Homeಮುಖಪುಟಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಇಂದು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ತೀರ್ಪು ನೀಡಿತ್ತು, ಈ ಐತಿಹಾಸಿಕ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು  ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ, ಆದರೆ ವಿಜಯದ ಸಂತಸದಲ್ಲಿಲ್ಲ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿದೆ.

ಕ್ಷಮಾಧಾನ ನೀಡುವ ವಿಷಯದಲ್ಲಿ ಗುಜರಾತ್ ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದರಿಂದ ಕುಟುಂಬಕ್ಕೆ ನಿರಾಳವಾಗಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯದ ಪ್ರಕ್ರಿಯೆಗಳು ಮುಕ್ತಾಯಗೊಳ್ಳದ ಕಾರಣ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕುಟುಂಬ ನಿರಾಕರಿಸಿದೆ.

ಬಿಲ್ಕಿಸ್‌ಗೆ ನಿಕಟವಾದ ಮೂಲವೊಂದು ಹೇಳುವಂತೆ, ಸುಪ್ರೀಂಕೋರ್ಟ್‌ ಆದೇಶವು ನ್ಯಾಯಾಂಗದಲ್ಲಿ ನಮ್ಮ ನಂಬಿಕೆಯನ್ನು ಮರುಸ್ಥಾಪಿಸಿದೆ ಮತ್ತು ನ್ಯಾಯವು ಜೀವಂತವಾಗಿದೆ ಎಂದು ನಮಗೆ ಸಮಾಧಾನವನ್ನು ನೀಡುತ್ತದೆ. ಆದರೆ ನಾವು ಇನ್ನೂ ವಿಜಯದ ಸಂತಸದಲ್ಲಿಲ್ಲ, ಏಕೆಂದರೆ ಅಪರಾಧಿಗಳು ಬೇರೆ ರಾಜ್ಯದಿಂದ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಾಗುತ್ತಾರೆ. ಅಪರಾಧಿಗಳು ಕ್ಷಮಾಪಣೆಗಾಗಿ ಅರ್ಜಿ ಸಲ್ಲಿಸುವಾಗ ಜೈಲಿನ ಹೊರಗೆ ಉಳಿಯುವ ಬಗ್ಗೆ ಅಪರಾಧಿಗಳ ಮನವಿಯನ್ನು ನ್ಯಾಯಾಲಯವು ಪರಿಗಣಿಸುತ್ತದೆಯೇ ಎಂಬುದು ಸದ್ಯಕ್ಕೆ ನಮ್ಮ ಮನಸ್ಸಿನಲ್ಲಿರುವ ಒಂದು ಸಂದೇಹವಾಗಿದೆ. ಅವರನ್ನು ಮತ್ತೆ ಜೈಲಿಗೆ ಕಳುಹಿಸುವವರೆಗೂ ನಮ್ಮ ಹೋರಾಟ ಕೊನೆಗೊಂಡಂತೆ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 2022ರಲ್ಲಿ ಅಪರಾಧಿಗಳನ್ನು ಕ್ಷಮಾದಾನದ ಮೂಲಕ ಗುಜರಾತ್‌ ಸರಕಾರ ಬಿಡುಗಡೆಗೊಳಿಸಿದ ಬಳಿಕ    ಬಿಲ್ಕಿಸ್ ಮತ್ತು ಅವರ ಕುಟುಂಬವು ಅಜ್ಞಾತ ಸ್ಥಳದಲ್ಲಿ ವಾಸಿಸುತ್ತಿದ್ದಾರೆ.

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14ಮಂದಿಯನ್ನು ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್‌ ಸರಕಾರ ಬಿಡುಗಡೆ ಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಇಂದು ಗುಜರಾತ್‌ ಸರಕಾರದ ಆದೇಶನ್ನು ರದ್ದುಗೊಳಿಸಿ, ಅಪರಾಧಿಗಳಿಗೆ ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ. 1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗುಜರಾತ್‌ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. 2002ರ ಕೋಮುಗಲಭೆಯಲ್ಲಿ ಮೃತಪಟ್ಟ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಇದನ್ನು ಓದಿ: ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...