Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

- Advertisement -
- Advertisement -

2002ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಅವರ ಕುಟುಂಬ ಸದಸ್ಯರ ಕೊಲೆ ಪ್ರಕರಣದ ಅಪರಾಧಿಗಳು, ನ್ಯಾಯ ಪೀಠದ ಮುಂದೆ ಹಾಜರಾಗದಿರಲು ಕಾಲವನ್ನು ಮುಂದೂಡುವ ಸಲುವಾಗಿ ಆಕ್ಷೇಪಗಳನ್ನು ಎತ್ತುತ್ತಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಬಿಲ್ಕಿಸ್ ಪ್ರಶ್ನಿಸಿದ್ದು, ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. “ಜೀವಾವಧಿ ಶಿಕ್ಷೆಗೊಳಗಾಗಿ ಮುಂಚಿತವಾಗಿಯೇ ಬಿಡುಗಡೆಗೊಂಡ ಅಪರಾಧಿಗಳು ನ್ಯಾಯಪೀಠವನ್ನು ತಪ್ಪಿಸಲು ಸತತ ನ್ಯಾಯಾಲಯದ ವಿಚಾರಣೆಗಳಲ್ಲಿ ಕಾರ್ಯವಿಧಾನದ ಆಕ್ಷೇಪಣೆಗಳ ಜಟಿಲತೆಯನ್ನು ಮುಂದೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ’’ ಎಂದು ಜಸ್ಟಿಸ್ ಕೆ.ಎಂ.ಜೋಸೆಫ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಸಮಯ ಮೀರಿ ಹೋಗುತ್ತಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿರುವ ಜಸ್ಟಿಸ್ ಜೋಸೆಫ್ ಇನ್ನು ಕೆಲವೇ ದಿನಗಳಲ್ಲಿ ನಿವೃತ್ತಿ ಹೊಂದುತ್ತಿದ್ದಾರೆ.

”ಏನಾಗುತ್ತಿದೆ ಎಂಬುದು ನಿಮಗೆ ಹೆಚ್ಚು ಸ್ಪಷ್ಟವಾಗಿರಬೇಕು ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ನನಗೆ ಸಮಸ್ಯೆಯೆಂದರೆ ನಾನು ಜೂನ್ 16 ರಂದು ನಿವೃತ್ತನಾಗುತ್ತಿದ್ದೇನೆ, ಆದರೆ ನನ್ನ ಕೊನೆಯ ಕೆಲಸದ ದಿನವು ಮೇ 19 ಆಗಿದೆ [ಜುಲೈ 2 ರವರೆಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ನ್ಯಾಯಾಲಯ ತೆರೆದಿರುವುದಿಲ್ಲ.]… ನಾವು ವಿಷಯವನ್ನು ಕೇಳಲು ಅವರು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಹೆಚ್ಚು ಸ್ಪಷ್ಟವಾಗಿದೆ” ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠದಲ್ಲಿನ ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ. ಬಿಸ್ಕಿಸ್ ಅವರನ್ನು ಪ್ರತಿನಿಧಿಸುವ ವಕೀಲೆ ಶೋಭಾ ಗುಪ್ತಾ ಅವರನ್ನು ಉದ್ದೇಶಿಸಿ ಈ ಮಾತುಗಳನ್ನು ಆಡಿದ್ದಾರೆ.

ಬಿಡುಗಡೆಯಾದ 11 ಅಪರಾಧಿಗಳ ಪರ ವಕೀಲರು ಸಲ್ಲಿಸಿದ ಮನವಿಗಳ ಸಂದರ್ಭದಲ್ಲಿ ನ್ಯಾಯಾಧೀಶರ ಮೌಖಿಕ ಹೇಳಿಕೆ ಬಿದ್ದಿತು. ಪ್ರಕರಣದ ನೋಟಿಸ್ ನಮಗೆ ಬಂದಿಲ್ಲ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಜೀವಾವಧಿ ಶಿಕ್ಷೆಯನ್ನು ವಾಪಸ್ ತೆಗೆದುಕೊಳ್ಳಲು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಗುಜರಾತ್ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳಿಗೆ ಅಫಿಡವಿಟ್ಗಳನ್ನು ಸಲ್ಲಿಸಲು ಕನಿಷ್ಠ ಎರಡು ವಾರಗಳ ಅವಕಾಶವನ್ನು ಆರೋಪಿಗಳು ಕೋರಿದ್ದಾರೆ.

“ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಹೆಚ್ಚು ಸ್ಪಷ್ಟವಾಗಿದೆ” ಎಂದು ವಕೀಲೆ ಗುಪ್ತಾ ನ್ಯಾಯಾಧೀಶರಿಗೆ ತಿಳಿಸಿದರು.

”ಹಾಗಾದರೆ ಅವರು ಯಶಸ್ವಿಯಾಗಬಾರದು ಎಂಬುದು ಹೆಚ್ಚು ಮುಖ್ಯವಾಗಿದೆ … ಅಂತಹ ಬಿದಿರಿನ ಜೋಲಿ ತಂತ್ರಗಳನ್ನು ನ್ಯಾಯಾಲಯದಲ್ಲಿ ಬಳಸಬಾರದು” ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಪೀಠವನ್ನು ಉದ್ದೇಶಿಸಿ ಹೇಳಿದರು.

ಬಿಡುಗಡೆಯಾದ ಅಪರಾಧಿಗಳು “ಈ ರೀತಿಯಲ್ಲಿ ನ್ಯಾಯಕ್ಕೆ ಅಡ್ಡಿಪಡಿಸಲು ಬಿಡಬಾರದು” ಎಂದು ವಕೀಲೆ ವೃಂದಾ ಗ್ರೋವರ್ ವಾದಿಸಿದರು.

”ಪ್ರತಿಕ್ರಿಯೆಯನ್ನು ಸಲ್ಲಿಸಲು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದೇವೆ. ಮುಂದಿನ ವಿಚಾರಣೆಯ ದಿನಾಂಕವು ಮೇ 17  ಆಗಿದೆ. ಈ ಜನರು ಈಗಾಗಲೇ ಜೈಲಿನಿಂದ ಹೊರಬಂದಿದ್ದಾರೆ. ನಿಮ್ಮ ವಿಷಯದಲ್ಲಿ ಅರ್ಹತೆ ಇದ್ದರೆ, ನೀವು ಯಶಸ್ವಿಯಾಗುತ್ತೀರಿ. ಯಾವುದೇ ಅರ್ಹತೆ ಇಲ್ಲದಿದ್ದರೆ, ನೀವು ಯಶಸ್ವಿಯಾಗುವುದಿಲ್ಲ … ಈ ವಿಷಯವು ಮೊದಲೇ ನನ್ನ ನ್ಯಾಯಾಲಯಕ್ಕೆ ಬಂದಿದ್ದರೆ ಬೇರೆ ತಿರುವು ತೆಗೆದುಕೊಳ್ಳುತ್ತಿತ್ತು… ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಅಪರಾಧಿಗಳನ್ನು ಆಗಸ್ಟ್ 15, 2022 ರಂದು ಬಿಡುಗಡೆ ಮಾಡಲಾಗಿತ್ತು.

ಈ ಅರ್ಜಿಯನ್ನು ನವೆಂಬರ್ 2022 ರಲ್ಲಿ ಸಲ್ಲಿಸಲಾಗಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ. ಇದು ಡಿಸೆಂಬರ್ 13 ರಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು. ನ್ಯಾಯಮೂರ್ತಿ ತ್ರಿವೇದಿ ಅವರು ರಾಜೀನಾಮೆ ನೀಡಿದ್ದಾರೆ. ನಂತರ ಮೂರು ತಿಂಗಳ ಕಾಲ ವಿರಾಮವಿತ್ತು, ಈ ಸಂದರ್ಭದಲ್ಲಿ ಶೋಭಾ ಅವರು ಅವರು ಪ್ರಕರಣವನ್ನು ಪಟ್ಟಿ ಮಾಡುವಂತೆ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಪದೇ ಪದೇ ಪ್ರಸ್ತಾಪಿಸದ್ದಾರೆ. ಅಂತಿಮವಾಗಿ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಜೋಸೆಫ್ ಮತ್ತು ನಾಗರತ್ನ ಅವರಿಗೆ ಉಲ್ಲೇಖಿಸಲಾಯಿತು ಮತ್ತು ಮಾರ್ಚ್ 27 ರಂದು ವಿಚಾರಣೆಗೆ ಬಂದಿತು. ಪೀಠವು ಅದೇ ದಿನ ನೋಟಿಸ್ ಜಾರಿಗೊಳಿಸಿತು ಮತ್ತು ಪರಿಹಾರಕ್ಕೆ ಸಂಬಂಧಿಸಿದ ಅಧಿಕೃತ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಸರ್ಕಾರಕ್ಕೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...