ ಬಾನುವಿನ ಹುಟ್ಟೂರು. ನೆರೆ ಹೊರೆಯವರು ಮುಸಲ್ಮಾನರಎಲ್ಲ 60 ಮನೆಗಳಿಗೆ ಬೆಂಕಿ ಇಟ್ಟಿದ್ದರು. ಬಿಲ್ಕಿಸ್ ಮತ್ತು ಆಕೆಯ ಕುಟುಂಬ ಬೆದರಿ ಹೊಲಗಳತ್ತ ಪರಾರಿಯಾಗಿತ್ತು. ಒಂದೆಡೆಯಿಂದ ಇನ್ನೊಂದೆಡೆಗೆ ಪರಾರಿಯಾಗುತ್ತಲೇ ತಲೆಮರೆಸಿಕೊಂಡಿದ್ದಾಗ ಆಕೆಯ ರಕ್ತಸಂಬಂಧಿ ಶಮೀಮ್ ಹೆಣ್ಣುಮಗುವನ್ನು ಪ್ರಸವಿಸಿದ್ದಳು.

ಸುತ್ತಮುತ್ತಲ ಅಡವಿಯ ಗಿಡಮರಗಳ ನೆರಳುಗಳಲ್ಲಿ ಅಡಗಿಕೊಳ್ಳುತ್ತಿದ್ದ ಅವರು ಹೇಗಾದರೂ ಮಾಡಿ ಮುಸ್ಲಿಂ ಬಾಹುಳ್ಯದ ವಸತಿಯನ್ನು ತಲುಪಬೇಕಿತ್ತು. ಹೆದ್ದಾರಿಗಳನ್ನು ಹಿಡಿಯುವಂತಿರಲಿಲ್ಲ. ಒಳನಾಡಿನ ಕಚ್ಚಾದಾರಿಗಳಲ್ಲೇ ಸಾಗಬೇಕಿತ್ತು. ಭೀತಿಯ ಪಯಣದಲ್ಲಿಕರುಣೆ ಸಹಾನುಭೂತಿಯುಳ್ಳ ಜನ ಅವರನ್ನು ಕಾಪಾಡಿದ್ದುಂಟು.

ಪನ್ನಿವೇಲ್ ಎಂಬ ಹಳ್ಳಿ ಸೇರಿದ್ದರೆ ಈ ಕುಟುಂಬದ ಪ್ರಾಣಗಳು ಉಳಿಯುತ್ತಿದ್ದವು. ಆದರೆ ಹಾಗಾಗಲಿಲ್ಲ. ಈ ಕುಟುಂಬ ಪಯಣಿಸುತ್ತಿದ್ದ ಟ್ರಕ್‍ನ್ನು ಎರಡು ಟ್ರಕ್‍ಗಳು ಅಡ್ಡ ಹಾಕಿದ್ದವು. 20- 30 ಮಂದಿಯ ಕೈಗಳಲ್ಲಿ ಹಿರಿದಿದ್ದಕತ್ತಿ ಕುಡುಗೋಲುಗಳು. ಬಿಲ್ಕಿಸ್‍ ಅಪ್ಪನಿಗೆ ಚಿಕಿತ್ಸೆ ನೀಡಿದ್ದ, ಅದೇ ಬೀದಿಯ ಎದುರಿಗಿದ್ದ ವೈದ್ಯನ ಮಗ, ಬಳೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿ, ಹೊಟೇಲು ಇಟ್ಟು ಕೊಂಡಿದ್ದಾತ, ಗ್ರಾಮಪಂಚಾಯಿತಿ ಸದಸ್ಯೆಯಗಂಡ… ಇವರೆಲ್ಲ ಬಿಲ್ಕಿಸ್ ಗೆ ಚಿರ ಪರಿಚಿತರೇ. ಬಾಲ್ಯದಿಂದತನ್ನನ್ನು ಬಲ್ಲವರೇಆದರೂತನ್ನನ್ನು ಎಷ್ಟು ಕ್ರೌರ್ಯದಿಂದ ಉಲ್ಲಂಘಿಸಿದರಲ್ಲ ಎಂಬುದು ಆಕೆಯನ್ನು ಬಹುಕಾಲ ಅಲ್ಲಾಡಿಸಿದ ಕಟು ವಾಸ್ತವ.

