Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಎನ್ನುವವನು ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾದನು. ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಭಾರತೀಯ ಜನತಾ ಪಕ್ಷದ ಶಾಸಕರೊಂದಿಗೆ ಅತ್ಯಾಚಾರಿ ಶೈಲೇಶ್ ಚಿಮನ್‌ಲಾಲ್ ಭಟ್ ಕಾಣಿಸಿಕೊಂಡಿದ್ದಾನೆ.

2022ರ ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಯಾದ ಶೈಲೇಶ್ ಚಿಮನ್‌ಲಾಲ್ ಭಟ್, ಮಾರ್ಚ್ 25ರಂದು ದಾಹೋದ್ ಸಂಸದ ಜಸ್ವಂತಸಿನ್ಹ್ ಭಭೋರ್ ಮತ್ತು ಅವರ ಸಹೋದರ, ಲಿಮ್ಖೇಡಾ ಶಾಸಕ ಶೈಲೇಶ್ ಭಭೋರ್ ಅವರೊಂದಿಗೆ ನೀರಿನ ಪೈಪ್‌ಲೈನ್ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದಾನೆ. ಇಬ್ಬರು ಬಿಜೆಪಿ ನಾಯಕರೊಂದಿಗೆ ಭಟ್ ಫೋಟೋಗಳಿಗೆ ಪೋಸ್ ನೀಡಿದ್ದಾನೆ.

ಮಾರ್ಚ್ 3, 2002ರಂದು ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗಳ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಕ್ಕಾಗಿ ಹನ್ನೊಂದು ಅಪರಾಧಿಗಳು ಶಿಕ್ಷೆಗೊಳಗಾದರು. ಆ ಸಮಯದಲ್ಲಿ ಅವಳಿಗೆ 19 ವರ್ಷ ವಯಸ್ಸು ಮತ್ತು ಆಗ ಆಕೆ ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಲ್ಲದೇ, ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಹದಿನಾಲ್ಕು ಸದಸ್ಯರನ್ನು ಹಿಂಸಾಚಾರದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಗುಜರಾತ್ ಸರ್ಕಾರವು ಸನ್ನಡತೆ ನೀತಿಯ ಅಡಿಯಲ್ಲಿ ಅವರ ಅರ್ಜಿಯನ್ನು ಅನುಮೋದಿಸಿದ ನಂತರ ಅಪರಾಧಿಗಳನ್ನು ಆಗಸ್ಟ್ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಇವರ ಬಿಡುಗಡೆಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಅವರ ಬಿಡುಗಡೆ ವಿರುದ್ಧದ ಅರ್ಜಿಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಶೀಘ್ರದಲ್ಲಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿತು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸರಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಎಂ ಪಾಲಿಟ್‌ಬ್ಯೂರೊ ಸದಸ್ಯೆ ಸುಭಾಷಿಣಿ ಅಲಿ ಮತ್ತು ಇತರರು ಸೇರಿದ್ದಾರೆ. ಅವರ ಬಿಡುಗಡೆ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಟ್ವಿಟರ್‌ನಲ್ಲಿ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿದ್ದು, ”ಈ ರಾಕ್ಷಸರನ್ನು ಮತ್ತೆ ಜೈಲಿನಲ್ಲಿ ನೋಡಬೇಕಿದೆ, ಈಗಾಗಲೇ ಕೀಯನ್ನು ಎಸೆಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರ ಬಿಜೆಪಿ ನಾಯಕರೊಂದಿಗೆ ಅಪರಾಧಿ ಶೈಲೇಶ್ ಚಿಮನ್‌ಲಾಲ್ ಭಟ್ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಬಾನೊ ಅವರ ಪತಿ ಯಾಕೂಬ್ ರಸೂಲ್ ಅವರು, ”ಈ ಫೋಟೋಗಳಿಂದ ಆಶ್ಚರ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

“ಈ ಜನರನ್ನು [ಅಪರಾಧಿಗಳು] ಜೈಲಿನಿಂದ ಹೊರಬಂದ ಕ್ಷಣದಲ್ಲೇ ಅವರು ಗೌರವಿಸಿದರು. ಅವರು ಅಧಿಕಾರದಲ್ಲಿರುವವರೊಂದಿಗೆ ವೇದಿಕೆ ಹಂಚಿಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯವಿಲ್ಲ. ನ್ಯಾಯಕ್ಕಾಗಿ ನಮ್ಮ ಏಕೈಕ ಭರವಸೆ ಎಂದರೆ ಸುಪ್ರೀಂ ಕೋರ್ಟ್ ಆಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...