Homeಮುಖಪುಟಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಇಂದು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ತೀರ್ಪು ನೀಡಿತ್ತು, ಈ ಐತಿಹಾಸಿಕ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು  ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ, ಆದರೆ ವಿಜಯದ ಸಂತಸದಲ್ಲಿಲ್ಲ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿದೆ.

ಕ್ಷಮಾಧಾನ ನೀಡುವ ವಿಷಯದಲ್ಲಿ ಗುಜರಾತ್ ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದರಿಂದ ಕುಟುಂಬಕ್ಕೆ ನಿರಾಳವಾಗಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯದ ಪ್ರಕ್ರಿಯೆಗಳು ಮುಕ್ತಾಯಗೊಳ್ಳದ ಕಾರಣ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕುಟುಂಬ ನಿರಾಕರಿಸಿದೆ.

ಬಿಲ್ಕಿಸ್‌ಗೆ ನಿಕಟವಾದ ಮೂಲವೊಂದು ಹೇಳುವಂತೆ, ಸುಪ್ರೀಂಕೋರ್ಟ್‌ ಆದೇಶವು ನ್ಯಾಯಾಂಗದಲ್ಲಿ ನಮ್ಮ ನಂಬಿಕೆಯನ್ನು ಮರುಸ್ಥಾಪಿಸಿದೆ ಮತ್ತು ನ್ಯಾಯವು ಜೀವಂತವಾಗಿದೆ ಎಂದು ನಮಗೆ ಸಮಾಧಾನವನ್ನು ನೀಡುತ್ತದೆ. ಆದರೆ ನಾವು ಇನ್ನೂ ವಿಜಯದ ಸಂತಸದಲ್ಲಿಲ್ಲ, ಏಕೆಂದರೆ ಅಪರಾಧಿಗಳು ಬೇರೆ ರಾಜ್ಯದಿಂದ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಾಗುತ್ತಾರೆ. ಅಪರಾಧಿಗಳು ಕ್ಷಮಾಪಣೆಗಾಗಿ ಅರ್ಜಿ ಸಲ್ಲಿಸುವಾಗ ಜೈಲಿನ ಹೊರಗೆ ಉಳಿಯುವ ಬಗ್ಗೆ ಅಪರಾಧಿಗಳ ಮನವಿಯನ್ನು ನ್ಯಾಯಾಲಯವು ಪರಿಗಣಿಸುತ್ತದೆಯೇ ಎಂಬುದು ಸದ್ಯಕ್ಕೆ ನಮ್ಮ ಮನಸ್ಸಿನಲ್ಲಿರುವ ಒಂದು ಸಂದೇಹವಾಗಿದೆ. ಅವರನ್ನು ಮತ್ತೆ ಜೈಲಿಗೆ ಕಳುಹಿಸುವವರೆಗೂ ನಮ್ಮ ಹೋರಾಟ ಕೊನೆಗೊಂಡಂತೆ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 2022ರಲ್ಲಿ ಅಪರಾಧಿಗಳನ್ನು ಕ್ಷಮಾದಾನದ ಮೂಲಕ ಗುಜರಾತ್‌ ಸರಕಾರ ಬಿಡುಗಡೆಗೊಳಿಸಿದ ಬಳಿಕ    ಬಿಲ್ಕಿಸ್ ಮತ್ತು ಅವರ ಕುಟುಂಬವು ಅಜ್ಞಾತ ಸ್ಥಳದಲ್ಲಿ ವಾಸಿಸುತ್ತಿದ್ದಾರೆ.

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14ಮಂದಿಯನ್ನು ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್‌ ಸರಕಾರ ಬಿಡುಗಡೆ ಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಇಂದು ಗುಜರಾತ್‌ ಸರಕಾರದ ಆದೇಶನ್ನು ರದ್ದುಗೊಳಿಸಿ, ಅಪರಾಧಿಗಳಿಗೆ ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ. 1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗುಜರಾತ್‌ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. 2002ರ ಕೋಮುಗಲಭೆಯಲ್ಲಿ ಮೃತಪಟ್ಟ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಇದನ್ನು ಓದಿ: ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...