ಬಗಲಲ್ಲಿ ಮೂರು ವರ್ಷದ ಮಗಳು ಸಾಲೇಹ. ಅವಳನ್ನು ಕಸಿದುಕೊಂಡು ತಲೆಯನ್ನು ನೆಲಕ್ಕೆ ಅಪ್ಪಳಿಸಿ ಅರೆನಿಮಿಷದಲ್ಲೇಕೊಂದು ಹಾಕಿದನೊಬ್ಬ. ತನ್ನದೇ ಹಳ್ಳಿಯ ಮೂವರು ಪುರುಷರು ಆಕೆಯನ್ನು ಎಳೆದುಕೊಂಡು ಬಟ್ಟೆಗಳನ್ನು ಹರಿದೆಸೆದರು. ಗರ್ಭಿಣಿಯೆಂದು ಆಕೆ ಅಲವತ್ತು ಕೊಂಡಳು. ನೀವೆಲ್ಲ ನನ್ನ ಅಣ್ಣಂದಿರು, ಚಿಕ್ಕಪ್ಪಂದಿರಿದ್ದಂತೆ ಎಂದರೂ ಬಿಡದೆ ಅತ್ಯಾಚಾರ ನಡೆಸಿದರು.

ಹತ್ಯೆಅತ್ಯಾಚಾರದ ಅಮಾನುಷತೆಯ ವಿಕೃತ ವಿಜೃಂಭಣೆಗೆ 14 ಮಂದಿ ಬಲಿಯಾದರು. ಹಿಂದಿನ ದಿನವಷ್ಟೇ ಹೆಣ್ಣುಮಗುವನ್ನು ಹಡೆದಿದ್ದ ಶಮೀಮ್‍ಳನ್ನು ಅವಳ ಹಸುಳೆಯ ಸಹಿತ ಹತ್ಯೆ ಮಾಡಲಾಗಿತ್ತು.ಮೂರ್ಛೆ ಹೋಗಿದ್ದ ಬಿಲ್ಕಿಸ್ ಸತ್ತೇ ಹೋಗಿದ್ದಾಳೆಂದು ಭಾವಿಸಿದ ದಾಳಿಕೋರರು ಮಾರಣಹೋಮದತಾಣವನ್ನುತೊರೆದಿದ್ದರು.

ಎಚ್ಚ ಬಂದಾಗ ಪೂರ್ಣ ಬೆತ್ತಲಾಗಿದ್ದದ್ದು ತಿಳಿಯಿತು. ಸುತ್ತಮುತ್ತಕೊಚ್ಚಿ ಹಾಕಲಾಗಿದ್ದತನ್ನದೇಕುಟುಂಬದ ರಕ್ತಸಿಕ್ತ ಕಳೇಬರಗಳು. ಪೆಟ್ಟಿಕೋಟಿನಿಂದ ಮೈ ಮುಚ್ಚಿಕೊಂಡು ಪಕ್ಕದಲ್ಲಿದ್ದ ಗುಡ್ಡ ಹತ್ತಿ ಅಲ್ಲಿಯೇದುಃಖ ಭೀತಿಯಲ್ಲಿ ಮುಳುಗಿ ಇರುಳು ಕಳೆದಳು. ಮರುದಿನ ನೀರಿಗಾಗಿ ಅರಸುತ್ತಿದ್ದವಳನ್ನು ಕೊಳವೆ ಬಾವಿಯೊಂದರ ಬಳಿ ಕಂಡ ಆದಿವಾಸಿ ಹೆಣ್ಣುಮಗಳು ಬಟ್ಟೆಗಳನ್ನಿತ್ತಳು. ಪೊಲೀಸ್‍ ಅಧಿಕಾರಿಯೊಬ್ಬನನ್ನು ಸಂಪರ್ಕಿಸಿದಳು. ಆತ ಆಕೆಯನ್ನು ತನ್ನ ವಾಹನದಲ್ಲಿ ಲಿಮ್ಖೇಡ ಪೊಲೀಸ್‍ಠಾಣೆಗೆ ಕರೆದೊಯ್ದ.

ಎಂಟು ಸಾಮೂಹಿಕ ಅತ್ಯಾಚಾರಗಳು ಮತ್ತು 14 ಹತ್ಯೆಗಳನ್ನು ನೋಡಿದ ನಂತರವೂ ಪ್ರಾಣಸಹಿತ ಉಳಿದಿದ್ದ ಏಕೈಕ ಸಾಕ್ಷಿ ಬಿಲ್ಕಿಸ್ ಬಾನು.ಆದರೆ ಪೊಲೀಸರುದೂರು ದಾಖಲಿಸಿಕೊಳ್ಳುವುದಿಲ್ಲ. ಒತ್ತಾಯಿಸಿದರೆ ವಿಷದ ಸೂಜಿಮದ್ದು ನೀಡಿಕೊಲ್ಲುವ ಬೆದರಿಕೆ ಹಾಕಲಾಗುತ್ತದೆ. ಪರಿಹಾರ ಶಿಬಿರವೊಂದಕ್ಕೆ ಆಕೆಯನ್ನು ಸಾಗ ಹಾಕಲಾಗುತ್ತದೆ. ಅಲ್ಲಿತನ್ನ ಪತಿಯಾಕೂಬ್‍ರಸೂಲನನ್ನು ಸೇರಿಕೊಳ್ಳುತ್ತಾಳೆ.

