Homeಮುಖಪುಟಬಿಲ್ಕಿಸ್ ಪ್ರಕರಣ - ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

ಬಿಲ್ಕಿಸ್ ಪ್ರಕರಣ – ಹದ್ದುಬಸ್ತುಗಳಿಲ್ಲವೇ ಅಮಾನವೀಯತೆಗೆ? : ಡಿ.ಉಮಾಪತಿ

- Advertisement -
- Advertisement -

ಗರ್ಭಿಣಿಯಾದ ಆಕೆಯ ಮೇಲೆ ಬಿಟ್ಟೂಬಿಡದೆ 22 ಬಾರಿ ಅತ್ಯಾಚಾರ ನಡೆಯುತ್ತದೆ. ಮೂರು ವರ್ಷದ ಮಗಳ ತಲೆಯನ್ನು ನೆಲಕ್ಕೆ ಅಪ್ಪಳಿಸಿ ಕೊಲ್ಲಲಾಗುತ್ತದೆ. ಆಕೆಯ ತಾಯಿಯೂ ಸೇರಿದಂತೆ ಕುಟುಂಬದ ಇತರೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಚ್ಚಿ ಹಾಕಲಾಗುತ್ತದೆ.ಕಣ್ಣೆದುರಿಗೇ ಕುಟುಂಬದ 14 ಹೆಣಗಳು ಉರುಳುತ್ತವೆ. ಈ ಅಪರಾಧವನ್ನು ಹೀನಾತಿಹೀನ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಗುಜರಾತ್ ಸರ್ಕಾರ.

ಕೋಮುವಾದಿ ಹಿಂಸೆಯ ದಳ್ಳುರಿಯ ನಡುವೆ ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಬಡ ಹೆಣ್ಣುಮಗಳೊಬ್ಬಳಿಗೆ 50 ಲಕ್ಷರೂಪಾಯಿ ಪರಿಹಾರ ನೀಡುವಂತೆ ಸುಪ್ರೀಮ್‍ ಕೋರ್ಟ್‍ತೀರ್ಪು ನೀಡಿ ನಾಲ್ಕು ತಿಂಗಳುಗಳೇ ಉರುಳಿವೆ. ಈ ಮುನ್ನತನಗೆ ನ್ಯಾಯ ಬೇಡಿ 17 ವರ್ಷಗಳ ಕಾಲ ಕೋರ್ಟುಗಳ ಕಂಬ ಸುತ್ತಿದ್ದಳು ಆಕೆ.

ಬಿಲ್ಕಿಸ್‍ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಸಿದ್ದ ನ್ಯಾಯಾಲಯ ನಿಂದನೆ ಮೊಕದ್ದಮೆ ಕಳೆದ ವಾರ ಸುಪ್ರೀಮ್‍ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. ಪರಿಹಾರದ ಆದೇಶದ ವಿರುದ್ಧ ಮರುವಿಮರ್ಶೆಅರ್ಜಿ ಸಲ್ಲಿಸುವ ಇರಾದೆ ತನಗಿರುವ ಕಾರಣ ಪರಿಹಾರವನ್ನು ನೀಡಿಲ್ಲ ಎಂದು ಗುಜರಾತ್ ಸರ್ಕಾರ ಹೇಳಿಕೊಂಡಿತು. ಒಂದು ಪ್ರಕರಣದಲ್ಲಿ 50 ಲಕ್ಷ ನೀಡಿದರೆ ಇತರೆ ಪ್ರಕರಣಗಳ ಪಾಲಿಗೆ ಅದು ಪೂರ್ವನಿದರ್ಶನ ಆಗುತ್ತದೆಂಬುದು ಗುಜರಾತ್ ಸರ್ಕಾರದ ಬಾಧೆ.

2002ರ ಫೆಬ್ರವರಿ 27ರ ಮುಂಜಾನೆ ಗುಜರಾತಿನ ಗೋಧ್ರಾ ಬಳಿ ಸಾಬರಮತಿ ಎಕ್ಸ್ ಪ್ರೆಸ್‍ನ ಕರಸೇವಕರಿದ್ದ ಬೋಗಿಗೆ ಬೆಂಕಿ ಬಿದ್ದು 59 ಮಂದಿ ಆಹುತಿಯಾಗಿದ್ದರು. ಆಗ ಹೊತ್ತಿಕೊಂಡ ಕೋಮು ಗಲಭೆಗಳ ದಳ್ಳುರಿ ಗುಜರಾತಿನ ಉದ್ದಗಲಕ್ಕೆ ಅಲ್ಪಸಂಖ್ಯಾತರ ಮಾರಣ ಹೋಮಕ್ಕೆ ಕಾರಣವಾಯಿತು.

