Homeಮುಖಪುಟಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

- Advertisement -
- Advertisement -

2002ರ ಗುಜರಾತ್ ಗಲಭೆ ಸಂದರ್ಭದಲ್ಲಿ ಮೂರು ವರ್ಷದ ತನ್ನ ಮಗಳೂ ಸೇರಿದಂತೆ ಕುಟುಂಬದ 14 ಜನರನ್ನು ಕಳೆದುಕೊಂಡಿದ್ದ ಗರ್ಭಿಣಿ ಬಿಲ್ಕಿಸ್ ಬಾನು, ತನ್ನ ನೆರೆಹೊರೆಯ ಹಿಂದೂ ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ 11 ಜನ ಅತ್ಯಾಚಾರಿಗಳಿಗೆ ಕ್ಷಮಾಧಾನ ನೀಡಿದ್ದ ಗುಜರಾತ್ ಸರ್ಕಾರ, 2021ರಲ್ಲಿ ಬಿಡುಗಡೆ ಮಾಡಿತ್ತು. ಇದೀಗ ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಎಲ್ಲ ಅತ್ಯಾಚಾರಿಗಳನ್ನು ಮತ್ತೆ ಜೈಲಿಗಟ್ಟುವ ಆದೇಶ ನೀಡಿದ್ದು, ಬಾನು ಅವರ ಸ್ವಗ್ರಾಮದಲ್ಲಿ ಸಂತಸ ಮನೆಮಾಡಿದೆ. ಜತೆಗೆ, ಕಾಂಗ್ರೆಸ್, ಕಮ್ಯೂನಿಸ್ಟ್ ಸೇರಿದಂತೆ ವಿಪಕ್ಷ ನಾಯಕರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ.

ತೀರ್ಪು ಪ್ರಕಟವಾಗುತ್ತಿದ್ದಂತೆ ಗುಜರಾತ್‌ನ ದೇವಗಢ್ ಬರಿಯಾದಲ್ಲಿರುವ ಬಿಲ್ಕಿಸ್ ಬಾನು ಅವರ ನಿವಾಸದ ಹೊರಗೆ ಗ್ರಾಮಸ್ಥರು ಪಟಾಕಿ ಸಿಡಿಸಿದ್ದಾರೆ.

ತೀರ್ಪಿನ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ‘ಚುನಾವಣಾ ಲಾಭಕ್ಕಾಗಿ ನ್ಯಾಯವನ್ನು ಕೊಲ್ಲುವ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ. ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನ ಮೂಲಕ ದೇಶಕ್ಕೆ ‘ಅಪರಾಧಿಗಳ ಪೋಷಕ’ ಯಾರೆಂದು ಮತ್ತೊಮ್ಮೆ ಹೇಳಿದೆ. ಬಿಲ್ಕಿಸ್ ಬಾನೊ ಅವರ ಅವಿರತ ಹೋರಾಟವು ದುರಹಂಕಾರಿ ಬಿಜೆಪಿ ಸರ್ಕಾರದ ವಿರುದ್ಧ ನ್ಯಾಯ ವಿಜಯದ ಸಂಕೇತವಾಗಿದೆ’ ಎಂದು ಹೇಳಿದ್ದಾರೆ.

‘ಅಂತಿಮವಾಗಿ ನ್ಯಾಯಕ್ಕೆ ಜಯ ಸಿಕ್ಕಿದೆ. ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಆದೇಶದೊಂದಿಗೆ ಭಾರತೀಯ ಜನತಾ ಪಕ್ಷದ ಮಹಿಳಾ ವಿರೋಧಿ ನೀತಿಗಳ ಮೇಲಿನ ಮುಸುಕು ತೊಲಗಿದೆ. ಈ ಆದೇಶದ ನಂತರ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸ ಮತ್ತಷ್ಟು ಬಲಗೊಳ್ಳಲಿದೆ. ತನ್ನ ಹೋರಾಟವನ್ನು ಧೈರ್ಯದಿಂದ ಮುಂದುವರೆಸಿದ್ದಕ್ಕಾಗಿ ಬಿಲ್ಕಿಸ್ ಬಾನುಗೆ ಅಭಿನಂದನೆಗಳು’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಸಂತಸ ವ್ಯಕ್ತಪಡಿಸಿದ್ದಾರೆ.