ಬಿಲ್ಕಿಸ್‍ ಕುಟುಂಬದ ಹತ್ಯೆ ನಡೆದಎರಡು ದಿನಗಳ ನಂತರಎಂಟು ಶವಗಳನ್ನು ಕಂಡವರು ಕೆಲ ಸ್ಥಳೀಯ ಛಾಯಾ ಚಿತ್ರಕಾರರು. ಪೊಲೀಸರು ಕಾರ್ಯಪ್ರವೃತ್ತರಾಗುತ್ತಾರೆ. ಅತ್ಯಾಚಾರಜರುಗಿದ ನಾಲ್ಕು ದಿನಗಳ ನಂತರ ಗೋಧ್ರಾ ಸಿವಿಲ್ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯಿತು.

ಕಳೇಬರಗಳ ಮಹಜರು ನಡೆಯುವುದಿಲ್ಲ. ಕೊಳೆಯಲು ಬಿಡಲಾಗುತ್ತದೆ. ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ಮಹತ್ವದ ಸಾಕ್ಷ್ಯ ಪುರಾವೆಗಳಾಗಬೇಕಿದ್ದ ರಕ್ತ ಮತ್ತು ಇತರೆ ಜೈವಿಕ ಸ್ಯಾಂಪಲ್ ಗಳನ್ನು ಸಂಗ್ರಹಿಸಲಿಲ್ಲ. ಶವಗಳನ್ನು ಸಾಮೂಹಿಕವಾಗಿ ದಫನು ಮಾಡಲಾಗುತ್ತದೆ. ಎರಡು ವರ್ಷಗಳ ನಂತರ 2004ರಲ್ಲಿ ಸಿಬಿಐ ಈ ತನಿಖೆಯನ್ನುಕೈಗೆತ್ತಿಕೊಂಡಾಗ ಹೂತಿದ್ದ ಶವಗಳನ್ನು ಹೊರತೆಗೆದಾಗಯಾವ ಶವಕ್ಕೂ ರುಂಡವಿರುವುದಿಲ್ಲ. ಮರಣೋತ್ತರ ಪರೀಕ್ಷೆಯ ನಂತರಗುರುತು ಸಿಗದಿರಲೆಂದು ರುಂಡಗಳನ್ನು ಬೇರ್ಪಡಿಸಲಾಗಿತ್ತು. ಶವಗಳು ಬೇಗನೆ ಕೊಳೆತು ಹೋಗಲೆಂದು ಅವುಗಳ ಮೇಲೆ ಉಪ್ಪು ಸುರಿದು ಹುಗಿಯಲಾಗಿರುತ್ತದೆ.

ಹನ್ನೊಂದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಮುಂಬಯಿ ಹೈಕೋರ್ಟ್ 2017ರ ಮೇ 4ರಂದು ಎತ್ತಿ ಹಿಡಿದಿತ್ತು. ಮಹತ್ವದ ಸಾಕ್ಷ್ಯ ಪುರಾವೆಗಳನ್ನು ತಿದ್ದಿದ ಮತ್ತು ನಾಶ ಮಾಡಿದ ಏಳು ಮಂದಿ ಪೊಲೀಸರು ಹಾಗೂ ವೈದ್ಯರಖುಲಾಸೆಯ ಆದೇಶವನ್ನು ತಳ್ಳಿ ಹಾಕಿತ್ತು.

ಮನುಷ್ಯಳಾಗಿ, ನಾಗರಿಕಳಾಗಿ, ಮಹಿಳೆಯಾಗಿ, ತಾಯಿಯಾಗಿ ತನ್ನ ಹಕ್ಕುಗಳನ್ನು ಅತ್ಯಂತ ಪಾಶವೀತನದಿಂದ ಉಲ್ಲಂಘಿಸಲಾಗಿದೆ ಎಂದು ಬಿಲ್ಕಿಸ್ ಬಾನು ನ್ಯಾಯಾಲಯದ ಮುಂದೆ ಅರಿಕೆ ಮಾಡಿಕೊಂಡಿದ್ದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...