ಅಹ್ಮದಾಬಾದ್ ನಿಂದ 200 ಕಿ.ಮೀ. ದೂರದ ದಾಹೋದ್ ನ ಒಂದು ಹಳ್ಳಿ ರಾಧಿಕಾಪುರ ಬಿಲ್ಕಿಸ್ ಬಾನುವಿನ ಹುಟ್ಟೂರು. ನೆರೆ ಹೊರೆಯವರು ಮುಸಲ್ಮಾನರಎಲ್ಲ 60 ಮನೆಗಳಿಗೆ ಬೆಂಕಿ ಇಟ್ಟಿದ್ದರು. ಬಿಲ್ಕಿಸ್ ಮತ್ತು ಆಕೆಯ ಕುಟುಂಬ ಬೆದರಿ ಹೊಲಗಳತ್ತ ಪರಾರಿಯಾಗಿತ್ತು. ಒಂದೆಡೆಯಿಂದ ಇನ್ನೊಂದೆಡೆಗೆ ಪರಾರಿಯಾಗುತ್ತಲೇ ತಲೆಮರೆಸಿಕೊಂಡಿದ್ದಾಗ ಆಕೆಯ ರಕ್ತಸಂಬಂಧಿ ಶಮೀಮ್ ಹೆಣ್ಣುಮಗುವನ್ನು ಪ್ರಸವಿಸಿದ್ದಳು.

ಸುತ್ತಮುತ್ತಲ ಅಡವಿಯ ಗಿಡಮರಗಳ ನೆರಳುಗಳಲ್ಲಿ ಅಡಗಿಕೊಳ್ಳುತ್ತಿದ್ದ ಅವರು ಹೇಗಾದರೂ ಮಾಡಿ ಮುಸ್ಲಿಂ ಬಾಹುಳ್ಯದ ವಸತಿಯನ್ನು ತಲುಪಬೇಕಿತ್ತು. ಹೆದ್ದಾರಿಗಳನ್ನು ಹಿಡಿಯುವಂತಿರಲಿಲ್ಲ. ಒಳನಾಡಿನ ಕಚ್ಚಾದಾರಿಗಳಲ್ಲೇ ಸಾಗಬೇಕಿತ್ತು. ಭೀತಿಯ ಪಯಣದಲ್ಲಿಕರುಣೆ ಸಹಾನುಭೂತಿಯುಳ್ಳ ಜನ ಅವರನ್ನು ಕಾಪಾಡಿದ್ದುಂಟು.

ಪನ್ನಿವೇಲ್ ಎಂಬ ಹಳ್ಳಿ ಸೇರಿದ್ದರೆ ಈ ಕುಟುಂಬದ ಪ್ರಾಣಗಳು ಉಳಿಯುತ್ತಿದ್ದವು. ಆದರೆ ಹಾಗಾಗಲಿಲ್ಲ. ಈ ಕುಟುಂಬ ಪಯಣಿಸುತ್ತಿದ್ದ ಟ್ರಕ್‍ನ್ನು ಎರಡು ಟ್ರಕ್‍ಗಳು ಅಡ್ಡ ಹಾಕಿದ್ದವು. 20- 30 ಮಂದಿಯ ಕೈಗಳಲ್ಲಿ ಹಿರಿದಿದ್ದಕತ್ತಿ ಕುಡುಗೋಲುಗಳು. ಬಿಲ್ಕಿಸ್‍ ಅಪ್ಪನಿಗೆ ಚಿಕಿತ್ಸೆ ನೀಡಿದ್ದ, ಅದೇ ಬೀದಿಯ ಎದುರಿಗಿದ್ದ ವೈದ್ಯನ ಮಗ, ಬಳೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿ, ಹೊಟೇಲು ಇಟ್ಟು ಕೊಂಡಿದ್ದಾತ, ಗ್ರಾಮಪಂಚಾಯಿತಿ ಸದಸ್ಯೆಯಗಂಡ… ಇವರೆಲ್ಲ ಬಿಲ್ಕಿಸ್ ಗೆ ಚಿರ ಪರಿಚಿತರೇ. ಬಾಲ್ಯದಿಂದತನ್ನನ್ನು ಬಲ್ಲವರೇಆದರೂತನ್ನನ್ನು ಎಷ್ಟು ಕ್ರೌರ್ಯದಿಂದ ಉಲ್ಲಂಘಿಸಿದರಲ್ಲ ಎಂಬುದು ಆಕೆಯನ್ನು ಬಹುಕಾಲ ಅಲ್ಲಾಡಿಸಿದ ಕಟು ವಾಸ್ತವ.

