Homeಮುಖಪುಟಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

ಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

‘ಚುನಾವಣಾ ಕಾನೂನುಗಳು (ತಿದ್ದುಪಡಿ ಮಸೂದೆ)’ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯು ಸೋಮವಾರ ಮತದಾರರ ಐಡಿ ಕಾರ್ಡ್‌ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಅನುವು ಮಾಡಿಕೊಡುವ ಚುನಾವಣಾ ಕಾನೂನುಗಳಿಗೆ ತಿದ್ದುಪಡಿಗಳನ್ನು ಅಂಗೀಕರಿಸಿದೆ. ಈ ಮಸೂದೆಯು ದೇಶದಲ್ಲಿ ನಾಗರಿಕರಲ್ಲದ ತುಂಬಾ ಜನರಿಗೆ ಮತ ಚಲಾಯಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಕ್ಷವು ಆರೋಪಿಸಿದೆ.

ಆಧಾರ್ ನಿವಾಸದ ಪುರಾವೆಯೇ ಹೊರತು ಪೌರತ್ವವಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ, ಈ ಕ್ರಮವು ನಾಗರಿಕರಲ್ಲದವರಿಗೆ ಮತದಾನದ ಹಕ್ಕನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಮತದಾನವು ಕಾನೂನುಬದ್ಧ ಹಕ್ಕು ಮತ್ತು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ತಪ್ಪು ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಎಲ್ಲಾ ನಾಗರಿಕರಿಗೆ ಸರ್ಕಾರವು ಆಧಾರ್ ಕಾರ್ಡ್‌ಗಳನ್ನು ನೀಡುತ್ತದೆ ಎಂದು ಹೇಳಿದ ತೃಣಮೂಲ ಕಾಂಗ್ರೆಸ್ ನಾಯಕ ಸೌಗತೋ ರಾಯ್, ಒಕ್ಕೂಟ ಸರ್ಕಾರವು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

AIMIM ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡುವುದು ‘ದೊಡ್ಡ ತಪ್ಪು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

“ಇದು ಪ್ರಜಾಪ್ರಭುತ್ವ ಮತ್ತು ನಾಗರಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ. ಆಧಾರ್ ಕಾರ್ಡ್‌ಗಳಲ್ಲಿ 8% ದಷ್ಟು ವ್ಯತ್ಯಾಸಗಳು ಕಂಡುಬಂದರೆ, ಮತದಾರರ ಪಟ್ಟಿಯಲ್ಲಿ ಕೇವಲ 3 ರಿಂದ 4% ದೋಷಗಳು ಕಂಡುಬಂದಿವೆ. ಮಸೂದೆ ಅಂಗೀಕಾರವಾದರೆ ಹೆಚ್ಚಿನ ಸಂಖ್ಯೆಯ ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಾರೆ” ಎಂದು ಒವೈಸಿ ಎಚ್ಚರಿಸಿದ್ದಾರೆ.

ವಿರೋಧ ಪಕ್ಷದ ಸಂಸದರ ಆಕ್ಷೇಪ ಮತ್ತು ಘೋಷಣೆಗಳ ನಡುವೆಯೇ ಈ ತಿದ್ದಪಡಿಗಳನ್ನು ಅಂಗೀಕರಿಸಲಾಗಿದೆ.

ಪ್ರತಿಪಕ್ಷಗಳ ಆಕ್ಷೇಪಣೆಗಳನ್ನು ‘ತಪ್ಪುದಾರಿ’ ಮತ್ತು ‘ಆಧಾರರಹಿತ’ ಎಂದು ಕರೆದ ಒಕ್ಕೂಸ ಸರ್ಕಾರದ ಸಚಿವ ಕಿರಣ್ ರಿಜಿಜು, ಸುಳ್ಳು ಮತದಾನ ಮತ್ತು ನಕಲಿ ಮತದಾನವನ್ನು ತಡೆಯಲು ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...