Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಎನ್ನುವವನು ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾದನು. ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಭಾರತೀಯ ಜನತಾ ಪಕ್ಷದ ಶಾಸಕರೊಂದಿಗೆ ಅತ್ಯಾಚಾರಿ ಶೈಲೇಶ್ ಚಿಮನ್‌ಲಾಲ್ ಭಟ್ ಕಾಣಿಸಿಕೊಂಡಿದ್ದಾನೆ.

2022ರ ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಯಾದ ಶೈಲೇಶ್ ಚಿಮನ್‌ಲಾಲ್ ಭಟ್, ಮಾರ್ಚ್ 25ರಂದು ದಾಹೋದ್ ಸಂಸದ ಜಸ್ವಂತಸಿನ್ಹ್ ಭಭೋರ್ ಮತ್ತು ಅವರ ಸಹೋದರ, ಲಿಮ್ಖೇಡಾ ಶಾಸಕ ಶೈಲೇಶ್ ಭಭೋರ್ ಅವರೊಂದಿಗೆ ನೀರಿನ ಪೈಪ್‌ಲೈನ್ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದಾನೆ. ಇಬ್ಬರು ಬಿಜೆಪಿ ನಾಯಕರೊಂದಿಗೆ ಭಟ್ ಫೋಟೋಗಳಿಗೆ ಪೋಸ್ ನೀಡಿದ್ದಾನೆ.

ಮಾರ್ಚ್ 3, 2002ರಂದು ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗಳ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಕ್ಕಾಗಿ ಹನ್ನೊಂದು ಅಪರಾಧಿಗಳು ಶಿಕ್ಷೆಗೊಳಗಾದರು. ಆ ಸಮಯದಲ್ಲಿ ಅವಳಿಗೆ 19 ವರ್ಷ ವಯಸ್ಸು ಮತ್ತು ಆಗ ಆಕೆ ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಲ್ಲದೇ, ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಹದಿನಾಲ್ಕು ಸದಸ್ಯರನ್ನು ಹಿಂಸಾಚಾರದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಗುಜರಾತ್ ಸರ್ಕಾರವು ಸನ್ನಡತೆ ನೀತಿಯ ಅಡಿಯಲ್ಲಿ ಅವರ ಅರ್ಜಿಯನ್ನು ಅನುಮೋದಿಸಿದ ನಂತರ ಅಪರಾಧಿಗಳನ್ನು ಆಗಸ್ಟ್ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಇವರ ಬಿಡುಗಡೆಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಅವರ ಬಿಡುಗಡೆ ವಿರುದ್ಧದ ಅರ್ಜಿಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಶೀಘ್ರದಲ್ಲಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿತು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸರಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಎಂ ಪಾಲಿಟ್‌ಬ್ಯೂರೊ ಸದಸ್ಯೆ ಸುಭಾಷಿಣಿ ಅಲಿ ಮತ್ತು ಇತರರು ಸೇರಿದ್ದಾರೆ. ಅವರ ಬಿಡುಗಡೆ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಟ್ವಿಟರ್‌ನಲ್ಲಿ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿದ್ದು, ”ಈ ರಾಕ್ಷಸರನ್ನು ಮತ್ತೆ ಜೈಲಿನಲ್ಲಿ ನೋಡಬೇಕಿದೆ, ಈಗಾಗಲೇ ಕೀಯನ್ನು ಎಸೆಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರ ಬಿಜೆಪಿ ನಾಯಕರೊಂದಿಗೆ ಅಪರಾಧಿ ಶೈಲೇಶ್ ಚಿಮನ್‌ಲಾಲ್ ಭಟ್ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಬಾನೊ ಅವರ ಪತಿ ಯಾಕೂಬ್ ರಸೂಲ್ ಅವರು, ”ಈ ಫೋಟೋಗಳಿಂದ ಆಶ್ಚರ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

“ಈ ಜನರನ್ನು [ಅಪರಾಧಿಗಳು] ಜೈಲಿನಿಂದ ಹೊರಬಂದ ಕ್ಷಣದಲ್ಲೇ ಅವರು ಗೌರವಿಸಿದರು. ಅವರು ಅಧಿಕಾರದಲ್ಲಿರುವವರೊಂದಿಗೆ ವೇದಿಕೆ ಹಂಚಿಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯವಿಲ್ಲ. ನ್ಯಾಯಕ್ಕಾಗಿ ನಮ್ಮ ಏಕೈಕ ಭರವಸೆ ಎಂದರೆ ಸುಪ್ರೀಂ ಕೋರ್ಟ್ ಆಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...