ಬಗಲಲ್ಲಿ ಮೂರು ವರ್ಷದ ಮಗಳು ಸಾಲೇಹ. ಅವಳನ್ನು ಕಸಿದುಕೊಂಡು ತಲೆಯನ್ನು ನೆಲಕ್ಕೆ ಅಪ್ಪಳಿಸಿ ಅರೆನಿಮಿಷದಲ್ಲೇಕೊಂದು ಹಾಕಿದನೊಬ್ಬ. ತನ್ನದೇ ಹಳ್ಳಿಯ ಮೂವರು ಪುರುಷರು ಆಕೆಯನ್ನು ಎಳೆದುಕೊಂಡು ಬಟ್ಟೆಗಳನ್ನು ಹರಿದೆಸೆದರು. ಗರ್ಭಿಣಿಯೆಂದು ಆಕೆ ಅಲವತ್ತು ಕೊಂಡಳು. ನೀವೆಲ್ಲ ನನ್ನ ಅಣ್ಣಂದಿರು, ಚಿಕ್ಕಪ್ಪಂದಿರಿದ್ದಂತೆ ಎಂದರೂ ಬಿಡದೆ ಅತ್ಯಾಚಾರ ನಡೆಸಿದರು.

ಹತ್ಯೆಅತ್ಯಾಚಾರದ ಅಮಾನುಷತೆಯ ವಿಕೃತ ವಿಜೃಂಭಣೆಗೆ 14 ಮಂದಿ ಬಲಿಯಾದರು. ಹಿಂದಿನ ದಿನವಷ್ಟೇ ಹೆಣ್ಣುಮಗುವನ್ನು ಹಡೆದಿದ್ದ ಶಮೀಮ್‍ಳನ್ನು ಅವಳ ಹಸುಳೆಯ ಸಹಿತ ಹತ್ಯೆ ಮಾಡಲಾಗಿತ್ತು.ಮೂರ್ಛೆ ಹೋಗಿದ್ದ ಬಿಲ್ಕಿಸ್ ಸತ್ತೇ ಹೋಗಿದ್ದಾಳೆಂದು ಭಾವಿಸಿದ ದಾಳಿಕೋರರು ಮಾರಣಹೋಮದತಾಣವನ್ನುತೊರೆದಿದ್ದರು.

ಎಚ್ಚ ಬಂದಾಗ ಪೂರ್ಣ ಬೆತ್ತಲಾಗಿದ್ದದ್ದು ತಿಳಿಯಿತು. ಸುತ್ತಮುತ್ತಕೊಚ್ಚಿ ಹಾಕಲಾಗಿದ್ದತನ್ನದೇಕುಟುಂಬದ ರಕ್ತಸಿಕ್ತ ಕಳೇಬರಗಳು. ಪೆಟ್ಟಿಕೋಟಿನಿಂದ ಮೈ ಮುಚ್ಚಿಕೊಂಡು ಪಕ್ಕದಲ್ಲಿದ್ದ ಗುಡ್ಡ ಹತ್ತಿ ಅಲ್ಲಿಯೇದುಃಖ ಭೀತಿಯಲ್ಲಿ ಮುಳುಗಿ ಇರುಳು ಕಳೆದಳು. ಮರುದಿನ ನೀರಿಗಾಗಿ ಅರಸುತ್ತಿದ್ದವಳನ್ನು ಕೊಳವೆ ಬಾವಿಯೊಂದರ ಬಳಿ ಕಂಡ ಆದಿವಾಸಿ ಹೆಣ್ಣುಮಗಳು ಬಟ್ಟೆಗಳನ್ನಿತ್ತಳು. ಪೊಲೀಸ್‍ ಅಧಿಕಾರಿಯೊಬ್ಬನನ್ನು ಸಂಪರ್ಕಿಸಿದಳು. ಆತ ಆಕೆಯನ್ನು ತನ್ನ ವಾಹನದಲ್ಲಿ ಲಿಮ್ಖೇಡ ಪೊಲೀಸ್‍ಠಾಣೆಗೆ ಕರೆದೊಯ್ದ.

ಎಂಟು ಸಾಮೂಹಿಕ ಅತ್ಯಾಚಾರಗಳು ಮತ್ತು 14 ಹತ್ಯೆಗಳನ್ನು ನೋಡಿದ ನಂತರವೂ ಪ್ರಾಣಸಹಿತ ಉಳಿದಿದ್ದ ಏಕೈಕ ಸಾಕ್ಷಿ ಬಿಲ್ಕಿಸ್ ಬಾನು.ಆದರೆ ಪೊಲೀಸರುದೂರು ದಾಖಲಿಸಿಕೊಳ್ಳುವುದಿಲ್ಲ. ಒತ್ತಾಯಿಸಿದರೆ ವಿಷದ ಸೂಜಿಮದ್ದು ನೀಡಿಕೊಲ್ಲುವ ಬೆದರಿಕೆ ಹಾಕಲಾಗುತ್ತದೆ. ಪರಿಹಾರ ಶಿಬಿರವೊಂದಕ್ಕೆ ಆಕೆಯನ್ನು ಸಾಗ ಹಾಕಲಾಗುತ್ತದೆ. ಅಲ್ಲಿತನ್ನ ಪತಿಯಾಕೂಬ್‍ರಸೂಲನನ್ನು ಸೇರಿಕೊಳ್ಳುತ್ತಾಳೆ.

