Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಎನ್ನುವವನು ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾದನು. ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಭಾರತೀಯ ಜನತಾ ಪಕ್ಷದ ಶಾಸಕರೊಂದಿಗೆ ಅತ್ಯಾಚಾರಿ ಶೈಲೇಶ್ ಚಿಮನ್‌ಲಾಲ್ ಭಟ್ ಕಾಣಿಸಿಕೊಂಡಿದ್ದಾನೆ.

2022ರ ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಯಾದ ಶೈಲೇಶ್ ಚಿಮನ್‌ಲಾಲ್ ಭಟ್, ಮಾರ್ಚ್ 25ರಂದು ದಾಹೋದ್ ಸಂಸದ ಜಸ್ವಂತಸಿನ್ಹ್ ಭಭೋರ್ ಮತ್ತು ಅವರ ಸಹೋದರ, ಲಿಮ್ಖೇಡಾ ಶಾಸಕ ಶೈಲೇಶ್ ಭಭೋರ್ ಅವರೊಂದಿಗೆ ನೀರಿನ ಪೈಪ್‌ಲೈನ್ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದಾನೆ. ಇಬ್ಬರು ಬಿಜೆಪಿ ನಾಯಕರೊಂದಿಗೆ ಭಟ್ ಫೋಟೋಗಳಿಗೆ ಪೋಸ್ ನೀಡಿದ್ದಾನೆ.

ಮಾರ್ಚ್ 3, 2002ರಂದು ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗಳ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಕ್ಕಾಗಿ ಹನ್ನೊಂದು ಅಪರಾಧಿಗಳು ಶಿಕ್ಷೆಗೊಳಗಾದರು. ಆ ಸಮಯದಲ್ಲಿ ಅವಳಿಗೆ 19 ವರ್ಷ ವಯಸ್ಸು ಮತ್ತು ಆಗ ಆಕೆ ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಲ್ಲದೇ, ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಹದಿನಾಲ್ಕು ಸದಸ್ಯರನ್ನು ಹಿಂಸಾಚಾರದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಗುಜರಾತ್ ಸರ್ಕಾರವು ಸನ್ನಡತೆ ನೀತಿಯ ಅಡಿಯಲ್ಲಿ ಅವರ ಅರ್ಜಿಯನ್ನು ಅನುಮೋದಿಸಿದ ನಂತರ ಅಪರಾಧಿಗಳನ್ನು ಆಗಸ್ಟ್ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಇವರ ಬಿಡುಗಡೆಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಅವರ ಬಿಡುಗಡೆ ವಿರುದ್ಧದ ಅರ್ಜಿಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಶೀಘ್ರದಲ್ಲಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿತು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸರಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಎಂ ಪಾಲಿಟ್‌ಬ್ಯೂರೊ ಸದಸ್ಯೆ ಸುಭಾಷಿಣಿ ಅಲಿ ಮತ್ತು ಇತರರು ಸೇರಿದ್ದಾರೆ. ಅವರ ಬಿಡುಗಡೆ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಟ್ವಿಟರ್‌ನಲ್ಲಿ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿದ್ದು, ”ಈ ರಾಕ್ಷಸರನ್ನು ಮತ್ತೆ ಜೈಲಿನಲ್ಲಿ ನೋಡಬೇಕಿದೆ, ಈಗಾಗಲೇ ಕೀಯನ್ನು ಎಸೆಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರ ಬಿಜೆಪಿ ನಾಯಕರೊಂದಿಗೆ ಅಪರಾಧಿ ಶೈಲೇಶ್ ಚಿಮನ್‌ಲಾಲ್ ಭಟ್ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಬಾನೊ ಅವರ ಪತಿ ಯಾಕೂಬ್ ರಸೂಲ್ ಅವರು, ”ಈ ಫೋಟೋಗಳಿಂದ ಆಶ್ಚರ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

“ಈ ಜನರನ್ನು [ಅಪರಾಧಿಗಳು] ಜೈಲಿನಿಂದ ಹೊರಬಂದ ಕ್ಷಣದಲ್ಲೇ ಅವರು ಗೌರವಿಸಿದರು. ಅವರು ಅಧಿಕಾರದಲ್ಲಿರುವವರೊಂದಿಗೆ ವೇದಿಕೆ ಹಂಚಿಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯವಿಲ್ಲ. ನ್ಯಾಯಕ್ಕಾಗಿ ನಮ್ಮ ಏಕೈಕ ಭರವಸೆ ಎಂದರೆ ಸುಪ್ರೀಂ ಕೋರ್ಟ್ ಆಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...