Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

- Advertisement -
- Advertisement -

2002ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಅವರ ಕುಟುಂಬ ಸದಸ್ಯರ ಕೊಲೆ ಪ್ರಕರಣದ ಅಪರಾಧಿಗಳು, ನ್ಯಾಯ ಪೀಠದ ಮುಂದೆ ಹಾಜರಾಗದಿರಲು ಕಾಲವನ್ನು ಮುಂದೂಡುವ ಸಲುವಾಗಿ ಆಕ್ಷೇಪಗಳನ್ನು ಎತ್ತುತ್ತಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಬಿಲ್ಕಿಸ್ ಪ್ರಶ್ನಿಸಿದ್ದು, ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. “ಜೀವಾವಧಿ ಶಿಕ್ಷೆಗೊಳಗಾಗಿ ಮುಂಚಿತವಾಗಿಯೇ ಬಿಡುಗಡೆಗೊಂಡ ಅಪರಾಧಿಗಳು ನ್ಯಾಯಪೀಠವನ್ನು ತಪ್ಪಿಸಲು ಸತತ ನ್ಯಾಯಾಲಯದ ವಿಚಾರಣೆಗಳಲ್ಲಿ ಕಾರ್ಯವಿಧಾನದ ಆಕ್ಷೇಪಣೆಗಳ ಜಟಿಲತೆಯನ್ನು ಮುಂದೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ’’ ಎಂದು ಜಸ್ಟಿಸ್ ಕೆ.ಎಂ.ಜೋಸೆಫ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಸಮಯ ಮೀರಿ ಹೋಗುತ್ತಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿರುವ ಜಸ್ಟಿಸ್ ಜೋಸೆಫ್ ಇನ್ನು ಕೆಲವೇ ದಿನಗಳಲ್ಲಿ ನಿವೃತ್ತಿ ಹೊಂದುತ್ತಿದ್ದಾರೆ.

”ಏನಾಗುತ್ತಿದೆ ಎಂಬುದು ನಿಮಗೆ ಹೆಚ್ಚು ಸ್ಪಷ್ಟವಾಗಿರಬೇಕು ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ನನಗೆ ಸಮಸ್ಯೆಯೆಂದರೆ ನಾನು ಜೂನ್ 16 ರಂದು ನಿವೃತ್ತನಾಗುತ್ತಿದ್ದೇನೆ, ಆದರೆ ನನ್ನ ಕೊನೆಯ ಕೆಲಸದ ದಿನವು ಮೇ 19 ಆಗಿದೆ [ಜುಲೈ 2 ರವರೆಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ನ್ಯಾಯಾಲಯ ತೆರೆದಿರುವುದಿಲ್ಲ.]… ನಾವು ವಿಷಯವನ್ನು ಕೇಳಲು ಅವರು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಹೆಚ್ಚು ಸ್ಪಷ್ಟವಾಗಿದೆ” ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠದಲ್ಲಿನ ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ. ಬಿಸ್ಕಿಸ್ ಅವರನ್ನು ಪ್ರತಿನಿಧಿಸುವ ವಕೀಲೆ ಶೋಭಾ ಗುಪ್ತಾ ಅವರನ್ನು ಉದ್ದೇಶಿಸಿ ಈ ಮಾತುಗಳನ್ನು ಆಡಿದ್ದಾರೆ.

ಬಿಡುಗಡೆಯಾದ 11 ಅಪರಾಧಿಗಳ ಪರ ವಕೀಲರು ಸಲ್ಲಿಸಿದ ಮನವಿಗಳ ಸಂದರ್ಭದಲ್ಲಿ ನ್ಯಾಯಾಧೀಶರ ಮೌಖಿಕ ಹೇಳಿಕೆ ಬಿದ್ದಿತು. ಪ್ರಕರಣದ ನೋಟಿಸ್ ನಮಗೆ ಬಂದಿಲ್ಲ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಜೀವಾವಧಿ ಶಿಕ್ಷೆಯನ್ನು ವಾಪಸ್ ತೆಗೆದುಕೊಳ್ಳಲು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಗುಜರಾತ್ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳಿಗೆ ಅಫಿಡವಿಟ್ಗಳನ್ನು ಸಲ್ಲಿಸಲು ಕನಿಷ್ಠ ಎರಡು ವಾರಗಳ ಅವಕಾಶವನ್ನು ಆರೋಪಿಗಳು ಕೋರಿದ್ದಾರೆ.

“ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಹೆಚ್ಚು ಸ್ಪಷ್ಟವಾಗಿದೆ” ಎಂದು ವಕೀಲೆ ಗುಪ್ತಾ ನ್ಯಾಯಾಧೀಶರಿಗೆ ತಿಳಿಸಿದರು.

”ಹಾಗಾದರೆ ಅವರು ಯಶಸ್ವಿಯಾಗಬಾರದು ಎಂಬುದು ಹೆಚ್ಚು ಮುಖ್ಯವಾಗಿದೆ … ಅಂತಹ ಬಿದಿರಿನ ಜೋಲಿ ತಂತ್ರಗಳನ್ನು ನ್ಯಾಯಾಲಯದಲ್ಲಿ ಬಳಸಬಾರದು” ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಪೀಠವನ್ನು ಉದ್ದೇಶಿಸಿ ಹೇಳಿದರು.

ಬಿಡುಗಡೆಯಾದ ಅಪರಾಧಿಗಳು “ಈ ರೀತಿಯಲ್ಲಿ ನ್ಯಾಯಕ್ಕೆ ಅಡ್ಡಿಪಡಿಸಲು ಬಿಡಬಾರದು” ಎಂದು ವಕೀಲೆ ವೃಂದಾ ಗ್ರೋವರ್ ವಾದಿಸಿದರು.

”ಪ್ರತಿಕ್ರಿಯೆಯನ್ನು ಸಲ್ಲಿಸಲು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದೇವೆ. ಮುಂದಿನ ವಿಚಾರಣೆಯ ದಿನಾಂಕವು ಮೇ 17  ಆಗಿದೆ. ಈ ಜನರು ಈಗಾಗಲೇ ಜೈಲಿನಿಂದ ಹೊರಬಂದಿದ್ದಾರೆ. ನಿಮ್ಮ ವಿಷಯದಲ್ಲಿ ಅರ್ಹತೆ ಇದ್ದರೆ, ನೀವು ಯಶಸ್ವಿಯಾಗುತ್ತೀರಿ. ಯಾವುದೇ ಅರ್ಹತೆ ಇಲ್ಲದಿದ್ದರೆ, ನೀವು ಯಶಸ್ವಿಯಾಗುವುದಿಲ್ಲ … ಈ ವಿಷಯವು ಮೊದಲೇ ನನ್ನ ನ್ಯಾಯಾಲಯಕ್ಕೆ ಬಂದಿದ್ದರೆ ಬೇರೆ ತಿರುವು ತೆಗೆದುಕೊಳ್ಳುತ್ತಿತ್ತು… ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಅಪರಾಧಿಗಳನ್ನು ಆಗಸ್ಟ್ 15, 2022 ರಂದು ಬಿಡುಗಡೆ ಮಾಡಲಾಗಿತ್ತು.

ಈ ಅರ್ಜಿಯನ್ನು ನವೆಂಬರ್ 2022 ರಲ್ಲಿ ಸಲ್ಲಿಸಲಾಗಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ. ಇದು ಡಿಸೆಂಬರ್ 13 ರಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು. ನ್ಯಾಯಮೂರ್ತಿ ತ್ರಿವೇದಿ ಅವರು ರಾಜೀನಾಮೆ ನೀಡಿದ್ದಾರೆ. ನಂತರ ಮೂರು ತಿಂಗಳ ಕಾಲ ವಿರಾಮವಿತ್ತು, ಈ ಸಂದರ್ಭದಲ್ಲಿ ಶೋಭಾ ಅವರು ಅವರು ಪ್ರಕರಣವನ್ನು ಪಟ್ಟಿ ಮಾಡುವಂತೆ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಪದೇ ಪದೇ ಪ್ರಸ್ತಾಪಿಸದ್ದಾರೆ. ಅಂತಿಮವಾಗಿ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಜೋಸೆಫ್ ಮತ್ತು ನಾಗರತ್ನ ಅವರಿಗೆ ಉಲ್ಲೇಖಿಸಲಾಯಿತು ಮತ್ತು ಮಾರ್ಚ್ 27 ರಂದು ವಿಚಾರಣೆಗೆ ಬಂದಿತು. ಪೀಠವು ಅದೇ ದಿನ ನೋಟಿಸ್ ಜಾರಿಗೊಳಿಸಿತು ಮತ್ತು ಪರಿಹಾರಕ್ಕೆ ಸಂಬಂಧಿಸಿದ ಅಧಿಕೃತ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಸರ್ಕಾರಕ್ಕೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...