ಬಿಲ್ಕಿಸ್‍ ಕುಟುಂಬದ ಹತ್ಯೆ ನಡೆದಎರಡು ದಿನಗಳ ನಂತರಎಂಟು ಶವಗಳನ್ನು ಕಂಡವರು ಕೆಲ ಸ್ಥಳೀಯ ಛಾಯಾ ಚಿತ್ರಕಾರರು. ಪೊಲೀಸರು ಕಾರ್ಯಪ್ರವೃತ್ತರಾಗುತ್ತಾರೆ. ಅತ್ಯಾಚಾರಜರುಗಿದ ನಾಲ್ಕು ದಿನಗಳ ನಂತರ ಗೋಧ್ರಾ ಸಿವಿಲ್ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯಿತು.

ಕಳೇಬರಗಳ ಮಹಜರು ನಡೆಯುವುದಿಲ್ಲ. ಕೊಳೆಯಲು ಬಿಡಲಾಗುತ್ತದೆ. ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ಮಹತ್ವದ ಸಾಕ್ಷ್ಯ ಪುರಾವೆಗಳಾಗಬೇಕಿದ್ದ ರಕ್ತ ಮತ್ತು ಇತರೆ ಜೈವಿಕ ಸ್ಯಾಂಪಲ್ ಗಳನ್ನು ಸಂಗ್ರಹಿಸಲಿಲ್ಲ. ಶವಗಳನ್ನು ಸಾಮೂಹಿಕವಾಗಿ ದಫನು ಮಾಡಲಾಗುತ್ತದೆ. ಎರಡು ವರ್ಷಗಳ ನಂತರ 2004ರಲ್ಲಿ ಸಿಬಿಐ ಈ ತನಿಖೆಯನ್ನುಕೈಗೆತ್ತಿಕೊಂಡಾಗ ಹೂತಿದ್ದ ಶವಗಳನ್ನು ಹೊರತೆಗೆದಾಗಯಾವ ಶವಕ್ಕೂ ರುಂಡವಿರುವುದಿಲ್ಲ. ಮರಣೋತ್ತರ ಪರೀಕ್ಷೆಯ ನಂತರಗುರುತು ಸಿಗದಿರಲೆಂದು ರುಂಡಗಳನ್ನು ಬೇರ್ಪಡಿಸಲಾಗಿತ್ತು. ಶವಗಳು ಬೇಗನೆ ಕೊಳೆತು ಹೋಗಲೆಂದು ಅವುಗಳ ಮೇಲೆ ಉಪ್ಪು ಸುರಿದು ಹುಗಿಯಲಾಗಿರುತ್ತದೆ.

ಹನ್ನೊಂದು ಮಂದಿ ಅಪರಾಧಿಗಳಿಗೆ ಅಧೀನ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಮುಂಬಯಿ ಹೈಕೋರ್ಟ್ 2017ರ ಮೇ 4ರಂದು ಎತ್ತಿ ಹಿಡಿದಿತ್ತು. ಮಹತ್ವದ ಸಾಕ್ಷ್ಯ ಪುರಾವೆಗಳನ್ನು ತಿದ್ದಿದ ಮತ್ತು ನಾಶ ಮಾಡಿದ ಏಳು ಮಂದಿ ಪೊಲೀಸರು ಹಾಗೂ ವೈದ್ಯರಖುಲಾಸೆಯ ಆದೇಶವನ್ನು ತಳ್ಳಿ ಹಾಕಿತ್ತು.

ಮನುಷ್ಯಳಾಗಿ, ನಾಗರಿಕಳಾಗಿ, ಮಹಿಳೆಯಾಗಿ, ತಾಯಿಯಾಗಿ ತನ್ನ ಹಕ್ಕುಗಳನ್ನು ಅತ್ಯಂತ ಪಾಶವೀತನದಿಂದ ಉಲ್ಲಂಘಿಸಲಾಗಿದೆ ಎಂದು ಬಿಲ್ಕಿಸ್ ಬಾನು ನ್ಯಾಯಾಲಯದ ಮುಂದೆ ಅರಿಕೆ ಮಾಡಿಕೊಂಡಿದ್ದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...