Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

- Advertisement -
- Advertisement -

2002ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಅವರ ಕುಟುಂಬ ಸದಸ್ಯರ ಕೊಲೆ ಪ್ರಕರಣದ ಅಪರಾಧಿಗಳು, ನ್ಯಾಯ ಪೀಠದ ಮುಂದೆ ಹಾಜರಾಗದಿರಲು ಕಾಲವನ್ನು ಮುಂದೂಡುವ ಸಲುವಾಗಿ ಆಕ್ಷೇಪಗಳನ್ನು ಎತ್ತುತ್ತಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಬಿಲ್ಕಿಸ್ ಪ್ರಶ್ನಿಸಿದ್ದು, ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. “ಜೀವಾವಧಿ ಶಿಕ್ಷೆಗೊಳಗಾಗಿ ಮುಂಚಿತವಾಗಿಯೇ ಬಿಡುಗಡೆಗೊಂಡ ಅಪರಾಧಿಗಳು ನ್ಯಾಯಪೀಠವನ್ನು ತಪ್ಪಿಸಲು ಸತತ ನ್ಯಾಯಾಲಯದ ವಿಚಾರಣೆಗಳಲ್ಲಿ ಕಾರ್ಯವಿಧಾನದ ಆಕ್ಷೇಪಣೆಗಳ ಜಟಿಲತೆಯನ್ನು ಮುಂದೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ’’ ಎಂದು ಜಸ್ಟಿಸ್ ಕೆ.ಎಂ.ಜೋಸೆಫ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಸಮಯ ಮೀರಿ ಹೋಗುತ್ತಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿರುವ ಜಸ್ಟಿಸ್ ಜೋಸೆಫ್ ಇನ್ನು ಕೆಲವೇ ದಿನಗಳಲ್ಲಿ ನಿವೃತ್ತಿ ಹೊಂದುತ್ತಿದ್ದಾರೆ.

”ಏನಾಗುತ್ತಿದೆ ಎಂಬುದು ನಿಮಗೆ ಹೆಚ್ಚು ಸ್ಪಷ್ಟವಾಗಿರಬೇಕು ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ನನಗೆ ಸಮಸ್ಯೆಯೆಂದರೆ ನಾನು ಜೂನ್ 16 ರಂದು ನಿವೃತ್ತನಾಗುತ್ತಿದ್ದೇನೆ, ಆದರೆ ನನ್ನ ಕೊನೆಯ ಕೆಲಸದ ದಿನವು ಮೇ 19 ಆಗಿದೆ [ಜುಲೈ 2 ರವರೆಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ನ್ಯಾಯಾಲಯ ತೆರೆದಿರುವುದಿಲ್ಲ.]… ನಾವು ವಿಷಯವನ್ನು ಕೇಳಲು ಅವರು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಹೆಚ್ಚು ಸ್ಪಷ್ಟವಾಗಿದೆ” ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠದಲ್ಲಿನ ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ. ಬಿಸ್ಕಿಸ್ ಅವರನ್ನು ಪ್ರತಿನಿಧಿಸುವ ವಕೀಲೆ ಶೋಭಾ ಗುಪ್ತಾ ಅವರನ್ನು ಉದ್ದೇಶಿಸಿ ಈ ಮಾತುಗಳನ್ನು ಆಡಿದ್ದಾರೆ.

ಬಿಡುಗಡೆಯಾದ 11 ಅಪರಾಧಿಗಳ ಪರ ವಕೀಲರು ಸಲ್ಲಿಸಿದ ಮನವಿಗಳ ಸಂದರ್ಭದಲ್ಲಿ ನ್ಯಾಯಾಧೀಶರ ಮೌಖಿಕ ಹೇಳಿಕೆ ಬಿದ್ದಿತು. ಪ್ರಕರಣದ ನೋಟಿಸ್ ನಮಗೆ ಬಂದಿಲ್ಲ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಜೀವಾವಧಿ ಶಿಕ್ಷೆಯನ್ನು ವಾಪಸ್ ತೆಗೆದುಕೊಳ್ಳಲು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಗುಜರಾತ್ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳಿಗೆ ಅಫಿಡವಿಟ್ಗಳನ್ನು ಸಲ್ಲಿಸಲು ಕನಿಷ್ಠ ಎರಡು ವಾರಗಳ ಅವಕಾಶವನ್ನು ಆರೋಪಿಗಳು ಕೋರಿದ್ದಾರೆ.

“ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಹೆಚ್ಚು ಸ್ಪಷ್ಟವಾಗಿದೆ” ಎಂದು ವಕೀಲೆ ಗುಪ್ತಾ ನ್ಯಾಯಾಧೀಶರಿಗೆ ತಿಳಿಸಿದರು.

”ಹಾಗಾದರೆ ಅವರು ಯಶಸ್ವಿಯಾಗಬಾರದು ಎಂಬುದು ಹೆಚ್ಚು ಮುಖ್ಯವಾಗಿದೆ … ಅಂತಹ ಬಿದಿರಿನ ಜೋಲಿ ತಂತ್ರಗಳನ್ನು ನ್ಯಾಯಾಲಯದಲ್ಲಿ ಬಳಸಬಾರದು” ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಪೀಠವನ್ನು ಉದ್ದೇಶಿಸಿ ಹೇಳಿದರು.

ಬಿಡುಗಡೆಯಾದ ಅಪರಾಧಿಗಳು “ಈ ರೀತಿಯಲ್ಲಿ ನ್ಯಾಯಕ್ಕೆ ಅಡ್ಡಿಪಡಿಸಲು ಬಿಡಬಾರದು” ಎಂದು ವಕೀಲೆ ವೃಂದಾ ಗ್ರೋವರ್ ವಾದಿಸಿದರು.

”ಪ್ರತಿಕ್ರಿಯೆಯನ್ನು ಸಲ್ಲಿಸಲು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದೇವೆ. ಮುಂದಿನ ವಿಚಾರಣೆಯ ದಿನಾಂಕವು ಮೇ 17  ಆಗಿದೆ. ಈ ಜನರು ಈಗಾಗಲೇ ಜೈಲಿನಿಂದ ಹೊರಬಂದಿದ್ದಾರೆ. ನಿಮ್ಮ ವಿಷಯದಲ್ಲಿ ಅರ್ಹತೆ ಇದ್ದರೆ, ನೀವು ಯಶಸ್ವಿಯಾಗುತ್ತೀರಿ. ಯಾವುದೇ ಅರ್ಹತೆ ಇಲ್ಲದಿದ್ದರೆ, ನೀವು ಯಶಸ್ವಿಯಾಗುವುದಿಲ್ಲ … ಈ ವಿಷಯವು ಮೊದಲೇ ನನ್ನ ನ್ಯಾಯಾಲಯಕ್ಕೆ ಬಂದಿದ್ದರೆ ಬೇರೆ ತಿರುವು ತೆಗೆದುಕೊಳ್ಳುತ್ತಿತ್ತು… ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಅಪರಾಧಿಗಳನ್ನು ಆಗಸ್ಟ್ 15, 2022 ರಂದು ಬಿಡುಗಡೆ ಮಾಡಲಾಗಿತ್ತು.

ಈ ಅರ್ಜಿಯನ್ನು ನವೆಂಬರ್ 2022 ರಲ್ಲಿ ಸಲ್ಲಿಸಲಾಗಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ. ಇದು ಡಿಸೆಂಬರ್ 13 ರಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು. ನ್ಯಾಯಮೂರ್ತಿ ತ್ರಿವೇದಿ ಅವರು ರಾಜೀನಾಮೆ ನೀಡಿದ್ದಾರೆ. ನಂತರ ಮೂರು ತಿಂಗಳ ಕಾಲ ವಿರಾಮವಿತ್ತು, ಈ ಸಂದರ್ಭದಲ್ಲಿ ಶೋಭಾ ಅವರು ಅವರು ಪ್ರಕರಣವನ್ನು ಪಟ್ಟಿ ಮಾಡುವಂತೆ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಪದೇ ಪದೇ ಪ್ರಸ್ತಾಪಿಸದ್ದಾರೆ. ಅಂತಿಮವಾಗಿ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಜೋಸೆಫ್ ಮತ್ತು ನಾಗರತ್ನ ಅವರಿಗೆ ಉಲ್ಲೇಖಿಸಲಾಯಿತು ಮತ್ತು ಮಾರ್ಚ್ 27 ರಂದು ವಿಚಾರಣೆಗೆ ಬಂದಿತು. ಪೀಠವು ಅದೇ ದಿನ ನೋಟಿಸ್ ಜಾರಿಗೊಳಿಸಿತು ಮತ್ತು ಪರಿಹಾರಕ್ಕೆ ಸಂಬಂಧಿಸಿದ ಅಧಿಕೃತ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಸರ್ಕಾರಕ್ಕೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...