‘ಬಿಲ್ಕಿಸ್ ಬಾನು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಗ್ಗತ್ತಲ ಕಾಲದಲ್ಲಿ ನ್ಯಾಯದ ಬೆಳಕಿನ ಬಾಗಿಲು ತೆರೆದಂತೆ. ಅತ್ಯಾಚಾರಿಗಳ ಪರ ವಕಲಾತ್ತು ವಹಿಸಿದ್ದ ಗುಜರಾತಿನ ಪ್ರಭುತ್ವಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಹೆಣ್ತನದ ಆತ್ಮಾಭಿಮಾನ ಹಾಗೂ ನ್ಯಾಯಂಗದ ನಂಬಿಕೆ ಉಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು ಸ್ವಾಗತಾರ್ಹ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಗೋದ್ರೋತ್ತರ ಹತ್ಯಾಕಾಂಡದಲ್ಲಿ ಈ ಪ್ರಕರಣವೂ ಒಂದು. ಈ ಪ್ರಕರಣದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದಲ್ಲದೆ ಆಕೆಯ ಕುಟುಂಬದ 7 ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಇಂತಹ ಹೇಯ ಕೃತ್ಯ ಎಸಗಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡುವ ಮೂಲಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕುವ ಕೆಲಸ ಮಾಡಿತ್ತು. ಒಂದು ಕಡೆ ಬೇಟಿ ಬಚಾವೋ,ಬೇಟಿ ಪಡಾವೋ., ಎಂದು ನಾಟಕ ಮಾಡುವ ಬಿಜೆಪಿಯವರು ಬಿಲ್ಕಿಸ್ ಬಾನು ಪ್ರಕರಣದಲ್ಲಿ ಆಕೆ ಒಂದು ಹೆಣ್ಣು ಮಗಳು ಎಂಬುದನ್ನು ಮರೆತು ಅಪರಾಧಿಗಳ ಬಿಡುಗಡೆಯನ್ನು ಸಂಭ್ರಮಿಸಿದ್ದರು. ಸುಪ್ರೀಂ ಕೋರ್ಟ್ನ ಇಂದಿನ ತೀರ್ಪು ನ್ಯಾಯಾಂಗ ವ್ಯವಸ್ಥೆಯ ಮೇಲೆ ಇನ್ನೂ ನಂಬಿಕೆ ಉಳಿಸಿಕೊಳ್ಳಬಹುದು ಎಂಬ ಭಾವನೆ ಮೂಡಿಸಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ನಾನು ಮೊದಲ ದಿನದಿಂದ ಹೇಳುತ್ತಿದ್ದೇನೆ, ಬಿಜೆಪಿ ಸಂತ್ರಸ್ತರ ಜೊತೆ ನಿಲ್ಲುವ ಬದಲು ಯಾವಾಗಲೂ ಈ ಘೋರ ಅಪರಾಧ ಮಾಡಿದ ದುಷ್ಕರ್ಮಿಗಳ ಜೊತೆ ನಿಂತಿದೆ. ಬಿಲ್ಕಿಸ್ ಬಾನು ಅವರು ತುಂಬಾ ಧೈರ್ಯದಿಂದ ಹೋರಾಡಿದರು. ಆಕೆಯ ಜೀವವನ್ನು ಹಳಿಯಲ್ಲಿಟ್ಟ ಅದೇ ಗುಜರಾತ್ ಸರ್ಕಾರ, ಆಕೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಮಗುವನ್ನು ಕೊಂದ ಈ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿತು. ಅವರು ಯಾವ ರಾಜಕೀಯ ಸಿದ್ಧಾಂತಕ್ಕೆ ಸೇರಿದವರಾಗಿದ್ದರೂ ಎಲ್ಲ ಅತ್ಯಾಚಾರಿಗಳಿಗೆ ಬಲವಾದ ಸಂದೇಶವನ್ನು ರವಾನಿಸಬೇಕು’ ಎಂದು ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ನ್ಯಾಯದ ಮೇಲೆ ಭರವಸೆ ಮೂಡಿಸಿದೆ; ಸಿಪಿಐ(ಎಂ):

