Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಎನ್ನುವವನು ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾದನು. ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಭಾರತೀಯ ಜನತಾ ಪಕ್ಷದ ಶಾಸಕರೊಂದಿಗೆ ಅತ್ಯಾಚಾರಿ ಶೈಲೇಶ್ ಚಿಮನ್‌ಲಾಲ್ ಭಟ್ ಕಾಣಿಸಿಕೊಂಡಿದ್ದಾನೆ.

2022ರ ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಯಾದ ಶೈಲೇಶ್ ಚಿಮನ್‌ಲಾಲ್ ಭಟ್, ಮಾರ್ಚ್ 25ರಂದು ದಾಹೋದ್ ಸಂಸದ ಜಸ್ವಂತಸಿನ್ಹ್ ಭಭೋರ್ ಮತ್ತು ಅವರ ಸಹೋದರ, ಲಿಮ್ಖೇಡಾ ಶಾಸಕ ಶೈಲೇಶ್ ಭಭೋರ್ ಅವರೊಂದಿಗೆ ನೀರಿನ ಪೈಪ್‌ಲೈನ್ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದಾನೆ. ಇಬ್ಬರು ಬಿಜೆಪಿ ನಾಯಕರೊಂದಿಗೆ ಭಟ್ ಫೋಟೋಗಳಿಗೆ ಪೋಸ್ ನೀಡಿದ್ದಾನೆ.

ಮಾರ್ಚ್ 3, 2002ರಂದು ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗಳ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಕ್ಕಾಗಿ ಹನ್ನೊಂದು ಅಪರಾಧಿಗಳು ಶಿಕ್ಷೆಗೊಳಗಾದರು. ಆ ಸಮಯದಲ್ಲಿ ಅವಳಿಗೆ 19 ವರ್ಷ ವಯಸ್ಸು ಮತ್ತು ಆಗ ಆಕೆ ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಲ್ಲದೇ, ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಹದಿನಾಲ್ಕು ಸದಸ್ಯರನ್ನು ಹಿಂಸಾಚಾರದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಗುಜರಾತ್ ಸರ್ಕಾರವು ಸನ್ನಡತೆ ನೀತಿಯ ಅಡಿಯಲ್ಲಿ ಅವರ ಅರ್ಜಿಯನ್ನು ಅನುಮೋದಿಸಿದ ನಂತರ ಅಪರಾಧಿಗಳನ್ನು ಆಗಸ್ಟ್ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಇವರ ಬಿಡುಗಡೆಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಅವರ ಬಿಡುಗಡೆ ವಿರುದ್ಧದ ಅರ್ಜಿಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಶೀಘ್ರದಲ್ಲಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿತು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸರಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಎಂ ಪಾಲಿಟ್‌ಬ್ಯೂರೊ ಸದಸ್ಯೆ ಸುಭಾಷಿಣಿ ಅಲಿ ಮತ್ತು ಇತರರು ಸೇರಿದ್ದಾರೆ. ಅವರ ಬಿಡುಗಡೆ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಟ್ವಿಟರ್‌ನಲ್ಲಿ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿದ್ದು, ”ಈ ರಾಕ್ಷಸರನ್ನು ಮತ್ತೆ ಜೈಲಿನಲ್ಲಿ ನೋಡಬೇಕಿದೆ, ಈಗಾಗಲೇ ಕೀಯನ್ನು ಎಸೆಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರ ಬಿಜೆಪಿ ನಾಯಕರೊಂದಿಗೆ ಅಪರಾಧಿ ಶೈಲೇಶ್ ಚಿಮನ್‌ಲಾಲ್ ಭಟ್ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಬಾನೊ ಅವರ ಪತಿ ಯಾಕೂಬ್ ರಸೂಲ್ ಅವರು, ”ಈ ಫೋಟೋಗಳಿಂದ ಆಶ್ಚರ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

“ಈ ಜನರನ್ನು [ಅಪರಾಧಿಗಳು] ಜೈಲಿನಿಂದ ಹೊರಬಂದ ಕ್ಷಣದಲ್ಲೇ ಅವರು ಗೌರವಿಸಿದರು. ಅವರು ಅಧಿಕಾರದಲ್ಲಿರುವವರೊಂದಿಗೆ ವೇದಿಕೆ ಹಂಚಿಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯವಿಲ್ಲ. ನ್ಯಾಯಕ್ಕಾಗಿ ನಮ್ಮ ಏಕೈಕ ಭರವಸೆ ಎಂದರೆ ಸುಪ್ರೀಂ ಕೋರ್ಟ್ ಆಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...