Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

- Advertisement -
- Advertisement -

2002ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಅವರ ಕುಟುಂಬ ಸದಸ್ಯರ ಕೊಲೆ ಪ್ರಕರಣದ ಅಪರಾಧಿಗಳು, ನ್ಯಾಯ ಪೀಠದ ಮುಂದೆ ಹಾಜರಾಗದಿರಲು ಕಾಲವನ್ನು ಮುಂದೂಡುವ ಸಲುವಾಗಿ ಆಕ್ಷೇಪಗಳನ್ನು ಎತ್ತುತ್ತಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಬಿಲ್ಕಿಸ್ ಪ್ರಶ್ನಿಸಿದ್ದು, ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. “ಜೀವಾವಧಿ ಶಿಕ್ಷೆಗೊಳಗಾಗಿ ಮುಂಚಿತವಾಗಿಯೇ ಬಿಡುಗಡೆಗೊಂಡ ಅಪರಾಧಿಗಳು ನ್ಯಾಯಪೀಠವನ್ನು ತಪ್ಪಿಸಲು ಸತತ ನ್ಯಾಯಾಲಯದ ವಿಚಾರಣೆಗಳಲ್ಲಿ ಕಾರ್ಯವಿಧಾನದ ಆಕ್ಷೇಪಣೆಗಳ ಜಟಿಲತೆಯನ್ನು ಮುಂದೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ’’ ಎಂದು ಜಸ್ಟಿಸ್ ಕೆ.ಎಂ.ಜೋಸೆಫ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಸಮಯ ಮೀರಿ ಹೋಗುತ್ತಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿರುವ ಜಸ್ಟಿಸ್ ಜೋಸೆಫ್ ಇನ್ನು ಕೆಲವೇ ದಿನಗಳಲ್ಲಿ ನಿವೃತ್ತಿ ಹೊಂದುತ್ತಿದ್ದಾರೆ.

”ಏನಾಗುತ್ತಿದೆ ಎಂಬುದು ನಿಮಗೆ ಹೆಚ್ಚು ಸ್ಪಷ್ಟವಾಗಿರಬೇಕು ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ನನಗೆ ಸಮಸ್ಯೆಯೆಂದರೆ ನಾನು ಜೂನ್ 16 ರಂದು ನಿವೃತ್ತನಾಗುತ್ತಿದ್ದೇನೆ, ಆದರೆ ನನ್ನ ಕೊನೆಯ ಕೆಲಸದ ದಿನವು ಮೇ 19 ಆಗಿದೆ [ಜುಲೈ 2 ರವರೆಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ನ್ಯಾಯಾಲಯ ತೆರೆದಿರುವುದಿಲ್ಲ.]… ನಾವು ವಿಷಯವನ್ನು ಕೇಳಲು ಅವರು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಹೆಚ್ಚು ಸ್ಪಷ್ಟವಾಗಿದೆ” ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠದಲ್ಲಿನ ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ. ಬಿಸ್ಕಿಸ್ ಅವರನ್ನು ಪ್ರತಿನಿಧಿಸುವ ವಕೀಲೆ ಶೋಭಾ ಗುಪ್ತಾ ಅವರನ್ನು ಉದ್ದೇಶಿಸಿ ಈ ಮಾತುಗಳನ್ನು ಆಡಿದ್ದಾರೆ.

ಬಿಡುಗಡೆಯಾದ 11 ಅಪರಾಧಿಗಳ ಪರ ವಕೀಲರು ಸಲ್ಲಿಸಿದ ಮನವಿಗಳ ಸಂದರ್ಭದಲ್ಲಿ ನ್ಯಾಯಾಧೀಶರ ಮೌಖಿಕ ಹೇಳಿಕೆ ಬಿದ್ದಿತು. ಪ್ರಕರಣದ ನೋಟಿಸ್ ನಮಗೆ ಬಂದಿಲ್ಲ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಜೀವಾವಧಿ ಶಿಕ್ಷೆಯನ್ನು ವಾಪಸ್ ತೆಗೆದುಕೊಳ್ಳಲು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಗುಜರಾತ್ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳಿಗೆ ಅಫಿಡವಿಟ್ಗಳನ್ನು ಸಲ್ಲಿಸಲು ಕನಿಷ್ಠ ಎರಡು ವಾರಗಳ ಅವಕಾಶವನ್ನು ಆರೋಪಿಗಳು ಕೋರಿದ್ದಾರೆ.

“ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಹೆಚ್ಚು ಸ್ಪಷ್ಟವಾಗಿದೆ” ಎಂದು ವಕೀಲೆ ಗುಪ್ತಾ ನ್ಯಾಯಾಧೀಶರಿಗೆ ತಿಳಿಸಿದರು.

”ಹಾಗಾದರೆ ಅವರು ಯಶಸ್ವಿಯಾಗಬಾರದು ಎಂಬುದು ಹೆಚ್ಚು ಮುಖ್ಯವಾಗಿದೆ … ಅಂತಹ ಬಿದಿರಿನ ಜೋಲಿ ತಂತ್ರಗಳನ್ನು ನ್ಯಾಯಾಲಯದಲ್ಲಿ ಬಳಸಬಾರದು” ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಪೀಠವನ್ನು ಉದ್ದೇಶಿಸಿ ಹೇಳಿದರು.

ಬಿಡುಗಡೆಯಾದ ಅಪರಾಧಿಗಳು “ಈ ರೀತಿಯಲ್ಲಿ ನ್ಯಾಯಕ್ಕೆ ಅಡ್ಡಿಪಡಿಸಲು ಬಿಡಬಾರದು” ಎಂದು ವಕೀಲೆ ವೃಂದಾ ಗ್ರೋವರ್ ವಾದಿಸಿದರು.

”ಪ್ರತಿಕ್ರಿಯೆಯನ್ನು ಸಲ್ಲಿಸಲು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದೇವೆ. ಮುಂದಿನ ವಿಚಾರಣೆಯ ದಿನಾಂಕವು ಮೇ 17  ಆಗಿದೆ. ಈ ಜನರು ಈಗಾಗಲೇ ಜೈಲಿನಿಂದ ಹೊರಬಂದಿದ್ದಾರೆ. ನಿಮ್ಮ ವಿಷಯದಲ್ಲಿ ಅರ್ಹತೆ ಇದ್ದರೆ, ನೀವು ಯಶಸ್ವಿಯಾಗುತ್ತೀರಿ. ಯಾವುದೇ ಅರ್ಹತೆ ಇಲ್ಲದಿದ್ದರೆ, ನೀವು ಯಶಸ್ವಿಯಾಗುವುದಿಲ್ಲ … ಈ ವಿಷಯವು ಮೊದಲೇ ನನ್ನ ನ್ಯಾಯಾಲಯಕ್ಕೆ ಬಂದಿದ್ದರೆ ಬೇರೆ ತಿರುವು ತೆಗೆದುಕೊಳ್ಳುತ್ತಿತ್ತು… ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಅಪರಾಧಿಗಳನ್ನು ಆಗಸ್ಟ್ 15, 2022 ರಂದು ಬಿಡುಗಡೆ ಮಾಡಲಾಗಿತ್ತು.

ಈ ಅರ್ಜಿಯನ್ನು ನವೆಂಬರ್ 2022 ರಲ್ಲಿ ಸಲ್ಲಿಸಲಾಗಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ. ಇದು ಡಿಸೆಂಬರ್ 13 ರಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು. ನ್ಯಾಯಮೂರ್ತಿ ತ್ರಿವೇದಿ ಅವರು ರಾಜೀನಾಮೆ ನೀಡಿದ್ದಾರೆ. ನಂತರ ಮೂರು ತಿಂಗಳ ಕಾಲ ವಿರಾಮವಿತ್ತು, ಈ ಸಂದರ್ಭದಲ್ಲಿ ಶೋಭಾ ಅವರು ಅವರು ಪ್ರಕರಣವನ್ನು ಪಟ್ಟಿ ಮಾಡುವಂತೆ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಪದೇ ಪದೇ ಪ್ರಸ್ತಾಪಿಸದ್ದಾರೆ. ಅಂತಿಮವಾಗಿ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಜೋಸೆಫ್ ಮತ್ತು ನಾಗರತ್ನ ಅವರಿಗೆ ಉಲ್ಲೇಖಿಸಲಾಯಿತು ಮತ್ತು ಮಾರ್ಚ್ 27 ರಂದು ವಿಚಾರಣೆಗೆ ಬಂದಿತು. ಪೀಠವು ಅದೇ ದಿನ ನೋಟಿಸ್ ಜಾರಿಗೊಳಿಸಿತು ಮತ್ತು ಪರಿಹಾರಕ್ಕೆ ಸಂಬಂಧಿಸಿದ ಅಧಿಕೃತ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಸರ್ಕಾರಕ್ಕೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...