ಬಿಲ್ಕಿಸ್ ಬಾನು ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ಆದೇಶವನ್ನು ಸೋಮವಾರ ಸ್ವಾಗತಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ಹಿರಿಯ ನಾಯಕಿ ಬೃಂದಾ ಕಾರಟ್, ‘ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನ್ಯಾಯದ ಮೇಲೆ ಭರವಸೆ ಮೂಡಿಸಿದೆ’ ಎಂದು ಹೇಳಿದ್ದಾರೆ.

‘ನಾವು ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ. ಏಕೆಂದರೆ, ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕನಿಷ್ಠ ಭರವಸೆಯನ್ನು ಮೂಡಿಸುತ್ತಿದೆ. ಮುಖ್ಯವಾಗಿ, ಈ ತೀರ್ಪು ಕೇಂದ್ರ ಸರ್ಕಾರ ಮತ್ತು ಭಾರತೀಯ ಜನತಾ ಪಕ್ಷದ ನೇತೃತ್ವದ ಗುಜರಾತ್ ಸರ್ಕಾರದ ಸಾಮರ್ಥ್ಯವನ್ನು ಸಹ ಸೂಚಿಸುತ್ತವೆ’ ಎಂದಿದ್ದಾರೆ.

‘ಅಪರಾಧಿಗಳು ಸಕಾರಣದಿಂದ ಬಿಡುಗಡೆಯಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಗುಜರಾತ್ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವನ್ನು ಹೊಂದಿದ್ದ ಅತ್ಯಾಚಾರಿಗಳಿಗೆ ಗೃಹ ಸಚಿವಾಲಯವು ಪ್ರೋತ್ಸಾಹಿಸಿ, ಬಿಡುಗಡೆಗೆ ಒಪ್ಪಿಗೆ ನೀಡಿದೆ. ಕಳೆದ ಎರಡು ದಶಕಗಳಲ್ಲೆ ಅತ್ಯಂತ ಕೆಟ್ಟ ಅಪರಾಧಗಳಲ್ಲಿ ಒಂದಾದ ಅಪರಾಧಿಗಳ ಬಿಡುಗಡೆಗಾಗಿ ಗುಜರಾತ್ ಸರ್ಕಾರ ಮಾಡಿದ ಉಲ್ಲೇಖವಾಗಿದೆ. ಆದ್ದರಿಂದ ಈ ತೀರ್ಪು ಸ್ವಾಗತಾರ್ಹ’ ಎಂದು ಕಾರಟ್ ಹೇಳಿದ್ದಾರೆ.

ಮಾರ್ಚ್ 2002 ರಲ್ಲಿ, ಗೋಧ್ರಾ ನಂತರದ ಗಲಭೆಗಳ ಸಮಯದಲ್ಲಿ, ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾದರು. ಅವರು ತಮ್ಮ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ 14 ಸದಸ್ಯರನ್ನು ಕಳೆದುಕೊಂಡರು. ಗಲಭೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ವಡೋದರಾದಲ್ಲಿ ಆಕೆಯ ಕುಟುಂಬದ ಮೇಲೆ ಗಲಭೆಕೋರರು ದಾಳಿ ನಡೆಸಿದಾಗ, ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದಳು.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...